Homeಮುಖಪುಟದೆಹಲಿ ಗಲಾಟೆ ಪ್ರಕರಣ: ಮಹಿಳಾ ಪೊಲೀಸ್ ಮೇಲೆ ವಕೀಲರ ಹಲ್ಲೆ ವೀಡಿಯೊ ಬಹಿರಂಗ

ದೆಹಲಿ ಗಲಾಟೆ ಪ್ರಕರಣ: ಮಹಿಳಾ ಪೊಲೀಸ್ ಮೇಲೆ ವಕೀಲರ ಹಲ್ಲೆ ವೀಡಿಯೊ ಬಹಿರಂಗ

- Advertisement -
- Advertisement -

ನವೆಂಬರ್ ೨ ರಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ಮುಂಭಾಗದಲ್ಲಿ ನಡೆದ ಪೊಲೀಸ್ ಮತ್ತು ವಕೀಲರ ನಡುವಿನ ಮಾರಾಮಾರಿಯ ವಿಡಿಯೋ ಸಂಚಲನ ಮೂಡಿಸಿತ್ತು. ಈಗ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆಯ ಮತ್ತೊಂದು ವಿಡಿಯೋ  ಬಹಿರಂಗವಾಗಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಾರ್‌ಗಳಿಗೆ ಬೆಂಕಿ ಹಚ್ಚಲಾಗಿರುವ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ವಕೀಲರ ಗುಂಪೊಂದು ಎರಗಿದ ವಿಡಿಯೋ ಇದಾಗಿದೆ.

 

ಹಜಾರಿ ಕೋರ್ಟ್‌ ಎದುರು ಬೆಂಕಿ ಹೊತ್ತಿಕೊಂಡು ಉರಿಯುತ್ತಿತ್ತು. ಸ್ಥಳಕ್ಕೆ ಮಹಿಳಾ ಪೊಲೀಸ್ ಸೇರಿದಂತೆ ಐದಾರು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಓಡಿ ಬರುತ್ತಾರೆ. ಈ ವೇಳೆ ಏಕಾಏಕಿ ಬಂದ ವಕೀಲರ ಗುಂಪು ಪೊಲೀಸರ ಮೇಲೆ ಎರಗುತ್ತದೆ. ಮಹಿಳಾ ಪೊಲೀಸ್ ಒಬ್ಬರು ವಕೀಲರಿಗೆ ಕೈಮುಗಿದು ದಾಂಧಲೆ ಮಾಡದಂತೆ ಮನವಿ ಮಾಡುತ್ತಿರುವ ದೃಶ್ಯವೂ ಇದರಲ್ಲಿದೆ.

ಕೆಲ ದಿನಗಳ ಹಿಂದಷ್ಟೇ ಪೊಲೀಸರು ಮತ್ತು ವಕೀಲರ ಮಧ್ಯೆ ನಡೆದ ಘರ್ಷಣೆಯಿಂದ ರಕ್ಷಣೆಗೆ ಕೋರಿ ಪೊಲೀಸರು ಮನವಿ ಮಾಡಿದ್ದರು. ಈ ವೇಳೆ ಹಿರಿಯ ಪೊಲೀಸರು, ಕಿರಿಯ ಪೊಲೀಸರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ ಅಂತಾ ಆರೋಪಿಸಲಾಗಿತ್ತು. ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈಗ ಮತ್ತೊಂದು ವಿಡಿಯೋ ಬಹಿರಂಗಗೊಂಡಿದ್ದು, ವಕೀಲರು ಆವೇಶದ ವರ್‍ತನೆ ಸೆರೆಯಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಬೀದಿಗಿಳಿದು ಪೊಲೀಸರು: ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಪ್ರತಿಭಟನೆ…

ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದು ಬಹುಮುಖ್ಯ ಸಾಕ್ಷ್ಯವಾಗಲಿದೆ. ಘರ್ಷಣೆಗೆ ಕಾರಣ ಮತ್ತು ಸತ್ಯ ಏನು ಎಂಬುದನ್ನು ತಿಳಿಯಲು ಸಿಸಿ ಕ್ಯಾಮರಾ ದೃಶ್ಯ ಸಾಕ್ಷಿಯಾಗಲಿದೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರೊಬ್ಬರು ಮಾತನಾಡಿ, ನಾನು ಗುಂಪಿನಿಂದ ಮಹಿಳಾ ಪೊಲೀಸ್‌ನ್ನು ರಕ್ಷಿಸಲು ಹೋಗಿದ್ದೆ. ಈ ವೇಳೆ ನನ್ನನ್ನು ಸಾಕಷ್ಟು ಥಳಿಸಿದ್ರು. ಹಿರಿಯ ಅಧಿಕಾರಿಗಳು, ಕಿರಿಯ ಪೊಲೀಸರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ಮಹಿಳಾ ಪೊಲೀಸ್‌ನ್ನು ತಳ್ಳಿ, ಅವರೊಂದಿಗೆ ಅಸಭ್ಯವಾಗಿ ವರ್ತಿಸಲಾಗಿದೆ. ಅವರನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋದರು. ಅವರನ್ನು ಕೆಟ್ಟ ಶ್ಬ್ದಗಳಿಂದ ನಿಂದಿಸಿದರು. ಅವರು ಕೋರ್ಟ್‌ನ ಹೊರಭಾಗದಲ್ಲಿ ಬಂದು ನಿಂತು ಅಳುತ್ತಿದ್ದರು ಎಂದು ಹೇಳಿದರು.

ಇನ್ನು ಮಹಿಳಾ ಪೊಲೀಸ್‌ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಮಹಿಳಾ  ಆಯೋಗ ತೀವ್ರವಾಗಿ ಖಂಡಿಸಿದೆ. ಬಾರ್‍ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ)ದ ಮುಖ್ಯ ಕಾರ್ಯದರ್ಶಿ ಮನನ್ ಕುಮಾರ್ ಮಿಶ್ರಾ ಅವರ ಬಳಿ, ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್‍ಮಾ ಅವರು ತಿಳಿಸಿದ್ದಾರೆ. ಇತ್ತ ಪೊಲೀಸ್ ಹಿರಿಯ ಅಧಿಕಾರಿಗಳು, ದೌರ್ಜನ್ಯ ಎಸಗಿರುವ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...