Homeಸಿನಿಮಾಕ್ರೀಡೆದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

- Advertisement -
- Advertisement -

ನವದೆಹಲಿಯಲ್ಲಿ ಮಾರ್ಚ್ ತಿಂಗಳು ನಡೆಯಲಿರುವ ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನ್ನು ಬಹಿಷ್ಕರಿಸುವ ದೇಶಗಳ ಪಟ್ಟಿಗೆ ಇದೀಗ ಉಕ್ರೇನ್ ಸೇರಿಕೊಂಡಿದೆ. ”ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಉಪಸ್ಥಿತಿಯಿಂದಾಗಿ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದೆ. ಪುರುಷರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿಯೂ ಸ್ಪರ್ಧಿಸುವುದಿಲ್ಲ” ಎಂದು ಉಕ್ರೇನ್ ಹೇಳಿದೆ.

ಉಕ್ರೇನ್‌ನ ಬಾಕ್ಸಿಂಗ್ ಫೆಡರೇಶನ್ (ಎಫ್‌ಬಿಯು) ಉಪಾಧ್ಯಕ್ಷ ಒಲೆಗ್ ಇಲ್ಚೆಂಕೊ ಅವರು, ”ನಮ್ಮ ದೇಶದ ಬಾಕ್ಸರ್‌ಗಳು ಆಕ್ರಮಣಕಾರಿ ದೇಶಗಳ ಕ್ರೀಡಾಪಟುಗಳ ಜೊತೆ ಒಂದೇ ವೇದಿಕೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಶುಕ್ರವಾರಕ್ಕೆ ಒಂದು ವರ್ಷ ಕಳೆಯುತ್ತದೆ. ಈ ದಾಳಿ ನಂತರ ಇಂಟರ್ನ್ಯಾಷನಲ್ ಬಾಕ್ಸಿಂಗ್ ಫೆಡರೇಶನ್ ಹೆಚ್ಚು ಸಮಸ್ಯೆಗಳನ್ನು ಎದುರಿಸಿದೆ. ”ಆಕ್ರಮಣಕಾರಿ ದೇಶಗಳಾದ ರಷ್ಯಾ ಮತ್ತು ಬೆಲಾರಸ್‌ನ ಪ್ರತಿನಿಧಿಗಳು ಸ್ಪರ್ಧಿಸುವ ವೇದಿಕೆಯಲ್ಲಿ ನಮ್ಮ ಕ್ರೀಡಾಪಟುಗಳು ಮತ್ತು ಬಾಕ್ಸಿಂಗ್ ಫೆಡರೇಶನ್ ಆಫ್ ಉಕ್ರೇನ್ ಪ್ರತಿನಿಧಿಗಳು ಸ್ಪರ್ಧಿಸುವುದಿಲ್ಲ” ಇದು ನಮ್ಮ ಸ್ಪಷ್ಟ ಉತ್ತರವಾಗಿದೆ ಎಂದು ಇಲ್ಚೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

ಕ್ರೆಮ್ಲೆವ್ ಅವರು ಕಳೆದ ಅಕ್ಟೋಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಶಿಫಾರಸುಗಳಿಗೆ ವಿರುದ್ಧವಾಗಿ ನಡೆದುಕೊಂಡರು ಮತ್ತು ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳು ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ತಮ್ಮದೇ ಧ್ವಜದ ಅಡಿಯಲ್ಲಿ ಸ್ಪರ್ಧಿಸುವ ನಿಷೇಧವನ್ನು ಅವರು ಉಲ್ಲಂಘಿಸಿದರು.

ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಸೇರ್ಪಡೆಯಿಂದಾಗಿ ಹಲವು ದೇಶಗಳು ಹಿಂದೆ ಸರಿಯಲು ನಿರ್ಧರಿಸಿವೆ. ಮಾರ್ಚ್ 15 ರಿಂದ 26 ರವರೆಗೆ ನವದೆಹಲಿಯ ಕೆಡಿ ಜಾಧವ್ ಕ್ರೀಡಾಂಗಣ ನಡೆಯಲಿರುವ ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಿಂದ ಉಕ್ರೇನ್ ಸೇರಿದಂತೆ ಯುನೈಟೆಡ್ ಸ್ಟೇಟ್ಸ್, ಬ್ರಿಟನ್, ಸ್ವಿಟ್ಜರ್ಲೆಂಡ್, ಪೋಲೆಂಡ್, ನೆದರ್ಲ್ಯಾಂಡ್ಸ್, ಐರ್ಲೆಂಡ್, ಜೆಕ್ ರಿಪಬ್ಲಿಕ್, ಸ್ವೀಡನ್ ಮತ್ತು ಕೆನಡಾ ದೇಶಗಳು ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿವೆ.

ಭಾರತದ ಬಾಕ್ಸಿಂಗ್ ಫೆಡರೇಶನ್ ಬುಧವಾರ ಮಾಹಿತಿ ನೀಡಿದ್ದು, 74 ದೇಶಗಳ 350ಕ್ಕೂ ಹೆಚ್ಚು ಬಾಕ್ಸರ್‌ಗಳು ಈವೆಂಟ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...