Homeಮುಖಪುಟದೇವಂಗನಾ ಕಾಳಿತಾ ಜಾಮೀನು ಪ್ರಶ್ನಿಸಿದ್ದ ದೆಹಲಿ ಸರ್ಕಾರದ ಅರ್ಜಿ ವಜಾ: ಸುಪ್ರೀಂ

ದೇವಂಗನಾ ಕಾಳಿತಾ ಜಾಮೀನು ಪ್ರಶ್ನಿಸಿದ್ದ ದೆಹಲಿ ಸರ್ಕಾರದ ಅರ್ಜಿ ವಜಾ: ಸುಪ್ರೀಂ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದೇವಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

- Advertisement -
- Advertisement -

ಈಶಾನ್ಯ ದೆಹಲಿ ಹಿಂಸಾಚಾರ ಪ್ರಕರಣದಲ್ಲಿ ಪಿಂಜ್ರಾ ತೋಡ್‌ ಕಾರ್ಯಕರ್ತೆ ದೇವಂಗನಾ ಕಾಳಿತಾಗೆ ನೀಡಿರುವ ಜಾಮೀನು ವಿರುದ್ಧ ಎಎಪಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದೇವಂಗನಾ ಕಾಳಿತಾಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ದೆಹಲಿ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌.ವಿ.ರಾಜು, “ಕಾಳಿತಾ ಪ್ರಭಾವಿ ವ್ಯಕ್ತಿಯಾಗಿದ್ದು, ಜೊತೆಗೆ ಈ ಪ್ರಕರಣದಲ್ಲಿ ಪೊಲೀಸ್ ಸಾಕ್ಷಿಗಳು ಮಾತ್ರ ಇದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದಲ್ಲಿ ಕೆಲವು ಸಂರಕ್ಷಿತ ಸಾಕ್ಷಿಗಳೂ ಇದ್ದಾರೆ” ಎಂದು ವಾದಿಸಿದ್ದರು.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ದೆಹಲಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿ, “ಪ್ರಭಾವಿ ವ್ಯಕ್ತಿಯಾಗಿರುವುದು ಜಾಮೀನು ನಿರಾಕರಿಸುವ ನೆಲೆಯಾಗಿರಬಾರದು” ಎಂದು ಹೇಳಿದೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ 

“ಪ್ರಭಾವಿ ವ್ಯಕ್ತಿಯಾಗಿರುವುದು ಜಾಮೀನು ನಿರಾಕರಿಸುವ ನೆಲೆಯಾಗಬಹುದೇ. ಆಕೆ ಸಾಕ್ಷಿಯನ್ನು ಹೇಗೆ ನಾಶಮಾಡಬಹುದು” ಎಂದು ನ್ಯಾಯಪೀಠವು ರಾಜು ಅವರನ್ನು ಪ್ರಶ್ನಿಸಿತು.

ಕಲಿತಾಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

ಸೆಪ್ಟೆಂಬರ್ 1 ರಂದು, ಈಶಾನ್ಯ ದೆಹಲಿಯ ಹಿಂಸಾಚಾರ ಪ್ರಕರಣವೊಂದರಲ್ಲಿ ಹೈಕೋರ್ಟ್ ‌ಕಾಳಿತಾಗೆ ಜಾಮೀನು ನೀಡಿ, “ಆಕೆ ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಪ್ರಚೋದಿಸಿದ್ದಾರೆಂದು ಅಥವಾ ಶಾಂತಿಯುತ ಆಂದೋಲನದಲ್ಲಿ ದ್ವೇಷದ ಭಾಷಣ ಮಾಡಿದ್ದರು ಎಂದು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ” ಎಂದು ಹೇಳಿತ್ತು.

ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಇದನ್ನೂ ಓದಿ: JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ನಂತರ ಜಾಮೀನು ಸಿಕ್ಕಿದ್ದರೂ ಸಹ ದೆಹಲಿ ಪೊಲೀಸರು ಮತ್ತೊಮ್ಮೆ ಕಾಳಿತಾ ಅವರನ್ನು ಬಂಧಿಸಿದ್ದರು. ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಇಂತಹ ಕೆಲಸಗಳನ್ನು ಮಾಡುತ್ತಿತ್ತು. ಆದರೆ ದೆಹಲಿ ಸರ್ಕಾರದ ಈ ನಡೆಯಿಂದ ಅನುಮಾನ ಸೃಷ್ಟಿಯಾಗುತ್ತಿದೆ.

ಯಾವುದೋ ಕ್ಷುಲಕ ಕಾರಣ ನೀಡಿ ಕೋರ್ಟ್‌ ನೀಡಿರುವ ಜಾಮೀನನ್ನು ತಿರಸ್ಕರಿಸಬೇಕು ಎಂದು ದೆಹಲಿ ಸರ್ಕಾರ ಸಲ್ಲಿಸಿರುವ ಮನವಿ ನಿಜಕ್ಕೂ ಖಂಡನೀಯ. ಹೋರಾಟದ ಹಿನ್ನೆಲೆಯಿಂದ ಬಂದ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ಇಂತಹ ಕೆಲಸಕ್ಕೆ ಮುಂದಾಗಿರುವುದು ಅವಮಾನಕರವಾದ ಸಂಗತಿ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...