Homeಸಿನಿಮಾಕ್ರೀಡೆದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

- Advertisement -
- Advertisement -

ನವದೆಹಲಿಯಲ್ಲಿ ಮಾರ್ಚ್ ತಿಂಗಳು ನಡೆಯಲಿರುವ ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನ್ನು ಬಹಿಷ್ಕರಿಸುವ ದೇಶಗಳ ಪಟ್ಟಿಗೆ ಇದೀಗ ಉಕ್ರೇನ್ ಸೇರಿಕೊಂಡಿದೆ. ”ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಉಪಸ್ಥಿತಿಯಿಂದಾಗಿ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದೆ. ಪುರುಷರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿಯೂ ಸ್ಪರ್ಧಿಸುವುದಿಲ್ಲ” ಎಂದು ಉಕ್ರೇನ್ ಹೇಳಿದೆ.

ಉಕ್ರೇನ್‌ನ ಬಾಕ್ಸಿಂಗ್ ಫೆಡರೇಶನ್ (ಎಫ್‌ಬಿಯು) ಉಪಾಧ್ಯಕ್ಷ ಒಲೆಗ್ ಇಲ್ಚೆಂಕೊ ಅವರು, ”ನಮ್ಮ ದೇಶದ ಬಾಕ್ಸರ್‌ಗಳು ಆಕ್ರಮಣಕಾರಿ ದೇಶಗಳ ಕ್ರೀಡಾಪಟುಗಳ ಜೊತೆ ಒಂದೇ ವೇದಿಕೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಶುಕ್ರವಾರಕ್ಕೆ ಒಂದು ವರ್ಷ ಕಳೆಯುತ್ತದೆ. ಈ ದಾಳಿ ನಂತರ ಇಂಟರ್ನ್ಯಾಷನಲ್ ಬಾಕ್ಸಿಂಗ್ ಫೆಡರೇಶನ್ ಹೆಚ್ಚು ಸಮಸ್ಯೆಗಳನ್ನು ಎದುರಿಸಿದೆ. ”ಆಕ್ರಮಣಕಾರಿ ದೇಶಗಳಾದ ರಷ್ಯಾ ಮತ್ತು ಬೆಲಾರಸ್‌ನ ಪ್ರತಿನಿಧಿಗಳು ಸ್ಪರ್ಧಿಸುವ ವೇದಿಕೆಯಲ್ಲಿ ನಮ್ಮ ಕ್ರೀಡಾಪಟುಗಳು ಮತ್ತು ಬಾಕ್ಸಿಂಗ್ ಫೆಡರೇಶನ್ ಆಫ್ ಉಕ್ರೇನ್ ಪ್ರತಿನಿಧಿಗಳು ಸ್ಪರ್ಧಿಸುವುದಿಲ್ಲ” ಇದು ನಮ್ಮ ಸ್ಪಷ್ಟ ಉತ್ತರವಾಗಿದೆ ಎಂದು ಇಲ್ಚೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

ಕ್ರೆಮ್ಲೆವ್ ಅವರು ಕಳೆದ ಅಕ್ಟೋಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಶಿಫಾರಸುಗಳಿಗೆ ವಿರುದ್ಧವಾಗಿ ನಡೆದುಕೊಂಡರು ಮತ್ತು ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳು ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ತಮ್ಮದೇ ಧ್ವಜದ ಅಡಿಯಲ್ಲಿ ಸ್ಪರ್ಧಿಸುವ ನಿಷೇಧವನ್ನು ಅವರು ಉಲ್ಲಂಘಿಸಿದರು.

ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಸೇರ್ಪಡೆಯಿಂದಾಗಿ ಹಲವು ದೇಶಗಳು ಹಿಂದೆ ಸರಿಯಲು ನಿರ್ಧರಿಸಿವೆ. ಮಾರ್ಚ್ 15 ರಿಂದ 26 ರವರೆಗೆ ನವದೆಹಲಿಯ ಕೆಡಿ ಜಾಧವ್ ಕ್ರೀಡಾಂಗಣ ನಡೆಯಲಿರುವ ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಿಂದ ಉಕ್ರೇನ್ ಸೇರಿದಂತೆ ಯುನೈಟೆಡ್ ಸ್ಟೇಟ್ಸ್, ಬ್ರಿಟನ್, ಸ್ವಿಟ್ಜರ್ಲೆಂಡ್, ಪೋಲೆಂಡ್, ನೆದರ್ಲ್ಯಾಂಡ್ಸ್, ಐರ್ಲೆಂಡ್, ಜೆಕ್ ರಿಪಬ್ಲಿಕ್, ಸ್ವೀಡನ್ ಮತ್ತು ಕೆನಡಾ ದೇಶಗಳು ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿವೆ.

ಭಾರತದ ಬಾಕ್ಸಿಂಗ್ ಫೆಡರೇಶನ್ ಬುಧವಾರ ಮಾಹಿತಿ ನೀಡಿದ್ದು, 74 ದೇಶಗಳ 350ಕ್ಕೂ ಹೆಚ್ಚು ಬಾಕ್ಸರ್‌ಗಳು ಈವೆಂಟ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...