Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷ ಈಗಿನಿಂದಲೇ ಹೊಸ ಹೊಸ ಪ್ರಯೋಗಗಳ ಮೂಲಕ ಉತ್ತರ ಪ್ರದೇಶದಲ್ಲಿ ನೆಲೆಗೊಳ್ಳಲು ಪ್ರಯತ್ನಿಸುತ್ತಿದೆ. ಆಪ್ ನಾಯಕ ಅರವಿಂದ್ ಕೇಜ್ರೀವಾಲ್ ಇಂತಹದೊಂದು ಘೋಷಣೆ ಹೊರಡಿಸುತ್ತಿದ್ದಂತೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಇದು ಈಗ ಶಾಲೆಗಳ ಅಭಿವೃದ್ಧಿಗೆ ಬಂದು ನಿಂತಿದ್ದು, ಆಪ್ ಸರ್ಕಾರಿ ಶಾಲೆಗಳ ಬಗ್ಗೆ ಅಭಿಯಾನವನ್ನೇ ಆರಂಭಿಸಿದೆ.

ಚುನಾವಣೆಯಲ್ಲಿ ಸ್ಫರ್ಧಿಸುವುದಾಗಿ ಘೋಷಿಸಿದ್ದ ಅರವಿಂದ್ ಕೇಜ್ರೀವಾಲ್, ಜೊತೆಗೆ ದೆಹಲಿ ಮತ್ತು ಉತ್ತರ ಪ್ರದೇಶದ ಶಾಲೆಗಳನ್ನು ಹೋಲಿಸಿ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರ ಪ್ರದೇಶದ ಪ್ರಾಥಮಿಕ ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.

ಸತೀಶ್ ದ್ವಿವೇದಿ ಸೇರಿದಂತೆ ಉತ್ತರ ಪ್ರದೇಶದ ಹಲವಾರು ಮಂತ್ರಿಗಳು ಎಸೆದ ಸವಾಲನ್ನು ತಾವು ಒಪ್ಪಿಕೊಂಡಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ದೆಹಲಿ ಸಚಿವರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲು ಮತ್ತು ಎರಡು ರಾಜ್ಯಗಳಲ್ಲಿನ ಶಿಕ್ಷಣ ಮತ್ತು ಶಾಲಾ ಸೌಲಭ್ಯಗಳ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

Image
PC:Twitter@AamAadmiParty (ಉತ್ತರ ಪ್ರದೇಶದ ಸರ್ಕಾರಿ ಶಾಲೆಯೊಂದರ ಚಿತ್ರ)

ಈಗ #SelfieWithSarkaariSchool ಅಭಿಯಾನ ಆರಂಭಿಸಿರುವ ಆಪ್, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯುತ್ತಿದೆ. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಜನಸಂಖ್ಯೆ ಆಧಾರದಲ್ಲಿ ಮಕ್ಕಳ ಶಿಕ್ಷಣವನ್ನು ಹೊಲಿಕೆ ಮಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾತಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಬ್ಬರೂ ತಿರುಗೇಟು ನೀಡಿದ್ದಾರೆ.

ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಸಾಧ್ಯವಾಗದಿದ್ದರೆ ಅವರು ಅಧಿಕಾರ ಬಿಟ್ಟುಬಿಡಬೇಕು ಎಂದು ಮನೀಶ್ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ಸಿಸೋಡಿಯಾ ಮಾತಿಗೆ ಬೆಂಬಲ ನೀಡಿರುವ ಅರವಿಂದ್ ಕೇಜ್ರೀವಾಲ್ ಕೂಡ “ಜನಸಂಖ್ಯೆ 5 ಲಕ್ಷ ಅಥವಾ 5 ಕೋಟಿ ಆಗಿರಲಿ, ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯವನ್ನು ನೀಡುವುದು ನಮ್ಮ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಆಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಆಪ್ ಮುಖಂಡರಷ್ಟೇ ಅಲ್ಲದೇ ಸಾರ್ವಜನಿಕರು ತಮ್ಮ ಊರುಗಳಲ್ಲಿನ ಸರ್ಕಾರಿ ಶಾಲಾ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಹೀಗಿದೆ ಎಂದು ಹಲವು ನೆಟ್ಟಿಗರು ಪೋಟೋ ಶೇರ್‌ ಮಾಡಿದ್ದಾರೆ.

ಸದ್ಯ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಪ್ ಸರ್ಕಾರ ದೆಹಲಿ ಶಾಲೆಗಳ ಜೊತೆಗೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳನ್ನು ಹೋಲಿಕೆ ಮಾಡುತ್ತಿದೆ. ಈ ಮೂಲಕ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದೆ.


ಇದನ್ನೂ ಓದಿ: ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...