Homeಮುಖಪುಟದೆಹಲಿ ವಿಶ್ವವಿದ್ಯಾಲಯ: 'ಮಾತೃಭಾಷೆ' ವಿಭಾಗದಲ್ಲಿ 'ಉರ್ದು' ಕೈಬಿಟ್ಟು, 'ಮುಸ್ಲಿಂ' ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

ದೆಹಲಿ ವಿಶ್ವವಿದ್ಯಾಲಯ: ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಕೈಬಿಟ್ಟು, ‘ಮುಸ್ಲಿಂ’ ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

- Advertisement -
- Advertisement -

ಹೊಸದಿಲ್ಲಿ: ದೆಹಲಿ ವಿಶ್ವವಿದ್ಯಾಲಯದ (ಡಿ.ಯು.) ಪದವಿಪೂರ್ವ ಪ್ರವೇಶ ಪೋರ್ಟಲ್ ಗುರುವಾರದಿಂದ ಲಭ್ಯವಾಗಿದ್ದು, ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಭಾಷೆಯನ್ನು ಕೈಬಿಟ್ಟು ‘ಮುಸ್ಲಿಂ’ ಅನ್ನು ಒಂದು ಆಯ್ಕೆಯಾಗಿ ಪಟ್ಟಿ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಇದನ್ನು ವಾಸ್ತವಿಕವಾಗಿ ತಪ್ಪು ಮತ್ತು ಕೋಮು ಸಂವೇದನಾರಹಿತ ನಡೆಯಾಗಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಲಕ್ಷಾಂತರ ಜನರು, ವಿಶೇಷವಾಗಿ ಉತ್ತರ ಭಾರತದ ಮುಸ್ಲಿಂ ಸಮುದಾಯಗಳಲ್ಲಿ ವ್ಯಾಪಕವಾಗಿ ಮಾತನಾಡುವ, ಮತ್ತು ಸಂವಿಧಾನದ ಎಂಟನೇ ಅನುಸೂಚಿಯ ಅಡಿಯಲ್ಲಿ ಅಧಿಕೃತವಾಗಿ ಗುರುತಿಸಲ್ಪಟ್ಟ ಭಾಷೆಯಾದ ಉರ್ದುವನ್ನು ಪಟ್ಟಿಯಿಂದ ತೆಗೆದುಹಾಕಿರುವ ಹಿನ್ನೆಲೆಯಲ್ಲಿ ಈ ವಿವಾದ ಮತ್ತಷ್ಟು ತೀವ್ರಗೊಂಡಿದೆ.

ಅಲ್ಲದೆ, ಅರ್ಜಿ ನಮೂನೆಯಲ್ಲಿ ‘ಮಾತೃಭಾಷೆ’ ವಿಭಾಗದ ಅಡಿಯಲ್ಲಿ ‘ಬಿಹಾರಿ’, ‘ಚಮಾರ್’, ‘ಮಜ್ದೂರ್’, ‘ದೇಹಾತಿ’, ‘ಮೋಚಿ’ ಮತ್ತು ‘ಕುರ್ಮಿ’ ನಂತಹ ಜಾತಿ ಮತ್ತು ಉದ್ಯೋಗ ಸಂಬಂಧಿತ ಪದಗಳನ್ನು ಸಹ ಸೇರಿಸಲಾಗಿದೆ. ಇದು ಅರ್ಜಿ ನಮೂನೆಯ ರಚನೆಯ ಹಿಂದಿನ ತರ್ಕ ಮತ್ತು ಉದ್ದೇಶದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಡಿಟಿಎಫ್‌ನ ಪ್ರಧಾನ ಕಾರ್ಯದರ್ಶಿ ಆಭಾ ದೇವ್ ಹಬೀಬ್, ಈ ವಿಷಯವನ್ನು ಖಂಡಿಸಿದ್ದಾರೆ. ಉರ್ದು ಭಾರತದ ಮಾನ್ಯತೆ ಪಡೆದ ಭಾಷೆಗಳಲ್ಲಿ ಒಂದಾಗಿ ಸಾಂವಿಧಾನಿಕ ಸ್ಥಾನಮಾನವನ್ನು ಹೊಂದಿದೆ ಮತ್ತು ಮುಸ್ಲಿಮರು ತಮ್ಮ ಪ್ರದೇಶಗಳ ಇತರರಂತೆ ವಿವಿಧ ಭಾಷೆಗಳನ್ನು ಮಾತನಾಡುತ್ತಾರೆ ಎಂದು ಅವರು ಒತ್ತಿ ಹೇಳಿದರು.

