Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ ಈಗಿನಿಂದಲೇ ಹೊಸ ಹೊಸ ಪ್ರಯೋಗಗಳ ಮೂಲಕ ಉತ್ತರ ಪ್ರದೇಶದಲ್ಲಿ ನೆಲೆಗೊಳ್ಳಲು ಪ್ರಯತ್ನಿಸುತ್ತಿದೆ. ಆಪ್ ನಾಯಕ ಅರವಿಂದ್ ಕೇಜ್ರೀವಾಲ್ ಇಂತಹದೊಂದು ಘೋಷಣೆ ಹೊರಡಿಸುತ್ತಿದ್ದಂತೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಇದು ಈಗ ಶಾಲೆಗಳ ಅಭಿವೃದ್ಧಿಗೆ ಬಂದು ನಿಂತಿದ್ದು, ಆಪ್ ಸರ್ಕಾರಿ ಶಾಲೆಗಳ ಬಗ್ಗೆ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಘೋಷಿಸಿದ್ದ ಅರವಿಂದ್ ಕೇಜ್ರೀವಾಲ್, ಜೊತೆಗೆ ದೆಹಲಿ ಮತ್ತು ಉತ್ತರ ಪ್ರದೇಶದ ಶಾಲೆಗಳನ್ನು ಹೋಲಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರ ಪ್ರದೇಶದ ಪ್ರಾಥಮಿಕ ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಸತೀಶ್ ದ್ವಿವೇದಿ ಸೇರಿದಂತೆ ಉತ್ತರ ಪ್ರದೇಶದ ಹಲವಾರು ಮಂತ್ರಿಗಳು ಎಸೆದ ಸವಾಲನ್ನು ತಾವು ಒಪ್ಪಿಕೊಂಡಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ದೆಹಲಿ ಸಚಿವರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲು ಮತ್ತು ಎರಡು ರಾಜ್ಯಗಳಲ್ಲಿನ ಶಿಕ್ಷಣ ಮತ್ತು ಶಾಲಾ ಸೌಲಭ್ಯಗಳ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

Image
PC:Twitter@AamAadmiParty (ಉತ್ತರ ಪ್ರದೇಶದ ಸರ್ಕಾರಿ ಶಾಲೆಯೊಂದರ ಚಿತ್ರ)

ಈಗ #SelfieWithSarkaariSchool ಅಭಿಯಾನ ಆರಂಭಿಸಿರುವ ಆಪ್, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯುತ್ತಿದೆ. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಜನಸಂಖ್ಯೆ ಆಧಾರದಲ್ಲಿ ಮಕ್ಕಳ ಶಿಕ್ಷಣವನ್ನು ಹೊಲಿಕೆ ಮಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಬ್ಬರೂ ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಸಾಧ್ಯವಾಗದಿದ್ದರೆ ಅವರು ಅಧಿಕಾರ ಬಿಟ್ಟುಬಿಡಬೇಕು ಎಂದು ಮನೀಶ್ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸಿಸೋಡಿಯಾ ಮಾತಿಗೆ ಬೆಂಬಲ ನೀಡಿರುವ ಅರವಿಂದ್ ಕೇಜ್ರೀವಾಲ್ ಕೂಡ “ಜನಸಂಖ್ಯೆ 5 ಲಕ್ಷ ಅಥವಾ 5 ಕೋಟಿ ಆಗಿರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ನೀಡುವುದು ನಮ್ಮ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಆಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಆಪ್ ಮುಖಂಡರಷ್ಟೇ ಅಲ್ಲದೇ ಸಾರ್ವಜನಿಕರು ತಮ್ಮ ಊರುಗಳಲ್ಲಿನ ಸರ್ಕಾರಿ ಶಾಲಾ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಹೀಗಿದೆ ಎಂದು ಹಲವು ನೆಟ್ಟಿಗರು ಪೋಟೋ ಶೇರ್‌ ಮಾಡಿದ್ದಾರೆ.

ಸದ್ಯ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಪ್ ಸರ್ಕಾರ ದೆಹಲಿ ಶಾಲೆಗಳ ಜೊತೆಗೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳನ್ನು ಹೋಲಿಕೆ ಮಾಡುತ್ತಿದೆ. ಈ ಮೂಲಕ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದೆ.


ಇದನ್ನೂ ಓದಿ: ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...