Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ ಈಗಿನಿಂದಲೇ ಹೊಸ ಹೊಸ ಪ್ರಯೋಗಗಳ ಮೂಲಕ ಉತ್ತರ ಪ್ರದೇಶದಲ್ಲಿ ನೆಲೆಗೊಳ್ಳಲು ಪ್ರಯತ್ನಿಸುತ್ತಿದೆ. ಆಪ್ ನಾಯಕ ಅರವಿಂದ್ ಕೇಜ್ರೀವಾಲ್ ಇಂತಹದೊಂದು ಘೋಷಣೆ ಹೊರಡಿಸುತ್ತಿದ್ದಂತೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಇದು ಈಗ ಶಾಲೆಗಳ ಅಭಿವೃದ್ಧಿಗೆ ಬಂದು ನಿಂತಿದ್ದು, ಆಪ್ ಸರ್ಕಾರಿ ಶಾಲೆಗಳ ಬಗ್ಗೆ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಘೋಷಿಸಿದ್ದ ಅರವಿಂದ್ ಕೇಜ್ರೀವಾಲ್, ಜೊತೆಗೆ ದೆಹಲಿ ಮತ್ತು ಉತ್ತರ ಪ್ರದೇಶದ ಶಾಲೆಗಳನ್ನು ಹೋಲಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರ ಪ್ರದೇಶದ ಪ್ರಾಥಮಿಕ ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಸತೀಶ್ ದ್ವಿವೇದಿ ಸೇರಿದಂತೆ ಉತ್ತರ ಪ್ರದೇಶದ ಹಲವಾರು ಮಂತ್ರಿಗಳು ಎಸೆದ ಸವಾಲನ್ನು ತಾವು ಒಪ್ಪಿಕೊಂಡಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ದೆಹಲಿ ಸಚಿವರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲು ಮತ್ತು ಎರಡು ರಾಜ್ಯಗಳಲ್ಲಿನ ಶಿಕ್ಷಣ ಮತ್ತು ಶಾಲಾ ಸೌಲಭ್ಯಗಳ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

Image
PC:Twitter@AamAadmiParty (ಉತ್ತರ ಪ್ರದೇಶದ ಸರ್ಕಾರಿ ಶಾಲೆಯೊಂದರ ಚಿತ್ರ)

ಈಗ #SelfieWithSarkaariSchool ಅಭಿಯಾನ ಆರಂಭಿಸಿರುವ ಆಪ್, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯುತ್ತಿದೆ. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಜನಸಂಖ್ಯೆ ಆಧಾರದಲ್ಲಿ ಮಕ್ಕಳ ಶಿಕ್ಷಣವನ್ನು ಹೊಲಿಕೆ ಮಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಬ್ಬರೂ ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಸಾಧ್ಯವಾಗದಿದ್ದರೆ ಅವರು ಅಧಿಕಾರ ಬಿಟ್ಟುಬಿಡಬೇಕು ಎಂದು ಮನೀಶ್ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸಿಸೋಡಿಯಾ ಮಾತಿಗೆ ಬೆಂಬಲ ನೀಡಿರುವ ಅರವಿಂದ್ ಕೇಜ್ರೀವಾಲ್ ಕೂಡ “ಜನಸಂಖ್ಯೆ 5 ಲಕ್ಷ ಅಥವಾ 5 ಕೋಟಿ ಆಗಿರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ನೀಡುವುದು ನಮ್ಮ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಆಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಆಪ್ ಮುಖಂಡರಷ್ಟೇ ಅಲ್ಲದೇ ಸಾರ್ವಜನಿಕರು ತಮ್ಮ ಊರುಗಳಲ್ಲಿನ ಸರ್ಕಾರಿ ಶಾಲಾ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಹೀಗಿದೆ ಎಂದು ಹಲವು ನೆಟ್ಟಿಗರು ಪೋಟೋ ಶೇರ್‌ ಮಾಡಿದ್ದಾರೆ.

ಸದ್ಯ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಪ್ ಸರ್ಕಾರ ದೆಹಲಿ ಶಾಲೆಗಳ ಜೊತೆಗೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳನ್ನು ಹೋಲಿಕೆ ಮಾಡುತ್ತಿದೆ. ಈ ಮೂಲಕ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದೆ.


ಇದನ್ನೂ ಓದಿ: ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...