“ಪದವಿಪೂರ್ವ ಪ್ರವೇಶಕ್ಕಾಗಿ ವಿಶ್ವವಿದ್ಯಾಲಯದ ನೋಂದಣಿ ನಮೂನೆ ಇದಕ್ಕಿಂತ ಹೆಚ್ಚು ಇಸ್ಲಾಮೊಫೋಬಿಕ್ ಆಗಲು ಸಾಧ್ಯವಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

“ಕೇಂದ್ರ ವಿಶ್ವವಿದ್ಯಾಲಯವು ಇಂತಹ ನಮೂನೆಯನ್ನು ಹೇಗೆ ಪ್ರಕಟಿಸಬಹುದು? ಇದು ಕೋಮು ಮನಸ್ಥಿತಿಯಿಂದ ಕೂಡಿದೆ. ಇದನ್ನು ಖಂಡಿಸಬೇಕು ಮತ್ತು ಇದಕ್ಕೆ ಸಂಬಂಧಪಟ್ಟವರು ತಕ್ಷಣವೇ ಕ್ಷಮೆಯಾಚಿಸುವುದರೊಂದಿಗೆ ತಿದ್ದುಪಡಿ ಮಾಡಬೇಕು” ಎಂದು ಅವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ.

ಇಂತಹ ಪ್ರಮುಖ ವಿಶ್ವವಿದ್ಯಾಲಯವು ಈ ರೀತಿ ತಪ್ಪುಗಳನ್ನು ಮಾಡುತ್ತಿರುವುದು ಖೇದಕರ. ಯಾವುದೇ ವಿವಿಯು ಬಹುಭಾಷಾತ್ವವನ್ನು ಗೌರವಿಸಬೇಕು ಎಂದು ವಿವಿಯ ಕಾರ್ಯಕಾರಿ ಮಂಡಳಿಯ ಸದಸ್ಯ ಡಾ. ಮಿಥುರಾಜ್ ಧುಸಿಯಾ ಹೇಳಿದ್ದಾರೆ.

ಕಿರೂರಿ ಮಾಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರುದ್ರಾಶಿಶ್ ಚಕ್ರವರ್ತಿ ಅವರು ಪ್ರವೇಶ ನಮೂನೆಯನ್ನು ಕೋಮುಪ್ರಚೋದನೆಯ ಯೋಜಿತ ಕೃತ್ಯ ಎಂದು ಟೀಕಿಸಿದ್ದಾರೆ.

“ವಿವಿ ಆಡಳಿತದ ಈ ಕೃತ್ಯವು ಭಾರತದ ಸಂವಿಧಾನಕ್ಕೆ ಗಂಭೀರ ಬೆದರಿಕೆಯಾಗಿದೆ. ಏಕೆಂದರೆ ಇದು ಸಂವಿಧಾನದ ಎಂಟನೇ ಅನುಸೂಚಿಯನ್ನು ಉಲ್ಲಂಘಿಸುತ್ತದೆ ಮತ್ತು ಇದು ಕೇಂದ್ರೀಯ ವಿಶ್ವವಿದ್ಯಾಲಯದ ಸಮಗ್ರ ಮತ್ತು ಒಳಗೊಳ್ಳುವ ಮನೋಭಾವವನ್ನು ದುರ್ಬಲಗೊಳಿಸುತ್ತದೆ” ಎಂದು ಅವರು ಹೇಳಿದರು.

ವಿವಿಯ ಅಧಿಕಾರಿಗಳು ದೋಷವನ್ನು ಸರಿಪಡಿಸಿದ್ದರೂ, ಈ ಕುರಿತು ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...