Homeಮುಖಪುಟದೆಹಲಿ ಗಲಾಟೆ ಪ್ರಕರಣ: ಮಹಿಳಾ ಪೊಲೀಸ್ ಮೇಲೆ ವಕೀಲರ ಹಲ್ಲೆ ವೀಡಿಯೊ ಬಹಿರಂಗ

ದೆಹಲಿ ಗಲಾಟೆ ಪ್ರಕರಣ: ಮಹಿಳಾ ಪೊಲೀಸ್ ಮೇಲೆ ವಕೀಲರ ಹಲ್ಲೆ ವೀಡಿಯೊ ಬಹಿರಂಗ

- Advertisement -
- Advertisement -

ನವೆಂಬರ್ ೨ ರಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ಮುಂಭಾಗದಲ್ಲಿ ನಡೆದ ಪೊಲೀಸ್ ಮತ್ತು ವಕೀಲರ ನಡುವಿನ ಮಾರಾಮಾರಿಯ ವಿಡಿಯೋ ಸಂಚಲನ ಮೂಡಿಸಿತ್ತು. ಈಗ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆಯ ಮತ್ತೊಂದು ವಿಡಿಯೋ  ಬಹಿರಂಗವಾಗಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಾರ್‌ಗಳಿಗೆ ಬೆಂಕಿ ಹಚ್ಚಲಾಗಿರುವ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ವಕೀಲರ ಗುಂಪೊಂದು ಎರಗಿದ ವಿಡಿಯೋ ಇದಾಗಿದೆ.

 

ಹಜಾರಿ ಕೋರ್ಟ್‌ ಎದುರು ಬೆಂಕಿ ಹೊತ್ತಿಕೊಂಡು ಉರಿಯುತ್ತಿತ್ತು. ಸ್ಥಳಕ್ಕೆ ಮಹಿಳಾ ಪೊಲೀಸ್ ಸೇರಿದಂತೆ ಐದಾರು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಓಡಿ ಬರುತ್ತಾರೆ. ಈ ವೇಳೆ ಏಕಾಏಕಿ ಬಂದ ವಕೀಲರ ಗುಂಪು ಪೊಲೀಸರ ಮೇಲೆ ಎರಗುತ್ತದೆ. ಮಹಿಳಾ ಪೊಲೀಸ್ ಒಬ್ಬರು ವಕೀಲರಿಗೆ ಕೈಮುಗಿದು ದಾಂಧಲೆ ಮಾಡದಂತೆ ಮನವಿ ಮಾಡುತ್ತಿರುವ ದೃಶ್ಯವೂ ಇದರಲ್ಲಿದೆ.

ಕೆಲ ದಿನಗಳ ಹಿಂದಷ್ಟೇ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆಯಿಂದ ರಕ್ಷಣೆಗೆ ಕೋರಿ ಪೊಲೀಸರು ಮನವಿ ಮಾಡಿದ್ದರು. ಈ ವೇಳೆ ಹಿರಿಯ ಪೊಲೀಸರು, ಕಿರಿಯ ಪೊಲೀಸರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ ಅಂತಾ ಆರೋಪಿಸಲಾಗಿತ್ತು. ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈಗ ಮತ್ತೊಂದು ವಿಡಿಯೋ ಬಹಿರಂಗಗೊಂಡಿದ್ದು, ವಕೀಲರು ಆವೇಶದ ವರ್‍ತನೆ ಸೆರೆಯಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ…

ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದು ಬಹುಮುಖ್ಯ ಸಾಕ್ಷ್ಯವಾಗಲಿದೆ. ಘರ್ಷಣೆಗೆ ಕಾರಣ ಮತ್ತು ಸತ್ಯ ಏನು ಎಂಬುದನ್ನು ತಿಳಿಯಲು ಸಿಸಿ ಕ್ಯಾಮರಾ ದೃಶ್ಯ ಸಾಕ್ಷಿಯಾಗಲಿದೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರೊಬ್ಬರು ಮಾತನಾಡಿ, ನಾನು ಗುಂಪಿನಿಂದ ಮಹಿಳಾ ಪೊಲೀಸ್‌ನ್ನು ರಕ್ಷಿಸಲು ಹೋಗಿದ್ದೆ. ಈ ವೇಳೆ ನನ್ನನ್ನು ಸಾಕಷ್ಟು ಥಳಿಸಿದ್ರು. ಹಿರಿಯ ಅಧಿಕಾರಿಗಳು, ಕಿರಿಯ ಪೊಲೀಸರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ಮಹಿಳಾ ಪೊಲೀಸ್‌ನ್ನು ತಳ್ಳಿ, ಅವರೊಂದಿಗೆ ಅಸಭ್ಯವಾಗಿ ವರ್ತಿಸಲಾಗಿದೆ. ಅವರನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋದರು. ಅವರನ್ನು ಕೆಟ್ಟ ಶ್ಬ್ದಗಳಿಂದ ನಿಂದಿಸಿದರು. ಅವರು ಕೋರ್ಟ್‌ನ ಹೊರಭಾಗದಲ್ಲಿ ಬಂದು ನಿಂತು ಅಳುತ್ತಿದ್ದರು ಎಂದು ಹೇಳಿದರು.

ಇನ್ನು ಮಹಿಳಾ ಪೊಲೀಸ್‌ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಮಹಿಳಾ  ಆಯೋಗ ತೀವ್ರವಾಗಿ ಖಂಡಿಸಿದೆ. ಬಾರ್‍ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ)ದ ಮುಖ್ಯ ಕಾರ್ಯದರ್ಶಿ ಮನನ್ ಕುಮಾರ್ ಮಿಶ್ರಾ ಅವರ ಬಳಿ, ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್‍ಮಾ ಅವರು ತಿಳಿಸಿದ್ದಾರೆ. ಇತ್ತ ಪೊಲೀಸ್ ಹಿರಿಯ ಅಧಿಕಾರಿಗಳು, ದೌರ್ಜನ್ಯ ಎಸಗಿರುವ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...