Homeಸಿನಿಮಾಕ್ರೀಡೆದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

- Advertisement -
- Advertisement -

ನವದೆಹಲಿಯಲ್ಲಿ ಮಾರ್ಚ್ ತಿಂಗಳು ನಡೆಯಲಿರುವ ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನ್ನು ಬಹಿಷ್ಕರಿಸುವ ದೇಶಗಳ ಪಟ್ಟಿಗೆ ಇದೀಗ ಉಕ್ರೇನ್ ಸೇರಿಕೊಂಡಿದೆ. ”ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಉಪಸ್ಥಿತಿಯಿಂದಾಗಿ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದೆ. ಪುರುಷರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿಯೂ ಸ್ಪರ್ಧಿಸುವುದಿಲ್ಲ” ಎಂದು ಉಕ್ರೇನ್ ಹೇಳಿದೆ.

ಉಕ್ರೇನ್‌ನ ಬಾಕ್ಸಿಂಗ್ ಫೆಡರೇಶನ್ (ಎಫ್‌ಬಿಯು) ಉಪಾಧ್ಯಕ್ಷ ಒಲೆಗ್ ಇಲ್ಚೆಂಕೊ ಅವರು, ”ನಮ್ಮ ದೇಶದ ಬಾಕ್ಸರ್‌ಗಳು ಆಕ್ರಮಣಕಾರಿ ದೇಶಗಳ ಕ್ರೀಡಾಪಟುಗಳ ಜೊತೆ ಒಂದೇ ವೇದಿಕೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಶುಕ್ರವಾರಕ್ಕೆ ಒಂದು ವರ್ಷ ಕಳೆಯುತ್ತದೆ. ಈ ದಾಳಿ ನಂತರ ಇಂಟರ್ನ್ಯಾಷನಲ್ ಬಾಕ್ಸಿಂಗ್ ಫೆಡರೇಶನ್ ಹೆಚ್ಚು ಸಮಸ್ಯೆಗಳನ್ನು ಎದುರಿಸಿದೆ. ”ಆಕ್ರಮಣಕಾರಿ ದೇಶಗಳಾದ ರಷ್ಯಾ ಮತ್ತು ಬೆಲಾರಸ್‌ನ ಪ್ರತಿನಿಧಿಗಳು ಸ್ಪರ್ಧಿಸುವ ವೇದಿಕೆಯಲ್ಲಿ ನಮ್ಮ ಕ್ರೀಡಾಪಟುಗಳು ಮತ್ತು ಬಾಕ್ಸಿಂಗ್ ಫೆಡರೇಶನ್ ಆಫ್ ಉಕ್ರೇನ್ ಪ್ರತಿನಿಧಿಗಳು ಸ್ಪರ್ಧಿಸುವುದಿಲ್ಲ” ಇದು ನಮ್ಮ ಸ್ಪಷ್ಟ ಉತ್ತರವಾಗಿದೆ ಎಂದು ಇಲ್ಚೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

ಕ್ರೆಮ್ಲೆವ್ ಅವರು ಕಳೆದ ಅಕ್ಟೋಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಶಿಫಾರಸುಗಳಿಗೆ ವಿರುದ್ಧವಾಗಿ ನಡೆದುಕೊಂಡರು ಮತ್ತು ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳು ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ತಮ್ಮದೇ ಧ್ವಜದ ಅಡಿಯಲ್ಲಿ ಸ್ಪರ್ಧಿಸುವ ನಿಷೇಧವನ್ನು ಅವರು ಉಲ್ಲಂಘಿಸಿದರು.

ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಸೇರ್ಪಡೆಯಿಂದಾಗಿ ಹಲವು ದೇಶಗಳು ಹಿಂದೆ ಸರಿಯಲು ನಿರ್ಧರಿಸಿವೆ. ಮಾರ್ಚ್ 15 ರಿಂದ 26 ರವರೆಗೆ ನವದೆಹಲಿಯ ಕೆಡಿ ಜಾಧವ್ ಕ್ರೀಡಾಂಗಣ ನಡೆಯಲಿರುವ ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಿಂದ ಉಕ್ರೇನ್ ಸೇರಿದಂತೆ ಯುನೈಟೆಡ್ ಸ್ಟೇಟ್ಸ್, ಬ್ರಿಟನ್, ಸ್ವಿಟ್ಜರ್ಲೆಂಡ್, ಪೋಲೆಂಡ್, ನೆದರ್ಲ್ಯಾಂಡ್ಸ್, ಐರ್ಲೆಂಡ್, ಜೆಕ್ ರಿಪಬ್ಲಿಕ್, ಸ್ವೀಡನ್ ಮತ್ತು ಕೆನಡಾ ದೇಶಗಳು ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿವೆ.

ಭಾರತದ ಬಾಕ್ಸಿಂಗ್ ಫೆಡರೇಶನ್ ಬುಧವಾರ ಮಾಹಿತಿ ನೀಡಿದ್ದು, 74 ದೇಶಗಳ 350ಕ್ಕೂ ಹೆಚ್ಚು ಬಾಕ್ಸರ್‌ಗಳು ಈವೆಂಟ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...