Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತ ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಲಿಲ್ಲ..

- Advertisement -
- Advertisement -

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸರ್ಕಾರಿ ಶಾಲೆಗಳ ಅಭಿವೃದ್ದಿ ಕುರಿತು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದ ಉತ್ತರ ಪ್ರದೇಶದ ಸಚಿವರು ಇಂದು ಚರ್ಚೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಲಕ್ನೋದಲ್ಲಿ ಜರುಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ, ಸಚಿವರು ಎಲ್ಲರೂ ವಾಕ್ಸಮರ ಆರಂಭಿಸಿದ್ದರು. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳು ಮತ್ತು ಅರವಿಂದ್ ಕೇಜ್ರಿವಾಲ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ಹೋಲಿಕೆ ಎಂಬ ಚರ್ಚೆ ಆರಂಭವಾಗಿತ್ತು.

ಉತ್ತರ ಪ್ರದೇಶದ ಸಚಿವರ ಸವಾಲು ಸ್ವೀಕರಿಸಿದ್ದೇನೆ ಎಂದು ಡಿಸೆಂಬರ್‌ 16 ರಂದು ತಿಳಿಸಿದ್ದ ಸಿಸೋಡಿಯಾ ಇಂದು ಲಕ್ನೋಗೆ ತೆರಳಿದ್ದರು. ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತು ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಿಲ್ಲ.

 

“ನಾನು ನಿಮ್ಮ ಸವಾಲನ್ನು ಸ್ವೀಕರಿಸಿ ಲಕ್ನೋಗೆ ಕೇಜ್ರಿವಾಲ್ ಮಾದರಿ ಮತ್ತು ಯೋಗಿ ಮಾದರಿಯನ್ನು ಚರ್ಚಿಸಲು ಬಂದೆ. ಆದರೆ ನೀವು ಚರ್ಚೆಯಿಂದ ಹಿಂದೆ ಸರಿದಿದ್ದೀರಿ. ಈಗ ನಾನು ಯುಪಿಯ ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಅವರ ಆಹ್ವಾನದ ಮೇರೆಗೆ ಲಕ್ನೋ ಶಾಲೆಯನ್ನು ನೋಡಲು ಹೋಗುತ್ತಿದ್ದೇನೆ” ಎಂದು ಸಿಸೋಡಿಯಾ ಟ್ವೀಟ್‌ ಮಾಡಿದ್ದರು.

ಉತ್ತರ ಪ್ರದೇಶ ಸರ್ಕಾರದಿಂದ ಯಾವ ಮಂತ್ರಿಯೂ ಚರ್ಚೆಗೆ ಬಾರದೆ, ಮನೀಶ್ ಸಿಸೋಡಿಯಾ ಅವರನ್ನು ಲಕ್ನೋದಲ್ಲಿನ ಸರ್ಕಾರಿ ಶಾಲೆಗಳನ್ನು ನೋಡಲು ಬಿಡದೆ ಯೋಗಿ ಸರ್ಕಾರ ಪೊಲೀಸರನ್ನು ನಿಯೋಜಿಸಿತ್ತು. ಇದನ್ನು ಮೀರಿ ಸಿಸೋಡಿಯಾ ಲಕ್ನೋ ಶಾಲೆಗಳನ್ನು ನೋಡಲು ಹೊರಟಿದ್ದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಜೊತೆಗೆ ಶಾಲೆಗಳನ್ನು ನೋಡಲು ಹೋದ ಆರೋಪದ ಮೇಲೆ ಜೈಲಿಗೆ ಹಾಕುವಿರಾ..?, ಸತೀಶ್ ದ್ವಿವೇದಿ ಅವರೇ ನೀವು ತಾನೇ ನನ್ನನ್ನು ಶಾಲೆ ನೊಡಲು ಆಹ್ವಾನ ನೀಡಿದ್ದು ಎಂದು ಸಿಸೋಡಿಯಾ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಈ ಬೆಳವಣಿಗಳ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ #DarrGayaYogi ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ನಲ್ಲಿದೆ. ವಿಧ ವಿಧವಾದ ಮಿಮ್ಸ್‌ಗಳು ಟ್ವಿಟರ್‌ನಲ್ಲಿ ಓಡಾಡುತ್ತಿವೆ.

ಬಿಜೆಪಿ ನಾಯಕರ ಹಳೆಯ ವಿಡಿಯೋ ತುಣುಕುಗಳನ್ನು ಟ್ಯಾಗ್ ಮಾಡಿ, ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವರನ್ನು #DarrGayaYogi ಹ್ಯಾಶ್‌ಟ್ಯಾಗ್ ಬಳಸಿ ವ್ಯಂಗ್ಯವಾಡುತ್ತಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಟ್ವಿಟರ್‌ ಬಳಕೆದಾರರೊಬ್ಬರು ಇಬ್ಬರು ಶಿಕ್ಷಣ ಮಂತ್ರಿಗಳ ಚಿತ್ರಗಳನ್ನು ಹಂಚಿಕೊಂಡು, ಇಬ್ಬರ ನಡುವಿನ ವ್ಯತ್ಯಾಸ ಎಲ್ಲವನ್ನೂ ಹೇಳುತ್ತಿದೆ ಎಂದಿದ್ದಾರೆ. ಚಿತ್ರದಲ್ಲಿ ಮನೀಶ್ ಸಿಸೋಡಿಯಾ ಮಕ್ಕಳಿಗೆ ಪಾಠ ಮಾಡುತ್ತಿದ್ದರೆ, ಯುಪಿ ಸಚಿವರು ಹಸುಗಳಿಗೆ ಹುಲ್ಲು ನೀಡುತ್ತಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಚರ್ಚೆಗೆ ಬರಲು ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಶಾಲೆಗಳನ್ನು ನಿರ್ಮಿಸಿಲ್ಲ. ಅವರು ನಿರ್ಮಿಸಿರುವುದು ಕೇವಲ ಅಸ್ಥಿ ಪಂಜರಗಳನ್ನು ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಆಡಳಿತದ ಮಾದರಿ ಎಂದು ಆಮ್ ಆದ್ಮಿ ಪಾರ್ಟಿ, #SelfieWithSarkaariSchool ಅಭಿಯಾನ ಆರಂಭಿಸಿತ್ತು. ಅಭಿಯಾನದ ಮೂಲಕ ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯಲಾಗಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಇನ್ನು ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...