Homeಮುಖಪುಟದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿ: ಶೇ. 99 ಶಾಂತಿಯುತ

ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿಯಾಗಿದೆ. ಲಕ್ಷಾಂತರ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿ ಪ್ರವೇಶಿಸಿದ ರೈತರು ಶಾಂತಿಯುತ ಪರೇಡ್‌ ನಡೆಸಿ ಕೇಂದ್ರ ಸರ್ಕಾರವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿ ಟ್ರ್ಯಾಕ್ಟರ್ ಪರೇಡ್ ಸಂಪೂರ್ಣ ಯಶಸ್ವಿಯಾಗಿದ್ದು, ಶೇ. 99 ಶಾಂತಿಯುತವಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನೂ ಅರ್ಧದಷ್ಟು ಮಾತ್ರ ಟ್ರ್ಯಾಕ್ಟರ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದು ಇನ್ನು ಲಕ್ಷಾಂತರ ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸುತ್ತಲೇ ಇವೆ. ಟ್ರ್ಯಾಕ್ಟರ್‌ಗಳು ದೆಹಲಿ ಪ್ರವೇಶಿಸಿದೊಡನೆಯ ದೆಹಲಿ ಜನರು ಫ್ಲೈಓವರ್‌ಗಳಿಂದ ಹೂವು ಸುರಿಸುವ ಮೂಲಕ ರೈತರಿಗೆ ಪ್ರೀತಿಯ ಸ್ವಾಗತ ಕೋರಿದ್ದಾರೆ. ಅಲ್ಲದೇ ರೈತರ ಐತಿಹಾಸಿಕ ಪರೇಡ್ ನೋಡಲು ಸಾವಿರಾರು ಜನ ರಸ್ತೆಬದಿಗಳನ್ನು ಸೇರಿದ್ದು ರೈತರಿಗೆ ಜೈಕಾರ ಕೂಗಿದ್ದಾರೆ.

ಇನ್ನು ರೈತ ಸಂಘಟನೆಗಳ ಕೆಲವು ಗುಂಪು ಕೆಂಪುಕೋಟೆ ತಲುಪಿ ಅಲ್ಲಿ ರೈತ ಧ್ವಜಗಳನ್ನು ಹಾರಿಸಿದ್ದಾರೆ. ಟ್ರ್ಯಾಕ್ಟರ್ ಮತ್ತು ಪೊಲೀಸರ ಘರ್ಷಣೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದಾನೆ. ಈ ಕುರಿತು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದೆ.

“ಇಂದಿನ ರೈತ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಅಭೂತಪೂರ್ವವಾಗಿ ಭಾಗವಹಿಸಿದ್ದಕ್ಕಾಗಿ ರೈತರಿಗೆ ಧನ್ಯವಾದಗಳು. ಇಂದು ನಡೆದ ಅನಪೇಕ್ಷಿತ ಮತ್ತು ಸ್ವೀಕಾರಾರ್ಹವಲ್ಲದ ಘಟನೆಗಳನ್ನು ನಾವು ಖಂಡಿಸುತ್ತೇವೆ ಮತ್ತು ವಿಷಾದಿಸುತ್ತೇವೆ ಮತ್ತು ಅಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವವರಿಂದ ನಮ್ಮನ್ನು ಬೇರ್ಪಡಿಸುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ನಮ್ಮ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ಮಾರ್ಗವನ್ನು ಉಲ್ಲಂಘಿಸಿದ್ದಾರೆ ಮತ್ತು ಖಂಡನೀಯ ಕೃತ್ಯಗಳಲ್ಲಿ ತೊಡಗಿದ್ದಾರೆ. ಕೆಲ ಸಮಾಜ ವಿರೋಧಿ ಶಕ್ತಿಗಳು ಒಳನುಗ್ಗಿ ಶಾಂತಿಗೆಡಿಸಿರುವುದು ಸರಿಯಲ್ಲ. ಶಾಂತಿ ನಮ್ಮ ದೊಡ್ಡ ಶಕ್ತಿ,  ಯಾವುದೇ ನಿಯಮ ಉಲ್ಲಂಘನೆಯು ಚಳವಳಿಗೆ ನೋವುಂಟು ಮಾಡುತ್ತದೆ ಎಂದು ನಾವು ಯಾವಾಗಲೂ ಭಾವಿಸಿದ್ದೇವೆ ಎಂದು ಮೋರ್ಚಾ ಹೇಳಿದೆ.

ಆದರೆ 6 ತಿಂಗಳಿಗಿಂತ ಹೆಚ್ಚು ಕಾಲ ನಡೆಯುತ್ತಿರುವ ಈ ಸುದೀರ್ಘ ಹೋರಾಟ, ಮತ್ತು ದೆಹಲಿ ಗಡಿಯಲ್ಲಿ 60 ದಿನಗಳಿಗಿಂತಲೂ ಹೆಚ್ಚು ನಡೆಯುತ್ತಿರುವ ಪ್ರತಿಭಟನೆ ಕೂಡ ಇವತ್ತಿನ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ರೈತರು ದೂರಿದ್ದಾರೆ.

ಶಿಸ್ತನ್ನು ಉಲ್ಲಂಘಿಸಿದ ಅಂತಹ ಎಲ್ಲ ಅಂಶಗಳಿಂದ ನಾವು ನಮ್ಮನ್ನು ಬೇರ್ಪಡಿಸುತ್ತೇವೆ. ಮೆರವಣಿಗೆಯ ಮಾರ್ಗಗಳನ್ನು ಅನುಸರಿಸಬೇಕೆಂದು ಎಲ್ಲರಲ್ಲಿಯೂ ಬಲವಾಗಿ ಮನವಿ ಮಾಡುತ್ತೇವೆ ಮತ್ತು ಯಾವುದೇ ಹಿಂಸಾತ್ಮಕ ಕ್ರಮ ಅಥವಾ ರಾಷ್ಟ್ರೀಯ ಚಿಹ್ನೆಗಳು ಮತ್ತು ಘನತೆಗೆ ಕಳಂಕ ತರುವಂತಹ ಯಾವುದನ್ನೂ ಮಾಡಬಾರದು. ಅಂತಹ ಯಾವುದೇ ಕೃತ್ಯಗಳಿಂದ ದೂರವಿರಲು ನಾವು ಎಲ್ಲರಿಗೂ ಮನವಿ ಮಾಡುತ್ತೇವೆ. ಕೆಲವು ವಿಷಾದನೀಯ ಉಲ್ಲಂಘನೆಗಳ ಹೊರತಾಗಿ, ಯೋಜನೆಯ ಪ್ರಕಾರ ಮೆರವಣಿಗೆಗಳು ಶಾಂತಿಯುತವಾಗಿ ನಡೆಯುತ್ತಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ದಿಟ್ಟ ಹೋರಾಟ: ಕ್ಯಾಮರಗೆ ಸೆರೆಸಿಕ್ಕ ಅದ್ಭುತ ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...