Homeಮುಖಪುಟ'ಪ್ಯಾಲೆಸ್ತೀನ್' ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

‘ಪ್ಯಾಲೆಸ್ತೀನ್’ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

- Advertisement -
- Advertisement -

ಪ್ಯಾಲೆಸ್ತೀನ್ ಬಿಕ್ಕಟ್ಟಿನ ಕುರಿತು ಏಪ್ರಿಲ್ 15ರಂದು ನಡೆಯಬೇಕಿದ್ದ ಕವನ ವಾಚನ ಕಾರ್ಯಕ್ರಮವನ್ನು ದೆಹಲಿ ವಿಶ್ವವಿದ್ಯಾಲಯವು ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸಿದೆ ಎಂದು ಕಾರ್ಯಕ್ರಮದ ಸಂಘಟಕರು ಆರೋಪಿಸಿದ್ದಾರೆ.

ಈ ಕುರಿತು ಕಾರ್ಯಕ್ರಮದ ಆಯೋಜಕರಾದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅಪೂರ್ವಾನಂದ್ ಮತ್ತು ಅರ್ಜುಮಂದ್ ಅರಾ ಮಾತನಾಡಿದ್ದು, ‘ನಾವು ಪ್ಯಾಲೆಸ್ತೀನರ ಪದವನ್ನು ಕೇಳೋಣ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಮಾರ್ಚ್ 22ರಂದು ನಡೆಸಬೇಕಾಗಿತ್ತು ಮತ್ತು ಅದಕ್ಕೆ ದೆಹಲಿ ವಿಶ್ವವಿದ್ಯಾಲಯವು ಮಾರ್ಚ್ 19ರಂದು ಅನುಮತಿ ನೀಡಿತ್ತು. ಆದರೆ ಹೋಳಿ ಹಬ್ಬದ ಕಾರಣ ಮಾರ್ಚ್ 22 ರಂದು ರಜೆ ಎಂದು ಘೋಷಿಸಿದ್ದರಿಂದ ಸಂಘಟಕರು ಅದನ್ನು ಏಪ್ರಿಲ್ 15ಕ್ಕೆ ಮುಂದೂಡಿದ್ದರು. ಕಾರ್ಯಕ್ರಮದ ಸ್ವರೂಪವನ್ನು ಬದಲಾಯಿಸಲಾಗಿಲ್ಲ, ಆದರೆ ವಿಶ್ವವಿದ್ಯಾನಿಲಯವು ಏಪ್ರಿಲ್ 13ರ ಶನಿವಾರದಂದು ನನಗೆ ಕಳುಹಿಸಿದ ಇ-ಮೇಲ್‌ನಲ್ಲಿ ಕಾರ್ಯಕ್ರಮ ರದ್ದು ಪಡಿಸುವ ಬಗ್ಗೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮ ನಡೆಸಲು ಮಾರ್ಚ್‌ನಲ್ಲಿ ಅನುಮತಿ ನೀಡಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಆಘಾತವಾಯಿತು. ನಾವು ಅದನ್ನು ಪ್ರಚಾರ ಮಾಡಿದ್ದರಿಂದ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರಿಂದ ನನಗೂ ಅವಮಾನವಾಗಿದೆ ಎಂದು ಅಪೂರ್ವಾನಂದ್ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ಕವಿ ಅಶೋಕ್ ವಾಜಪೇಯಿ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು, ವಿವಿಯ ಕಲಾ ವಿಭಾಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿತ್ತು ಎಂದು ಹೇಳಲಾಗಿದೆ.

ಕಾರ್ಯಕ್ರಮಕ್ಕೆ ಅನುಮತಿ ನೀಡದ ಆಡಳಿತದ ವಿರುದ್ಧ ಪ್ರತಿರೋಧದ ಭಾಗವಾಗಿ ಸಂಘಟಕರು ಮತ್ತು ವಿದ್ಯಾರ್ಥಿಗಳು ಕಾರಿಡಾರ್‌ನ ಕೊಠಡಿ ನಂ.22ರಲ್ಲಿ ಪ್ಯಾಲೆಸ್ತೀನ್ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಮತ್ತು  ಕವನವನ್ನು ವಾಚಿಸಲಾಗಿದೆ. ನಾವು ಕೋಣೆಯ ಹೊರಗಿನ ಕಾರಿಡಾರ್‌ನಲ್ಲಿ ನಿಂತು ಕವಿತೆಗಳನ್ನು ಓದಿದೆವು. ನಾವು ಕಾಲೇಜಿನಲ್ಲಿ ತೊಂದರೆ ಅಥವಾ ಯಾವುದೇ ಸಮಸ್ಯೆಯನ್ನು ಸೃಷ್ಟಿಸಲು ಬಯಸುವುದಿಲ್ಲ, ಪ್ಯಾಲೆಸ್ತೀನ್‌ ಬಗ್ಗೆ ಕಾರ್ಯಕ್ರಮ ಆಯೋಜಿಸಲು ನಮಗೆ ಅನುಮತಿಸದ ಕಾರಣ ನಾವು ಸಂದೇಶವನ್ನು ಕಳುಹಿಸಲು ಬಯಸಿದ್ದೇವೆ ಎಂದು ಅರ್ಜುಮಂದ್ ಅರಾ ಅವರು ಹೇಳಿದ್ದಾರೆ.

ಇದನ್ನು ಓದಿ: ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...