Homeಮುಖಪುಟ'ಪ್ಯಾಲೆಸ್ತೀನ್' ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

‘ಪ್ಯಾಲೆಸ್ತೀನ್’ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ದೆಹಲಿ ವಿವಿ: ಸಂಘಟಕರ ಆರೋಪ

- Advertisement -
- Advertisement -

ಪ್ಯಾಲೆಸ್ತೀನ್ ಬಿಕ್ಕಟ್ಟಿನ ಕುರಿತು ಏಪ್ರಿಲ್ 15ರಂದು ನಡೆಯಬೇಕಿದ್ದ ಕವನ ವಾಚನ ಕಾರ್ಯಕ್ರಮವನ್ನು ದೆಹಲಿ ವಿಶ್ವವಿದ್ಯಾಲಯವು ಯಾವುದೇ ಕಾರಣವನ್ನು ನೀಡದೆ ರದ್ದುಗೊಳಿಸಿದೆ ಎಂದು ಕಾರ್ಯಕ್ರಮದ ಸಂಘಟಕರು ಆರೋಪಿಸಿದ್ದಾರೆ.

ಈ ಕುರಿತು ಕಾರ್ಯಕ್ರಮದ ಆಯೋಜಕರಾದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅಪೂರ್ವಾನಂದ್ ಮತ್ತು ಅರ್ಜುಮಂದ್ ಅರಾ ಮಾತನಾಡಿದ್ದು, ‘ನಾವು ಪ್ಯಾಲೆಸ್ತೀನರ ಪದವನ್ನು ಕೇಳೋಣ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಮಾರ್ಚ್ 22ರಂದು ನಡೆಸಬೇಕಾಗಿತ್ತು ಮತ್ತು ಅದಕ್ಕೆ ದೆಹಲಿ ವಿಶ್ವವಿದ್ಯಾಲಯವು ಮಾರ್ಚ್ 19ರಂದು ಅನುಮತಿ ನೀಡಿತ್ತು. ಆದರೆ ಹೋಳಿ ಹಬ್ಬದ ಕಾರಣ ಮಾರ್ಚ್ 22 ರಂದು ರಜೆ ಎಂದು ಘೋಷಿಸಿದ್ದರಿಂದ ಸಂಘಟಕರು ಅದನ್ನು ಏಪ್ರಿಲ್ 15ಕ್ಕೆ ಮುಂದೂಡಿದ್ದರು. ಕಾರ್ಯಕ್ರಮದ ಸ್ವರೂಪವನ್ನು ಬದಲಾಯಿಸಲಾಗಿಲ್ಲ, ಆದರೆ ವಿಶ್ವವಿದ್ಯಾನಿಲಯವು ಏಪ್ರಿಲ್ 13ರ ಶನಿವಾರದಂದು ನನಗೆ ಕಳುಹಿಸಿದ ಇ-ಮೇಲ್‌ನಲ್ಲಿ ಕಾರ್ಯಕ್ರಮ ರದ್ದು ಪಡಿಸುವ ಬಗ್ಗೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮ ನಡೆಸಲು ಮಾರ್ಚ್‌ನಲ್ಲಿ ಅನುಮತಿ ನೀಡಿದ್ದು, ಅದನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಆಘಾತವಾಯಿತು. ನಾವು ಅದನ್ನು ಪ್ರಚಾರ ಮಾಡಿದ್ದರಿಂದ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರಿಂದ ನನಗೂ ಅವಮಾನವಾಗಿದೆ ಎಂದು ಅಪೂರ್ವಾನಂದ್ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಖ್ಯಾತ ಕವಿ ಅಶೋಕ್ ವಾಜಪೇಯಿ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು, ವಿವಿಯ ಕಲಾ ವಿಭಾಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿತ್ತು ಎಂದು ಹೇಳಲಾಗಿದೆ.

ಕಾರ್ಯಕ್ರಮಕ್ಕೆ ಅನುಮತಿ ನೀಡದ ಆಡಳಿತದ ವಿರುದ್ಧ ಪ್ರತಿರೋಧದ ಭಾಗವಾಗಿ ಸಂಘಟಕರು ಮತ್ತು ವಿದ್ಯಾರ್ಥಿಗಳು ಕಾರಿಡಾರ್‌ನ ಕೊಠಡಿ ನಂ.22ರಲ್ಲಿ ಪ್ಯಾಲೆಸ್ತೀನ್ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಮತ್ತು  ಕವನವನ್ನು ವಾಚಿಸಲಾಗಿದೆ. ನಾವು ಕೋಣೆಯ ಹೊರಗಿನ ಕಾರಿಡಾರ್‌ನಲ್ಲಿ ನಿಂತು ಕವಿತೆಗಳನ್ನು ಓದಿದೆವು. ನಾವು ಕಾಲೇಜಿನಲ್ಲಿ ತೊಂದರೆ ಅಥವಾ ಯಾವುದೇ ಸಮಸ್ಯೆಯನ್ನು ಸೃಷ್ಟಿಸಲು ಬಯಸುವುದಿಲ್ಲ, ಪ್ಯಾಲೆಸ್ತೀನ್‌ ಬಗ್ಗೆ ಕಾರ್ಯಕ್ರಮ ಆಯೋಜಿಸಲು ನಮಗೆ ಅನುಮತಿಸದ ಕಾರಣ ನಾವು ಸಂದೇಶವನ್ನು ಕಳುಹಿಸಲು ಬಯಸಿದ್ದೇವೆ ಎಂದು ಅರ್ಜುಮಂದ್ ಅರಾ ಅವರು ಹೇಳಿದ್ದಾರೆ.

ಇದನ್ನು ಓದಿ: ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...