Homeಸಿನಿಮಾಕ್ರೀಡೆದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

- Advertisement -
- Advertisement -

ನವದೆಹಲಿಯಲ್ಲಿ ಮಾರ್ಚ್ ತಿಂಗಳು ನಡೆಯಲಿರುವ ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನ್ನು ಬಹಿಷ್ಕರಿಸುವ ದೇಶಗಳ ಪಟ್ಟಿಗೆ ಇದೀಗ ಉಕ್ರೇನ್ ಸೇರಿಕೊಂಡಿದೆ. ”ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಉಪಸ್ಥಿತಿಯಿಂದಾಗಿ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದೆ. ಪುರುಷರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿಯೂ ಸ್ಪರ್ಧಿಸುವುದಿಲ್ಲ” ಎಂದು ಉಕ್ರೇನ್ ಹೇಳಿದೆ.

ಉಕ್ರೇನ್‌ನ ಬಾಕ್ಸಿಂಗ್ ಫೆಡರೇಶನ್ (ಎಫ್‌ಬಿಯು) ಉಪಾಧ್ಯಕ್ಷ ಒಲೆಗ್ ಇಲ್ಚೆಂಕೊ ಅವರು, ”ನಮ್ಮ ದೇಶದ ಬಾಕ್ಸರ್‌ಗಳು ಆಕ್ರಮಣಕಾರಿ ದೇಶಗಳ ಕ್ರೀಡಾಪಟುಗಳ ಜೊತೆ ಒಂದೇ ವೇದಿಕೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಶುಕ್ರವಾರಕ್ಕೆ ಒಂದು ವರ್ಷ ಕಳೆಯುತ್ತದೆ. ಈ ದಾಳಿ ನಂತರ ಇಂಟರ್ನ್ಯಾಷನಲ್ ಬಾಕ್ಸಿಂಗ್ ಫೆಡರೇಶನ್ ಹೆಚ್ಚು ಸಮಸ್ಯೆಗಳನ್ನು ಎದುರಿಸಿದೆ. ”ಆಕ್ರಮಣಕಾರಿ ದೇಶಗಳಾದ ರಷ್ಯಾ ಮತ್ತು ಬೆಲಾರಸ್‌ನ ಪ್ರತಿನಿಧಿಗಳು ಸ್ಪರ್ಧಿಸುವ ವೇದಿಕೆಯಲ್ಲಿ ನಮ್ಮ ಕ್ರೀಡಾಪಟುಗಳು ಮತ್ತು ಬಾಕ್ಸಿಂಗ್ ಫೆಡರೇಶನ್ ಆಫ್ ಉಕ್ರೇನ್ ಪ್ರತಿನಿಧಿಗಳು ಸ್ಪರ್ಧಿಸುವುದಿಲ್ಲ” ಇದು ನಮ್ಮ ಸ್ಪಷ್ಟ ಉತ್ತರವಾಗಿದೆ ಎಂದು ಇಲ್ಚೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ಕಲಾಪದ ವೇಳೆ ಮೇಯರ್ ಒಬೆರಾಯ್ ಮೇಲೆ ಬಿಜೆಪಿಗರಿಂದ ಹಲ್ಲೆಗೆ ಯತ್ನ: ಆರೋಪ

ಕ್ರೆಮ್ಲೆವ್ ಅವರು ಕಳೆದ ಅಕ್ಟೋಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಶಿಫಾರಸುಗಳಿಗೆ ವಿರುದ್ಧವಾಗಿ ನಡೆದುಕೊಂಡರು ಮತ್ತು ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳು ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ತಮ್ಮದೇ ಧ್ವಜದ ಅಡಿಯಲ್ಲಿ ಸ್ಪರ್ಧಿಸುವ ನಿಷೇಧವನ್ನು ಅವರು ಉಲ್ಲಂಘಿಸಿದರು.

ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಸೇರ್ಪಡೆಯಿಂದಾಗಿ ಹಲವು ದೇಶಗಳು ಹಿಂದೆ ಸರಿಯಲು ನಿರ್ಧರಿಸಿವೆ. ಮಾರ್ಚ್ 15 ರಿಂದ 26 ರವರೆಗೆ ನವದೆಹಲಿಯ ಕೆಡಿ ಜಾಧವ್ ಕ್ರೀಡಾಂಗಣ ನಡೆಯಲಿರುವ ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಿಂದ ಉಕ್ರೇನ್ ಸೇರಿದಂತೆ ಯುನೈಟೆಡ್ ಸ್ಟೇಟ್ಸ್, ಬ್ರಿಟನ್, ಸ್ವಿಟ್ಜರ್ಲೆಂಡ್, ಪೋಲೆಂಡ್, ನೆದರ್ಲ್ಯಾಂಡ್ಸ್, ಐರ್ಲೆಂಡ್, ಜೆಕ್ ರಿಪಬ್ಲಿಕ್, ಸ್ವೀಡನ್ ಮತ್ತು ಕೆನಡಾ ದೇಶಗಳು ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿವೆ.

ಭಾರತದ ಬಾಕ್ಸಿಂಗ್ ಫೆಡರೇಶನ್ ಬುಧವಾರ ಮಾಹಿತಿ ನೀಡಿದ್ದು, 74 ದೇಶಗಳ 350ಕ್ಕೂ ಹೆಚ್ಚು ಬಾಕ್ಸರ್‌ಗಳು ಈವೆಂಟ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...