Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತ ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಲಿಲ್ಲ..

- Advertisement -
- Advertisement -

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸರ್ಕಾರಿ ಶಾಲೆಗಳ ಅಭಿವೃದ್ದಿ ಕುರಿತು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದ ಉತ್ತರ ಪ್ರದೇಶದ ಸಚಿವರು ಇಂದು ಚರ್ಚೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಲಕ್ನೋದಲ್ಲಿ ಜರುಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ, ಸಚಿವರು ಎಲ್ಲರೂ ವಾಕ್ಸಮರ ಆರಂಭಿಸಿದ್ದರು. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳು ಮತ್ತು ಅರವಿಂದ್ ಕೇಜ್ರಿವಾಲ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ಹೋಲಿಕೆ ಎಂಬ ಚರ್ಚೆ ಆರಂಭವಾಗಿತ್ತು.

ಉತ್ತರ ಪ್ರದೇಶದ ಸಚಿವರ ಸವಾಲು ಸ್ವೀಕರಿಸಿದ್ದೇನೆ ಎಂದು ಡಿಸೆಂಬರ್‌ 16 ರಂದು ತಿಳಿಸಿದ್ದ ಸಿಸೋಡಿಯಾ ಇಂದು ಲಕ್ನೋಗೆ ತೆರಳಿದ್ದರು. ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತು ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಿಲ್ಲ.

 

“ನಾನು ನಿಮ್ಮ ಸವಾಲನ್ನು ಸ್ವೀಕರಿಸಿ ಲಕ್ನೋಗೆ ಕೇಜ್ರಿವಾಲ್ ಮಾದರಿ ಮತ್ತು ಯೋಗಿ ಮಾದರಿಯನ್ನು ಚರ್ಚಿಸಲು ಬಂದೆ. ಆದರೆ ನೀವು ಚರ್ಚೆಯಿಂದ ಹಿಂದೆ ಸರಿದಿದ್ದೀರಿ. ಈಗ ನಾನು ಯುಪಿಯ ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಅವರ ಆಹ್ವಾನದ ಮೇರೆಗೆ ಲಕ್ನೋ ಶಾಲೆಯನ್ನು ನೋಡಲು ಹೋಗುತ್ತಿದ್ದೇನೆ” ಎಂದು ಸಿಸೋಡಿಯಾ ಟ್ವೀಟ್‌ ಮಾಡಿದ್ದರು.

ಉತ್ತರ ಪ್ರದೇಶ ಸರ್ಕಾರದಿಂದ ಯಾವ ಮಂತ್ರಿಯೂ ಚರ್ಚೆಗೆ ಬಾರದೆ, ಮನೀಶ್ ಸಿಸೋಡಿಯಾ ಅವರನ್ನು ಲಕ್ನೋದಲ್ಲಿನ ಸರ್ಕಾರಿ ಶಾಲೆಗಳನ್ನು ನೋಡಲು ಬಿಡದೆ ಯೋಗಿ ಸರ್ಕಾರ ಪೊಲೀಸರನ್ನು ನಿಯೋಜಿಸಿತ್ತು. ಇದನ್ನು ಮೀರಿ ಸಿಸೋಡಿಯಾ ಲಕ್ನೋ ಶಾಲೆಗಳನ್ನು ನೋಡಲು ಹೊರಟಿದ್ದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಜೊತೆಗೆ ಶಾಲೆಗಳನ್ನು ನೋಡಲು ಹೋದ ಆರೋಪದ ಮೇಲೆ ಜೈಲಿಗೆ ಹಾಕುವಿರಾ..?, ಸತೀಶ್ ದ್ವಿವೇದಿ ಅವರೇ ನೀವು ತಾನೇ ನನ್ನನ್ನು ಶಾಲೆ ನೊಡಲು ಆಹ್ವಾನ ನೀಡಿದ್ದು ಎಂದು ಸಿಸೋಡಿಯಾ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಈ ಬೆಳವಣಿಗಳ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ #DarrGayaYogi ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ನಲ್ಲಿದೆ. ವಿಧ ವಿಧವಾದ ಮಿಮ್ಸ್‌ಗಳು ಟ್ವಿಟರ್‌ನಲ್ಲಿ ಓಡಾಡುತ್ತಿವೆ.

ಬಿಜೆಪಿ ನಾಯಕರ ಹಳೆಯ ವಿಡಿಯೋ ತುಣುಕುಗಳನ್ನು ಟ್ಯಾಗ್ ಮಾಡಿ, ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವರನ್ನು #DarrGayaYogi ಹ್ಯಾಶ್‌ಟ್ಯಾಗ್ ಬಳಸಿ ವ್ಯಂಗ್ಯವಾಡುತ್ತಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಟ್ವಿಟರ್‌ ಬಳಕೆದಾರರೊಬ್ಬರು ಇಬ್ಬರು ಶಿಕ್ಷಣ ಮಂತ್ರಿಗಳ ಚಿತ್ರಗಳನ್ನು ಹಂಚಿಕೊಂಡು, ಇಬ್ಬರ ನಡುವಿನ ವ್ಯತ್ಯಾಸ ಎಲ್ಲವನ್ನೂ ಹೇಳುತ್ತಿದೆ ಎಂದಿದ್ದಾರೆ. ಚಿತ್ರದಲ್ಲಿ ಮನೀಶ್ ಸಿಸೋಡಿಯಾ ಮಕ್ಕಳಿಗೆ ಪಾಠ ಮಾಡುತ್ತಿದ್ದರೆ, ಯುಪಿ ಸಚಿವರು ಹಸುಗಳಿಗೆ ಹುಲ್ಲು ನೀಡುತ್ತಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಚರ್ಚೆಗೆ ಬರಲು ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಶಾಲೆಗಳನ್ನು ನಿರ್ಮಿಸಿಲ್ಲ. ಅವರು ನಿರ್ಮಿಸಿರುವುದು ಕೇವಲ ಅಸ್ಥಿ ಪಂಜರಗಳನ್ನು ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಆಡಳಿತದ ಮಾದರಿ ಎಂದು ಆಮ್ ಆದ್ಮಿ ಪಾರ್ಟಿ, #SelfieWithSarkaariSchool ಅಭಿಯಾನ ಆರಂಭಿಸಿತ್ತು. ಅಭಿಯಾನದ ಮೂಲಕ ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯಲಾಗಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಇನ್ನು ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...