Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ ಈಗಿನಿಂದಲೇ ಹೊಸ ಹೊಸ ಪ್ರಯೋಗಗಳ ಮೂಲಕ ಉತ್ತರ ಪ್ರದೇಶದಲ್ಲಿ ನೆಲೆಗೊಳ್ಳಲು ಪ್ರಯತ್ನಿಸುತ್ತಿದೆ. ಆಪ್ ನಾಯಕ ಅರವಿಂದ್ ಕೇಜ್ರೀವಾಲ್ ಇಂತಹದೊಂದು ಘೋಷಣೆ ಹೊರಡಿಸುತ್ತಿದ್ದಂತೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಇದು ಈಗ ಶಾಲೆಗಳ ಅಭಿವೃದ್ಧಿಗೆ ಬಂದು ನಿಂತಿದ್ದು, ಆಪ್ ಸರ್ಕಾರಿ ಶಾಲೆಗಳ ಬಗ್ಗೆ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಘೋಷಿಸಿದ್ದ ಅರವಿಂದ್ ಕೇಜ್ರೀವಾಲ್, ಜೊತೆಗೆ ದೆಹಲಿ ಮತ್ತು ಉತ್ತರ ಪ್ರದೇಶದ ಶಾಲೆಗಳನ್ನು ಹೋಲಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರ ಪ್ರದೇಶದ ಪ್ರಾಥಮಿಕ ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಸತೀಶ್ ದ್ವಿವೇದಿ ಸೇರಿದಂತೆ ಉತ್ತರ ಪ್ರದೇಶದ ಹಲವಾರು ಮಂತ್ರಿಗಳು ಎಸೆದ ಸವಾಲನ್ನು ತಾವು ಒಪ್ಪಿಕೊಂಡಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ದೆಹಲಿ ಸಚಿವರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲು ಮತ್ತು ಎರಡು ರಾಜ್ಯಗಳಲ್ಲಿನ ಶಿಕ್ಷಣ ಮತ್ತು ಶಾಲಾ ಸೌಲಭ್ಯಗಳ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

Image
PC:Twitter@AamAadmiParty (ಉತ್ತರ ಪ್ರದೇಶದ ಸರ್ಕಾರಿ ಶಾಲೆಯೊಂದರ ಚಿತ್ರ)

ಈಗ #SelfieWithSarkaariSchool ಅಭಿಯಾನ ಆರಂಭಿಸಿರುವ ಆಪ್, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯುತ್ತಿದೆ. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಜನಸಂಖ್ಯೆ ಆಧಾರದಲ್ಲಿ ಮಕ್ಕಳ ಶಿಕ್ಷಣವನ್ನು ಹೊಲಿಕೆ ಮಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಬ್ಬರೂ ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಸಾಧ್ಯವಾಗದಿದ್ದರೆ ಅವರು ಅಧಿಕಾರ ಬಿಟ್ಟುಬಿಡಬೇಕು ಎಂದು ಮನೀಶ್ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸಿಸೋಡಿಯಾ ಮಾತಿಗೆ ಬೆಂಬಲ ನೀಡಿರುವ ಅರವಿಂದ್ ಕೇಜ್ರೀವಾಲ್ ಕೂಡ “ಜನಸಂಖ್ಯೆ 5 ಲಕ್ಷ ಅಥವಾ 5 ಕೋಟಿ ಆಗಿರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ನೀಡುವುದು ನಮ್ಮ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಆಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಆಪ್ ಮುಖಂಡರಷ್ಟೇ ಅಲ್ಲದೇ ಸಾರ್ವಜನಿಕರು ತಮ್ಮ ಊರುಗಳಲ್ಲಿನ ಸರ್ಕಾರಿ ಶಾಲಾ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಹೀಗಿದೆ ಎಂದು ಹಲವು ನೆಟ್ಟಿಗರು ಪೋಟೋ ಶೇರ್‌ ಮಾಡಿದ್ದಾರೆ.

ಸದ್ಯ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಪ್ ಸರ್ಕಾರ ದೆಹಲಿ ಶಾಲೆಗಳ ಜೊತೆಗೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳನ್ನು ಹೋಲಿಕೆ ಮಾಡುತ್ತಿದೆ. ಈ ಮೂಲಕ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದೆ.


ಇದನ್ನೂ ಓದಿ: ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...