Homeಮುಖಪುಟದೆಹಲಿ ಗಲಾಟೆ ಪ್ರಕರಣ: ಮಹಿಳಾ ಪೊಲೀಸ್ ಮೇಲೆ ವಕೀಲರ ಹಲ್ಲೆ ವೀಡಿಯೊ ಬಹಿರಂಗ

ದೆಹಲಿ ಗಲಾಟೆ ಪ್ರಕರಣ: ಮಹಿಳಾ ಪೊಲೀಸ್ ಮೇಲೆ ವಕೀಲರ ಹಲ್ಲೆ ವೀಡಿಯೊ ಬಹಿರಂಗ

- Advertisement -
- Advertisement -

ನವೆಂಬರ್ ೨ ರಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ಮುಂಭಾಗದಲ್ಲಿ ನಡೆದ ಪೊಲೀಸ್ ಮತ್ತು ವಕೀಲರ ನಡುವಿನ ಮಾರಾಮಾರಿಯ ವಿಡಿಯೋ ಸಂಚಲನ ಮೂಡಿಸಿತ್ತು. ಈಗ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆಯ ಮತ್ತೊಂದು ವಿಡಿಯೋ  ಬಹಿರಂಗವಾಗಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಾರ್‌ಗಳಿಗೆ ಬೆಂಕಿ ಹಚ್ಚಲಾಗಿರುವ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ವಕೀಲರ ಗುಂಪೊಂದು ಎರಗಿದ ವಿಡಿಯೋ ಇದಾಗಿದೆ.

 

ಹಜಾರಿ ಕೋರ್ಟ್‌ ಎದುರು ಬೆಂಕಿ ಹೊತ್ತಿಕೊಂಡು ಉರಿಯುತ್ತಿತ್ತು. ಸ್ಥಳಕ್ಕೆ ಮಹಿಳಾ ಪೊಲೀಸ್ ಸೇರಿದಂತೆ ಐದಾರು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಓಡಿ ಬರುತ್ತಾರೆ. ಈ ವೇಳೆ ಏಕಾಏಕಿ ಬಂದ ವಕೀಲರ ಗುಂಪು ಪೊಲೀಸರ ಮೇಲೆ ಎರಗುತ್ತದೆ. ಮಹಿಳಾ ಪೊಲೀಸ್ ಒಬ್ಬರು ವಕೀಲರಿಗೆ ಕೈಮುಗಿದು ದಾಂಧಲೆ ಮಾಡದಂತೆ ಮನವಿ ಮಾಡುತ್ತಿರುವ ದೃಶ್ಯವೂ ಇದರಲ್ಲಿದೆ.

ಕೆಲ ದಿನಗಳ ಹಿಂದಷ್ಟೇ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆಯಿಂದ ರಕ್ಷಣೆಗೆ ಕೋರಿ ಪೊಲೀಸರು ಮನವಿ ಮಾಡಿದ್ದರು. ಈ ವೇಳೆ ಹಿರಿಯ ಪೊಲೀಸರು, ಕಿರಿಯ ಪೊಲೀಸರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ ಅಂತಾ ಆರೋಪಿಸಲಾಗಿತ್ತು. ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈಗ ಮತ್ತೊಂದು ವಿಡಿಯೋ ಬಹಿರಂಗಗೊಂಡಿದ್ದು, ವಕೀಲರು ಆವೇಶದ ವರ್‍ತನೆ ಸೆರೆಯಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ…

ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದು ಬಹುಮುಖ್ಯ ಸಾಕ್ಷ್ಯವಾಗಲಿದೆ. ಘರ್ಷಣೆಗೆ ಕಾರಣ ಮತ್ತು ಸತ್ಯ ಏನು ಎಂಬುದನ್ನು ತಿಳಿಯಲು ಸಿಸಿ ಕ್ಯಾಮರಾ ದೃಶ್ಯ ಸಾಕ್ಷಿಯಾಗಲಿದೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರೊಬ್ಬರು ಮಾತನಾಡಿ, ನಾನು ಗುಂಪಿನಿಂದ ಮಹಿಳಾ ಪೊಲೀಸ್‌ನ್ನು ರಕ್ಷಿಸಲು ಹೋಗಿದ್ದೆ. ಈ ವೇಳೆ ನನ್ನನ್ನು ಸಾಕಷ್ಟು ಥಳಿಸಿದ್ರು. ಹಿರಿಯ ಅಧಿಕಾರಿಗಳು, ಕಿರಿಯ ಪೊಲೀಸರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ಮಹಿಳಾ ಪೊಲೀಸ್‌ನ್ನು ತಳ್ಳಿ, ಅವರೊಂದಿಗೆ ಅಸಭ್ಯವಾಗಿ ವರ್ತಿಸಲಾಗಿದೆ. ಅವರನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋದರು. ಅವರನ್ನು ಕೆಟ್ಟ ಶ್ಬ್ದಗಳಿಂದ ನಿಂದಿಸಿದರು. ಅವರು ಕೋರ್ಟ್‌ನ ಹೊರಭಾಗದಲ್ಲಿ ಬಂದು ನಿಂತು ಅಳುತ್ತಿದ್ದರು ಎಂದು ಹೇಳಿದರು.

ಇನ್ನು ಮಹಿಳಾ ಪೊಲೀಸ್‌ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಮಹಿಳಾ  ಆಯೋಗ ತೀವ್ರವಾಗಿ ಖಂಡಿಸಿದೆ. ಬಾರ್‍ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ)ದ ಮುಖ್ಯ ಕಾರ್ಯದರ್ಶಿ ಮನನ್ ಕುಮಾರ್ ಮಿಶ್ರಾ ಅವರ ಬಳಿ, ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್‍ಮಾ ಅವರು ತಿಳಿಸಿದ್ದಾರೆ. ಇತ್ತ ಪೊಲೀಸ್ ಹಿರಿಯ ಅಧಿಕಾರಿಗಳು, ದೌರ್ಜನ್ಯ ಎಸಗಿರುವ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...