Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ ಈಗಿನಿಂದಲೇ ಹೊಸ ಹೊಸ ಪ್ರಯೋಗಗಳ ಮೂಲಕ ಉತ್ತರ ಪ್ರದೇಶದಲ್ಲಿ ನೆಲೆಗೊಳ್ಳಲು ಪ್ರಯತ್ನಿಸುತ್ತಿದೆ. ಆಪ್ ನಾಯಕ ಅರವಿಂದ್ ಕೇಜ್ರೀವಾಲ್ ಇಂತಹದೊಂದು ಘೋಷಣೆ ಹೊರಡಿಸುತ್ತಿದ್ದಂತೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಇದು ಈಗ ಶಾಲೆಗಳ ಅಭಿವೃದ್ಧಿಗೆ ಬಂದು ನಿಂತಿದ್ದು, ಆಪ್ ಸರ್ಕಾರಿ ಶಾಲೆಗಳ ಬಗ್ಗೆ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಘೋಷಿಸಿದ್ದ ಅರವಿಂದ್ ಕೇಜ್ರೀವಾಲ್, ಜೊತೆಗೆ ದೆಹಲಿ ಮತ್ತು ಉತ್ತರ ಪ್ರದೇಶದ ಶಾಲೆಗಳನ್ನು ಹೋಲಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರ ಪ್ರದೇಶದ ಪ್ರಾಥಮಿಕ ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಸತೀಶ್ ದ್ವಿವೇದಿ ಸೇರಿದಂತೆ ಉತ್ತರ ಪ್ರದೇಶದ ಹಲವಾರು ಮಂತ್ರಿಗಳು ಎಸೆದ ಸವಾಲನ್ನು ತಾವು ಒಪ್ಪಿಕೊಂಡಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ದೆಹಲಿ ಸಚಿವರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲು ಮತ್ತು ಎರಡು ರಾಜ್ಯಗಳಲ್ಲಿನ ಶಿಕ್ಷಣ ಮತ್ತು ಶಾಲಾ ಸೌಲಭ್ಯಗಳ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

Image
PC:Twitter@AamAadmiParty (ಉತ್ತರ ಪ್ರದೇಶದ ಸರ್ಕಾರಿ ಶಾಲೆಯೊಂದರ ಚಿತ್ರ)

ಈಗ #SelfieWithSarkaariSchool ಅಭಿಯಾನ ಆರಂಭಿಸಿರುವ ಆಪ್, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯುತ್ತಿದೆ. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಜನಸಂಖ್ಯೆ ಆಧಾರದಲ್ಲಿ ಮಕ್ಕಳ ಶಿಕ್ಷಣವನ್ನು ಹೊಲಿಕೆ ಮಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಬ್ಬರೂ ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಸಾಧ್ಯವಾಗದಿದ್ದರೆ ಅವರು ಅಧಿಕಾರ ಬಿಟ್ಟುಬಿಡಬೇಕು ಎಂದು ಮನೀಶ್ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸಿಸೋಡಿಯಾ ಮಾತಿಗೆ ಬೆಂಬಲ ನೀಡಿರುವ ಅರವಿಂದ್ ಕೇಜ್ರೀವಾಲ್ ಕೂಡ “ಜನಸಂಖ್ಯೆ 5 ಲಕ್ಷ ಅಥವಾ 5 ಕೋಟಿ ಆಗಿರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ನೀಡುವುದು ನಮ್ಮ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಆಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಆಪ್ ಮುಖಂಡರಷ್ಟೇ ಅಲ್ಲದೇ ಸಾರ್ವಜನಿಕರು ತಮ್ಮ ಊರುಗಳಲ್ಲಿನ ಸರ್ಕಾರಿ ಶಾಲಾ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಹೀಗಿದೆ ಎಂದು ಹಲವು ನೆಟ್ಟಿಗರು ಪೋಟೋ ಶೇರ್‌ ಮಾಡಿದ್ದಾರೆ.

ಸದ್ಯ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಪ್ ಸರ್ಕಾರ ದೆಹಲಿ ಶಾಲೆಗಳ ಜೊತೆಗೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳನ್ನು ಹೋಲಿಕೆ ಮಾಡುತ್ತಿದೆ. ಈ ಮೂಲಕ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದೆ.


ಇದನ್ನೂ ಓದಿ: ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...