Homeಮುಖಪುಟದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಕಳೆದ ವರ್ಷ ಫೆಬ್ರವರಿಯಲ್ಲಿ ಸಂಭವಿಸಿದ ಈಶಾನ್ಯ ದೆಹಲಿ ಗಲಭೆಯಲ್ಲಿ ಲೂಟಿ ಮತ್ತು ಕಾಂಪೌಂಡ್‌ಗೆ ಬೆಂಕಿ ಹಚ್ಚಿದ ಆರೋಪದಡಿ ದಾಖಲಾದ ಐದು ಎಫ್‌ಐಆರ್‌ಗಳಲ್ಲಿ ನಾಲ್ಕು ಅನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ.

ಒಂದೇ ಘಟನೆಗೆ ಐದು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸುವುದು ಸುಪ್ರೀಂಕೋರ್ಟ್‌‌‌ ನೀಡಿದ್ದ ಆದೇಶಗಳಿಗೆ ವಿರುದ್ಧವಾಗಿದೆ. ಆದ್ದರಿಂದ, ಪ್ರಸ್ತುರ ಪ್ರಕರಣದಲ್ಲಿ ಎರಡನೇ ಎಫ್‌ಐಆರ್‌ ಮತ್ತು ಹೊಸ ತನಿಖೆಯನ್ನು ಮಾಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಇತರ ನಾಲ್ಕು ಪ್ರಕರಣಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

“ಪ್ರಕರಣದಲ್ಲಿ ಘಟನೆಗಳು ಪ್ರತ್ಯೇಕವಾಗಿವೆ ಅಥವಾ ಅಪರಾಧಗಳು ವಿಭಿನ್ನವಾಗಿವೆ ಎಂದು ಹೇಳಲಾಗುವುದಿಲ್ಲ. ಮೊದಲೇ ಹೇಳಿದಂತೆ, ಆಯಾ ಎಫ್‌ಐಆರ್‌ಗಳಲ್ಲಿ ಸಲ್ಲಿಸಲಾದ ಚಾರ್ಜ್‌ಶೀಟ್‌ಗಳ ಪರಿಶೀಲನೆಯು ಅವುಗಳು ಹೆಚ್ಚು ಕಡಿಮೆ ಒಂದೇ ರೀತಿಯಾಗಿರುತ್ತವೆ ಮತ್ತು ಆರೋಪಿಗಳು ಕೂಡ ಒಂದೇ ಆಗಿರುತ್ತವೆ ಎಂದು ಕಾಣುತ್ತಿದೆ. ಅದೇನೇ ಇದ್ದರೂ, ಆರೋಪಿಯ ವಿರುದ್ಧ ಯಾವುದಾದರೂ ವಿಷಯ ಕಂಡುಬಂದಲ್ಲಿ ಅದನ್ನು ಎಫ್‌ಐಆರ್‌ನಲ್ಲಿ ದಾಖಲಿಸಬಹುದು” ಎಂದು ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಹೇಳಿದ್ದಾರೆ.

ಇತ್ತೀಚೆಗೆ, ಸೆಷನ್ಸ್ ನ್ಯಾಯಾಲಯವು ಫೆಬ್ರವರಿ 2020 ಹಿಂಸಾಚಾರಕ್ಕೆ ಸಂಬಂಧಿಸಿ ನಡೆಸಲಾದ ತನಿಖೆಯ ಗುಣಮಟ್ಟ ತುಂಬಾ ಕಳಪೆಯಾಗಿದೆ ಎಂದು ಹೇಳಿತ್ತು. ಅರ್ಧಂಬರ್ಧ ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿದ್ದ ಪೊಲೀಸ್ ಅಧಿಕಾರಿಗಳು ತನಿಖೆಯನ್ನು ತಾರ್ಕಿಕ ತೀರ್ಮಾನಕ್ಕೆ ತಂದಿರಲಿಲ್ಲ.

ಫೆಬ್ರವರಿ 24 ರಂದು ಪೌರತ್ವ ಕಾನೂನಿನ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಈಶಾನ್ಯ ದೆಹಲಿಯಲ್ಲಿ ಕೋಮು ಘರ್ಷಣೆಗಳು ಪ್ರಾರಂಭವಾದವು. ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿ, ಸುಮಾರು 700 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...