Homeಮುಖಪುಟದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಕಳೆದ ವರ್ಷ ಫೆಬ್ರವರಿಯಲ್ಲಿ ಸಂಭವಿಸಿದ ಈಶಾನ್ಯ ದೆಹಲಿ ಗಲಭೆಯಲ್ಲಿ ಲೂಟಿ ಮತ್ತು ಕಾಂಪೌಂಡ್‌ಗೆ ಬೆಂಕಿ ಹಚ್ಚಿದ ಆರೋಪದಡಿ ದಾಖಲಾದ ಐದು ಎಫ್‌ಐಆರ್‌ಗಳಲ್ಲಿ ನಾಲ್ಕು ಅನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ.

ಒಂದೇ ಘಟನೆಗೆ ಐದು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸುವುದು ಸುಪ್ರೀಂಕೋರ್ಟ್‌‌‌ ನೀಡಿದ್ದ ಆದೇಶಗಳಿಗೆ ವಿರುದ್ಧವಾಗಿದೆ. ಆದ್ದರಿಂದ, ಪ್ರಸ್ತುರ ಪ್ರಕರಣದಲ್ಲಿ ಎರಡನೇ ಎಫ್‌ಐಆರ್‌ ಮತ್ತು ಹೊಸ ತನಿಖೆಯನ್ನು ಮಾಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಇತರ ನಾಲ್ಕು ಪ್ರಕರಣಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

“ಪ್ರಕರಣದಲ್ಲಿ ಘಟನೆಗಳು ಪ್ರತ್ಯೇಕವಾಗಿವೆ ಅಥವಾ ಅಪರಾಧಗಳು ವಿಭಿನ್ನವಾಗಿವೆ ಎಂದು ಹೇಳಲಾಗುವುದಿಲ್ಲ. ಮೊದಲೇ ಹೇಳಿದಂತೆ, ಆಯಾ ಎಫ್‌ಐಆರ್‌ಗಳಲ್ಲಿ ಸಲ್ಲಿಸಲಾದ ಚಾರ್ಜ್‌ಶೀಟ್‌ಗಳ ಪರಿಶೀಲನೆಯು ಅವುಗಳು ಹೆಚ್ಚು ಕಡಿಮೆ ಒಂದೇ ರೀತಿಯಾಗಿರುತ್ತವೆ ಮತ್ತು ಆರೋಪಿಗಳು ಕೂಡ ಒಂದೇ ಆಗಿರುತ್ತವೆ ಎಂದು ಕಾಣುತ್ತಿದೆ. ಅದೇನೇ ಇದ್ದರೂ, ಆರೋಪಿಯ ವಿರುದ್ಧ ಯಾವುದಾದರೂ ವಿಷಯ ಕಂಡುಬಂದಲ್ಲಿ ಅದನ್ನು ಎಫ್‌ಐಆರ್‌ನಲ್ಲಿ ದಾಖಲಿಸಬಹುದು” ಎಂದು ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಹೇಳಿದ್ದಾರೆ.

ಇತ್ತೀಚೆಗೆ, ಸೆಷನ್ಸ್ ನ್ಯಾಯಾಲಯವು ಫೆಬ್ರವರಿ 2020 ಹಿಂಸಾಚಾರಕ್ಕೆ ಸಂಬಂಧಿಸಿ ನಡೆಸಲಾದ ತನಿಖೆಯ ಗುಣಮಟ್ಟ ತುಂಬಾ ಕಳಪೆಯಾಗಿದೆ ಎಂದು ಹೇಳಿತ್ತು. ಅರ್ಧಂಬರ್ಧ ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿದ್ದ ಪೊಲೀಸ್ ಅಧಿಕಾರಿಗಳು ತನಿಖೆಯನ್ನು ತಾರ್ಕಿಕ ತೀರ್ಮಾನಕ್ಕೆ ತಂದಿರಲಿಲ್ಲ.

ಫೆಬ್ರವರಿ 24 ರಂದು ಪೌರತ್ವ ಕಾನೂನಿನ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಈಶಾನ್ಯ ದೆಹಲಿಯಲ್ಲಿ ಕೋಮು ಘರ್ಷಣೆಗಳು ಪ್ರಾರಂಭವಾದವು. ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿ, ಸುಮಾರು 700 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...