Homeಮುಖಪುಟ'ಪ್ಯಾಲೆಸ್ತೀನ್' ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

‘ಪ್ಯಾಲೆಸ್ತೀನ್’ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

- Advertisement -
- Advertisement -

ಪ್ಯಾಲೆಸ್ತೀನ್ ಬಿಕ್ಕಟ್ಟಿನ ಕುರಿತು ಏಪ್ರಿಲ್ 15ರಂದು ನಡೆಯಬೇಕಿದ್ದ ಕವನ ವಾಚನ ಕಾರ್ಯಕ್ರಮವನ್ನು ದೆಹಲಿ ವಿಶ್ವವಿದ್ಯಾಲಯವು ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸಿದೆ ಎಂದು ಕಾರ್ಯಕ್ರಮದ ಸಂಘಟಕರು ಆರೋಪಿಸಿದ್ದಾರೆ.

ಈ ಕುರಿತು ಕಾರ್ಯಕ್ರಮದ ಆಯೋಜಕರಾದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅಪೂರ್ವಾನಂದ್ ಮತ್ತು ಅರ್ಜುಮಂದ್ ಅರಾ ಮಾತನಾಡಿದ್ದು, ‘ನಾವು ಪ್ಯಾಲೆಸ್ತೀನರ ಪದವನ್ನು ಕೇಳೋಣ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಮಾರ್ಚ್ 22ರಂದು ನಡೆಸಬೇಕಾಗಿತ್ತು ಮತ್ತು ಅದಕ್ಕೆ ದೆಹಲಿ ವಿಶ್ವವಿದ್ಯಾಲಯವು ಮಾರ್ಚ್ 19ರಂದು ಅನುಮತಿ ನೀಡಿತ್ತು. ಆದರೆ ಹೋಳಿ ಹಬ್ಬದ ಕಾರಣ ಮಾರ್ಚ್ 22 ರಂದು ರಜೆ ಎಂದು ಘೋಷಿಸಿದ್ದರಿಂದ ಸಂಘಟಕರು ಅದನ್ನು ಏಪ್ರಿಲ್ 15ಕ್ಕೆ ಮುಂದೂಡಿದ್ದರು. ಕಾರ್ಯಕ್ರಮದ ಸ್ವರೂಪವನ್ನು ಬದಲಾಯಿಸಲಾಗಿಲ್ಲ, ಆದರೆ ವಿಶ್ವವಿದ್ಯಾನಿಲಯವು ಏಪ್ರಿಲ್ 13ರ ಶನಿವಾರದಂದು ನನಗೆ ಕಳುಹಿಸಿದ ಇ-ಮೇಲ್‌ನಲ್ಲಿ ಕಾರ್ಯಕ್ರಮ ರದ್ದು ಪಡಿಸುವ ಬಗ್ಗೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮ ನಡೆಸಲು ಮಾರ್ಚ್‌ನಲ್ಲಿ ಅನುಮತಿ ನೀಡಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಆಘಾತವಾಯಿತು. ನಾವು ಅದನ್ನು ಪ್ರಚಾರ ಮಾಡಿದ್ದರಿಂದ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರಿಂದ ನನಗೂ ಅವಮಾನವಾಗಿದೆ ಎಂದು ಅಪೂರ್ವಾನಂದ್ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ಕವಿ ಅಶೋಕ್ ವಾಜಪೇಯಿ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು, ವಿವಿಯ ಕಲಾ ವಿಭಾಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿತ್ತು ಎಂದು ಹೇಳಲಾಗಿದೆ.

ಕಾರ್ಯಕ್ರಮಕ್ಕೆ ಅನುಮತಿ ನೀಡದ ಆಡಳಿತದ ವಿರುದ್ಧ ಪ್ರತಿರೋಧದ ಭಾಗವಾಗಿ ಸಂಘಟಕರು ಮತ್ತು ವಿದ್ಯಾರ್ಥಿಗಳು ಕಾರಿಡಾರ್‌ನ ಕೊಠಡಿ ನಂ.22ರಲ್ಲಿ ಪ್ಯಾಲೆಸ್ತೀನ್ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಮತ್ತು  ಕವನವನ್ನು ವಾಚಿಸಲಾಗಿದೆ. ನಾವು ಕೋಣೆಯ ಹೊರಗಿನ ಕಾರಿಡಾರ್‌ನಲ್ಲಿ ನಿಂತು ಕವಿತೆಗಳನ್ನು ಓದಿದೆವು. ನಾವು ಕಾಲೇಜಿನಲ್ಲಿ ತೊಂದರೆ ಅಥವಾ ಯಾವುದೇ ಸಮಸ್ಯೆಯನ್ನು ಸೃಷ್ಟಿಸಲು ಬಯಸುವುದಿಲ್ಲ, ಪ್ಯಾಲೆಸ್ತೀನ್‌ ಬಗ್ಗೆ ಕಾರ್ಯಕ್ರಮ ಆಯೋಜಿಸಲು ನಮಗೆ ಅನುಮತಿಸದ ಕಾರಣ ನಾವು ಸಂದೇಶವನ್ನು ಕಳುಹಿಸಲು ಬಯಸಿದ್ದೇವೆ ಎಂದು ಅರ್ಜುಮಂದ್ ಅರಾ ಅವರು ಹೇಳಿದ್ದಾರೆ.

ಇದನ್ನು ಓದಿ: ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...