Homeಮುಖಪುಟದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿಯಾಗಿದೆ. ಲಕ್ಷಾಂತರ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿ ಪ್ರವೇಶಿಸಿದ ರೈತರು ಶಾಂತಿಯುತ ಪರೇಡ್‌ ನಡೆಸಿ ಕೇಂದ್ರ ಸರ್ಕಾರವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿಯಾಗಿದ್ದು, ಶೇ. 99 ಶಾಂತಿಯುತವಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನೂ ಅರ್ಧದಷ್ಟು ಮಾತ್ರ ಟ್ರ್ಯಾಕ್ಟರ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದು ಇನ್ನು ಲಕ್ಷಾಂತರ ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸುತ್ತಲೇ ಇವೆ. ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅಲ್ಲದೇ ರೈತರ ಐತಿಹಾಸಿಕ ಪರೇಡ್ ನೋಡಲು ಸಾವಿರಾರು ಜನ ರಸ್ತೆಬದಿಗಳನ್ನು ಸೇರಿದ್ದು ರೈತರಿಗೆ ಜೈಕಾರ ಕೂಗಿದ್ದಾರೆ.

ಇನ್ನು ರೈತ ಸಂಘಟನೆಗಳ ಕೆಲವು ಗುಂಪು ಕೆಂಪುಕೋಟೆ ತಲುಪಿ ಅಲ್ಲಿ ರೈತ ಧ್ವಜಗಳನ್ನು ಹಾರಿಸಿದ್ದಾರೆ. ಟ್ರ್ಯಾಕ್ಟರ್ ಮತ್ತು ಪೊಲೀಸರ ಘರ್ಷಣೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದಾನೆ. ಈ ಕುರಿತು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದೆ.

“ಇಂದಿನ ರೈತ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಅಭೂತಪೂರ್ವವಾಗಿ ಭಾಗವಹಿಸಿದ್ದಕ್ಕಾಗಿ ರೈತರಿಗೆ ಧನ್ಯವಾದಗಳು. ಇಂದು ನಡೆದ ಅನಪೇಕ್ಷಿತ ಮತ್ತು ಸ್ವೀಕಾರಾರ್ಹವಲ್ಲದ ಘಟನೆಗಳನ್ನು ನಾವು ಖಂಡಿಸುತ್ತೇವೆ ಮತ್ತು ವಿಷಾದಿಸುತ್ತೇವೆ ಮತ್ತು ಅಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವವರಿಂದ ನಮ್ಮನ್ನು ಬೇರ್ಪಡಿಸುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ನಮ್ಮ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ಮಾರ್ಗವನ್ನು ಉಲ್ಲಂಘಿಸಿದ್ದಾರೆ ಮತ್ತು ಖಂಡನೀಯ ಕೃತ್ಯಗಳಲ್ಲಿ ತೊಡಗಿದ್ದಾರೆ. ಕೆಲ ಸಮಾಜ ವಿರೋಧಿ ಶಕ್ತಿಗಳು ಒಳನುಗ್ಗಿ ಶಾಂತಿಗೆಡಿಸಿರುವುದು ಸರಿಯಲ್ಲ. ಶಾಂತಿ ನಮ್ಮ ದೊಡ್ಡ ಶಕ್ತಿ,  ಯಾವುದೇ ನಿಯಮ ಉಲ್ಲಂಘನೆಯು ಚಳವಳಿಗೆ ನೋವುಂಟು ಮಾಡುತ್ತದೆ ಎಂದು ನಾವು ಯಾವಾಗಲೂ ಭಾವಿಸಿದ್ದೇವೆ ಎಂದು ಮೋರ್ಚಾ ಹೇಳಿದೆ.

ಆದರೆ 6 ತಿಂಗಳಿಗಿಂತ ಹೆಚ್ಚು ಕಾಲ ನಡೆಯುತ್ತಿರುವ ಈ ಸುದೀರ್ಘ ಹೋರಾಟ, ಮತ್ತು ದೆಹಲಿ ಗಡಿಯಲ್ಲಿ 60 ದಿನಗಳಿಗಿಂತಲೂ ಹೆಚ್ಚು ನಡೆಯುತ್ತಿರುವ ಪ್ರತಿಭಟನೆ ಕೂಡ ಇವತ್ತಿನ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ರೈತರು ದೂರಿದ್ದಾರೆ.

ಶಿಸ್ತನ್ನು ಉಲ್ಲಂಘಿಸಿದ ಅಂತಹ ಎಲ್ಲ ಅಂಶಗಳಿಂದ ನಾವು ನಮ್ಮನ್ನು ಬೇರ್ಪಡಿಸುತ್ತೇವೆ. ಮೆರವಣಿಗೆಯ ಮಾರ್ಗಗಳನ್ನು ಅನುಸರಿಸಬೇಕೆಂದು ಎಲ್ಲರಲ್ಲಿಯೂ ಬಲವಾಗಿ ಮನವಿ ಮಾಡುತ್ತೇವೆ ಮತ್ತು ಯಾವುದೇ ಹಿಂಸಾತ್ಮಕ ಕ್ರಮ ಅಥವಾ ರಾಷ್ಟ್ರೀಯ ಚಿಹ್ನೆಗಳು ಮತ್ತು ಘನತೆಗೆ ಕಳಂಕ ತರುವಂತಹ ಯಾವುದನ್ನೂ ಮಾಡಬಾರದು. ಅಂತಹ ಯಾವುದೇ ಕೃತ್ಯಗಳಿಂದ ದೂರವಿರಲು ನಾವು ಎಲ್ಲರಿಗೂ ಮನವಿ ಮಾಡುತ್ತೇವೆ. ಕೆಲವು ವಿಷಾದನೀಯ ಉಲ್ಲಂಘನೆಗಳ ಹೊರತಾಗಿ, ಯೋಜನೆಯ ಪ್ರಕಾರ ಮೆರವಣಿಗೆಗಳು ಶಾಂತಿಯುತವಾಗಿ ನಡೆಯುತ್ತಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...