Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತ ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಲಿಲ್ಲ..

- Advertisement -
- Advertisement -

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸರ್ಕಾರಿ ಶಾಲೆಗಳ ಅಭಿವೃದ್ದಿ ಕುರಿತು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದ ಉತ್ತರ ಪ್ರದೇಶದ ಸಚಿವರು ಇಂದು ಚರ್ಚೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಲಕ್ನೋದಲ್ಲಿ ಜರುಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ, ಸಚಿವರು ಎಲ್ಲರೂ ವಾಕ್ಸಮರ ಆರಂಭಿಸಿದ್ದರು. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳು ಮತ್ತು ಅರವಿಂದ್ ಕೇಜ್ರಿವಾಲ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ಹೋಲಿಕೆ ಎಂಬ ಚರ್ಚೆ ಆರಂಭವಾಗಿತ್ತು.

ಉತ್ತರ ಪ್ರದೇಶದ ಸಚಿವರ ಸವಾಲು ಸ್ವೀಕರಿಸಿದ್ದೇನೆ ಎಂದು ಡಿಸೆಂಬರ್‌ 16 ರಂದು ತಿಳಿಸಿದ್ದ ಸಿಸೋಡಿಯಾ ಇಂದು ಲಕ್ನೋಗೆ ತೆರಳಿದ್ದರು. ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತು ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಿಲ್ಲ.

 

“ನಾನು ನಿಮ್ಮ ಸವಾಲನ್ನು ಸ್ವೀಕರಿಸಿ ಲಕ್ನೋಗೆ ಕೇಜ್ರಿವಾಲ್ ಮಾದರಿ ಮತ್ತು ಯೋಗಿ ಮಾದರಿಯನ್ನು ಚರ್ಚಿಸಲು ಬಂದೆ. ಆದರೆ ನೀವು ಚರ್ಚೆಯಿಂದ ಹಿಂದೆ ಸರಿದಿದ್ದೀರಿ. ಈಗ ನಾನು ಯುಪಿಯ ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಅವರ ಆಹ್ವಾನದ ಮೇರೆಗೆ ಲಕ್ನೋ ಶಾಲೆಯನ್ನು ನೋಡಲು ಹೋಗುತ್ತಿದ್ದೇನೆ” ಎಂದು ಸಿಸೋಡಿಯಾ ಟ್ವೀಟ್‌ ಮಾಡಿದ್ದರು.

ಉತ್ತರ ಪ್ರದೇಶ ಸರ್ಕಾರದಿಂದ ಯಾವ ಮಂತ್ರಿಯೂ ಚರ್ಚೆಗೆ ಬಾರದೆ, ಮನೀಶ್ ಸಿಸೋಡಿಯಾ ಅವರನ್ನು ಲಕ್ನೋದಲ್ಲಿನ ಸರ್ಕಾರಿ ಶಾಲೆಗಳನ್ನು ನೋಡಲು ಬಿಡದೆ ಯೋಗಿ ಸರ್ಕಾರ ಪೊಲೀಸರನ್ನು ನಿಯೋಜಿಸಿತ್ತು. ಇದನ್ನು ಮೀರಿ ಸಿಸೋಡಿಯಾ ಲಕ್ನೋ ಶಾಲೆಗಳನ್ನು ನೋಡಲು ಹೊರಟಿದ್ದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಜೊತೆಗೆ ಶಾಲೆಗಳನ್ನು ನೋಡಲು ಹೋದ ಆರೋಪದ ಮೇಲೆ ಜೈಲಿಗೆ ಹಾಕುವಿರಾ..?, ಸತೀಶ್ ದ್ವಿವೇದಿ ಅವರೇ ನೀವು ತಾನೇ ನನ್ನನ್ನು ಶಾಲೆ ನೊಡಲು ಆಹ್ವಾನ ನೀಡಿದ್ದು ಎಂದು ಸಿಸೋಡಿಯಾ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಈ ಬೆಳವಣಿಗಳ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ #DarrGayaYogi ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ನಲ್ಲಿದೆ. ವಿಧ ವಿಧವಾದ ಮಿಮ್ಸ್‌ಗಳು ಟ್ವಿಟರ್‌ನಲ್ಲಿ ಓಡಾಡುತ್ತಿವೆ.

ಬಿಜೆಪಿ ನಾಯಕರ ಹಳೆಯ ವಿಡಿಯೋ ತುಣುಕುಗಳನ್ನು ಟ್ಯಾಗ್ ಮಾಡಿ, ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವರನ್ನು #DarrGayaYogi ಹ್ಯಾಶ್‌ಟ್ಯಾಗ್ ಬಳಸಿ ವ್ಯಂಗ್ಯವಾಡುತ್ತಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಟ್ವಿಟರ್‌ ಬಳಕೆದಾರರೊಬ್ಬರು ಇಬ್ಬರು ಶಿಕ್ಷಣ ಮಂತ್ರಿಗಳ ಚಿತ್ರಗಳನ್ನು ಹಂಚಿಕೊಂಡು, ಇಬ್ಬರ ನಡುವಿನ ವ್ಯತ್ಯಾಸ ಎಲ್ಲವನ್ನೂ ಹೇಳುತ್ತಿದೆ ಎಂದಿದ್ದಾರೆ. ಚಿತ್ರದಲ್ಲಿ ಮನೀಶ್ ಸಿಸೋಡಿಯಾ ಮಕ್ಕಳಿಗೆ ಪಾಠ ಮಾಡುತ್ತಿದ್ದರೆ, ಯುಪಿ ಸಚಿವರು ಹಸುಗಳಿಗೆ ಹುಲ್ಲು ನೀಡುತ್ತಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಚರ್ಚೆಗೆ ಬರಲು ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಶಾಲೆಗಳನ್ನು ನಿರ್ಮಿಸಿಲ್ಲ. ಅವರು ನಿರ್ಮಿಸಿರುವುದು ಕೇವಲ ಅಸ್ಥಿ ಪಂಜರಗಳನ್ನು ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಆಡಳಿತದ ಮಾದರಿ ಎಂದು ಆಮ್ ಆದ್ಮಿ ಪಾರ್ಟಿ, #SelfieWithSarkaariSchool ಅಭಿಯಾನ ಆರಂಭಿಸಿತ್ತು. ಅಭಿಯಾನದ ಮೂಲಕ ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯಲಾಗಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಇನ್ನು ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...