Homeಮುಖಪುಟದೇವಂಗನಾ ಕಾಳಿತಾ ಜಾಮೀನು ಪ್ರಶ್ನಿಸಿದ್ದ ದೆಹಲಿ ಸರ್ಕಾರದ ಅರ್ಜಿ ವಜಾ: ಸುಪ್ರೀಂ

ದೇವಂಗನಾ ಕಾಳಿತಾ ಜಾಮೀನು ಪ್ರಶ್ನಿಸಿದ್ದ ದೆಹಲಿ ಸರ್ಕಾರದ ಅರ್ಜಿ ವಜಾ: ಸುಪ್ರೀಂ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದೇವಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

- Advertisement -
- Advertisement -

ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣದಲ್ಲಿ ಪಿಂಜ್ರಾ ತೋಡ್‌ ಕಾರ್ಯಕರ್ತೆ ದೇವಂಗನಾ ಕಾಳಿತಾಗೆ ನೀಡಿರುವ ಜಾಮೀನು ವಿರುದ್ಧ ಎಎಪಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದೇವಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ದೆಹಲಿ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು, “ಕಾಳಿತಾ ಪ್ರಭಾವಿ ವ್ಯಕ್ತಿಯಾಗಿದ್ದು, ಜೊತೆಗೆ ಈ ಪ್ರಕರಣದಲ್ಲಿ ಪೊಲೀಸ್ ಸಾಕ್ಷಿಗಳು ಮಾತ್ರ ಇದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದಲ್ಲಿ ಕೆಲವು ಸಂರಕ್ಷಿತ ಸಾಕ್ಷಿಗಳೂ ಇದ್ದಾರೆ” ಎಂದು ವಾದಿಸಿದ್ದರು.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿ, “ಪ್ರಭಾವಿ ವ್ಯಕ್ತಿಯಾಗಿರುವುದು ಜಾಮೀನು ನಿರಾಕರಿಸುವ ನೆಲೆಯಾಗಿರಬಾರದು” ಎಂದು ಹೇಳಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ 

“ಪ್ರಭಾವಿ ವ್ಯಕ್ತಿಯಾಗಿರುವುದು ಜಾಮೀನು ನಿರಾಕರಿಸುವ ನೆಲೆಯಾಗಬಹುದೇ. ಆಕೆ ಸಾಕ್ಷಿಯನ್ನು ಹೇಗೆ ನಾಶಮಾಡಬಹುದು” ಎಂದು ನ್ಯಾಯಪೀಠವು ರಾಜು ಅವರನ್ನು ಪ್ರಶ್ನಿಸಿತು.

ಕಲಿತಾಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

ಸೆಪ್ಟೆಂಬರ್ 1 ರಂದು, ಈಶಾನ್ಯ ದೆಹಲಿಯ ಹಿಂಸಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ‌ಕಾಳಿತಾಗೆ ಜಾಮೀನು ನೀಡಿ, “ಆಕೆ ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಪ್ರಚೋದಿಸಿದ್ದಾರೆಂದು ಅಥವಾ ಶಾಂತಿಯುತ ಆಂದೋಲನದಲ್ಲಿ ದ್ವೇಷದ ಭಾಷಣ ಮಾಡಿದ್ದರು ಎಂದು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ” ಎಂದು ಹೇಳಿತ್ತು.

ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಇದನ್ನೂ ಓದಿ: JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಂತರ ಜಾಮೀನು ಸಿಕ್ಕಿದ್ದರೂ ಸಹ ದೆಹಲಿ ಪೊಲೀಸರು ಮತ್ತೊಮ್ಮೆ ಕಾಳಿತಾ ಅವರನ್ನು ಬಂಧಿಸಿದ್ದರು. ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಇಂತಹ ಕೆಲಸಗಳನ್ನು ಮಾಡುತ್ತಿತ್ತು. ಆದರೆ ದೆಹಲಿ ಸರ್ಕಾರದ ಈ ನಡೆಯಿಂದ ಅನುಮಾನ ಸೃಷ್ಟಿಯಾಗುತ್ತಿದೆ.

ಯಾವುದೋ ಕ್ಷುಲಕ ಕಾರಣ ನೀಡಿ ಕೋರ್ಟ್‌ ನೀಡಿರುವ ಜಾಮೀನನ್ನು ತಿರಸ್ಕರಿಸಬೇಕು ಎಂದು ದೆಹಲಿ ಸರ್ಕಾರ ಸಲ್ಲಿಸಿರುವ ಮನವಿ ನಿಜಕ್ಕೂ ಖಂಡನೀಯ. ಹೋರಾಟದ ಹಿನ್ನೆಲೆಯಿಂದ ಬಂದ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ಇಂತಹ ಕೆಲಸಕ್ಕೆ ಮುಂದಾಗಿರುವುದು ಅವಮಾನಕರವಾದ ಸಂಗತಿ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...