Homeಕರೋನಾ ತಲ್ಲಣಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

’ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ತಡೆಯಾಜ್ಞೆ ತೆರವುಗೊಳಿಸಲು ಕೋರಿ ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ’

- Advertisement -
- Advertisement -

ನವದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮೂರನೇ ಅಲೆ ಆರಂಭವಾಗಿದೆ. ಆದರೆ ಭಯ ಬೇಡ ಸರ್ಕಾರ ಎಲ್ಲಾ ಸಿದ್ಧತೆ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ಕೆಲವು ದಿನಗಳಿಂದ ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇದನ್ನು ನಾವು ಮೂರನೇ ಅಲೆ ಎಂದು ಕರೆಯಬಹುದು. ಈ ಕುರಿತು ನಾಳೆ ಪರಿಶೀಲನಾ ಸಭೆ ನಡೆಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.

ರಾಜ್ಯದ ಜನರು ಈ ಕುರಿತು ಯಾವುದೇ ರೀತಿ ಭೀತಿಗೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಪರಿಸ್ಥಿತಿಯನ್ನು ನಿಯಮಿತವಾಗಿ ಗಮನಿಸಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತದೆ. ಆತಂಕ, ಭಯ ಬೇಡ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ’ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ…ದೆಹಲಿಗರೆ’: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ಕೊರೊನಾ ಸೋಂಕಿನಿಂದ ಜೀವಹಾನಿಯನ್ನು ತಪ್ಪಿಸಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರ ಸಿದ್ಧವಿದೆ. ಯಾವುದೇ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಯ ಹಾಸಿಗೆಗಳ ಕೊರತೆಯಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

“ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ನಮ್ಮ ನಿಯಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ನಾವು ತಡೆಯಾಜ್ಞೆಯನ್ನು ತೆರವುಗೊಳಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದರು. ಸೆಪ್ಟೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರದ ಆದೇಶವನ್ನು ತಡೆಹಿಡಿದಿದೆ.

ದೆಹಲಿಯಲ್ಲಿ ಮಂಗಳವಾರ 59,540 ಕೊರೊನಾ ಪರೀಕ್ಷೆಗಳನ್ನು ನಡೆಸಿದ್ದು, ಒಟ್ಟು 6,725 ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಒಂದೇ ದಿನ ಅತಿ ಹೆಚ್ಚು ಪ್ರಕರಣ ವರದಿಯಾಗಿತ್ತು. ಜೊತೆಗೆ 48 ಕೊರೊನಾ ಸಾವುಗಳು ದಾಖಲಾಗಿವೆ. ಕಳೆದ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚಾಗಿದೆ.

ದೀಪಾವಳಿ ಹಬ್ಬ ಹತ್ತಿರದಲ್ಲೇ ಇದ್ದು, ಹಬ್ಬದಂದು ಸಾಮಾನ್ಯವಾಗಿ ಉತ್ತುಂಗಕ್ಕೇರಿರುವ ಪಟಾಕಿ ಸಿಡಿಸುವುದನ್ನು ನಿಷೇಧಿಸುವುದರ ಬಗ್ಗೆ ರಾಜ್ಯ ಸರ್ಕಾರ ಚಿಂತಿಸುತ್ತಿದೆ. ಹಬ್ಬದ ಅವಧಿಯಲ್ಲಿ ನಗರದಲ್ಲಿ ಪಟಾಕಿ ಸಿಡಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.


ಇದನ್ನೂ ಓದಿ:ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....