Homeಮುಖಪುಟದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತ ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಲಿಲ್ಲ..

- Advertisement -
- Advertisement -

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸರ್ಕಾರಿ ಶಾಲೆಗಳ ಅಭಿವೃದ್ದಿ ಕುರಿತು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದ ಉತ್ತರ ಪ್ರದೇಶದ ಸಚಿವರು ಇಂದು ಚರ್ಚೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಲಕ್ನೋದಲ್ಲಿ ಜರುಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ, ಸಚಿವರು ಎಲ್ಲರೂ ವಾಕ್ಸಮರ ಆರಂಭಿಸಿದ್ದರು. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳು ಮತ್ತು ಅರವಿಂದ್ ಕೇಜ್ರಿವಾಲ್ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ಹೋಲಿಕೆ ಎಂಬ ಚರ್ಚೆ ಆರಂಭವಾಗಿತ್ತು.

ಉತ್ತರ ಪ್ರದೇಶದ ಸಚಿವರ ಸವಾಲು ಸ್ವೀಕರಿಸಿದ್ದೇನೆ ಎಂದು ಡಿಸೆಂಬರ್‌ 16 ರಂದು ತಿಳಿಸಿದ್ದ ಸಿಸೋಡಿಯಾ ಇಂದು ಲಕ್ನೋಗೆ ತೆರಳಿದ್ದರು. ಕೇಜ್ರಿವಾಲ್ ಆಡಳಿತ ಮತ್ತು ಯೋಗಿ ಆಡಳಿತ ಮಾದರಿ ಕುರಿತು ಮುಕ್ತ ಚರ್ಚೆಗಾಗಿ ಮನೀಶ್ ಸಿಸೋಡಿಯಾ ಬಂದಿದ್ದರು. ಆದರೆ ಯೋಗಿ ಆದಿತ್ಯನಾಥ್ ಸರ್ಕಾರದ ಯಾವುದೇ ಸಚಿವರು ಚರ್ಚೆಗೆ ಹಾಜರಾಗಿಲ್ಲ.

 

“ನಾನು ನಿಮ್ಮ ಸವಾಲನ್ನು ಸ್ವೀಕರಿಸಿ ಲಕ್ನೋಗೆ ಕೇಜ್ರಿವಾಲ್ ಮಾದರಿ ಮತ್ತು ಯೋಗಿ ಮಾದರಿಯನ್ನು ಚರ್ಚಿಸಲು ಬಂದೆ. ಆದರೆ ನೀವು ಚರ್ಚೆಯಿಂದ ಹಿಂದೆ ಸರಿದಿದ್ದೀರಿ. ಈಗ ನಾನು ಯುಪಿಯ ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಅವರ ಆಹ್ವಾನದ ಮೇರೆಗೆ ಲಕ್ನೋ ಶಾಲೆಯನ್ನು ನೋಡಲು ಹೋಗುತ್ತಿದ್ದೇನೆ” ಎಂದು ಸಿಸೋಡಿಯಾ ಟ್ವೀಟ್‌ ಮಾಡಿದ್ದರು.

ಉತ್ತರ ಪ್ರದೇಶ ಸರ್ಕಾರದಿಂದ ಯಾವ ಮಂತ್ರಿಯೂ ಚರ್ಚೆಗೆ ಬಾರದೆ, ಮನೀಶ್ ಸಿಸೋಡಿಯಾ ಅವರನ್ನು ಲಕ್ನೋದಲ್ಲಿನ ಸರ್ಕಾರಿ ಶಾಲೆಗಳನ್ನು ನೋಡಲು ಬಿಡದೆ ಯೋಗಿ ಸರ್ಕಾರ ಪೊಲೀಸರನ್ನು ನಿಯೋಜಿಸಿತ್ತು. ಇದನ್ನು ಮೀರಿ ಸಿಸೋಡಿಯಾ ಲಕ್ನೋ ಶಾಲೆಗಳನ್ನು ನೋಡಲು ಹೊರಟಿದ್ದರು.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಜೊತೆಗೆ ಶಾಲೆಗಳನ್ನು ನೋಡಲು ಹೋದ ಆರೋಪದ ಮೇಲೆ ಜೈಲಿಗೆ ಹಾಕುವಿರಾ..?, ಸತೀಶ್ ದ್ವಿವೇದಿ ಅವರೇ ನೀವು ತಾನೇ ನನ್ನನ್ನು ಶಾಲೆ ನೊಡಲು ಆಹ್ವಾನ ನೀಡಿದ್ದು ಎಂದು ಸಿಸೋಡಿಯಾ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಈ ಬೆಳವಣಿಗಳ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ #DarrGayaYogi ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ನಲ್ಲಿದೆ. ವಿಧ ವಿಧವಾದ ಮಿಮ್ಸ್‌ಗಳು ಟ್ವಿಟರ್‌ನಲ್ಲಿ ಓಡಾಡುತ್ತಿವೆ.

ಬಿಜೆಪಿ ನಾಯಕರ ಹಳೆಯ ವಿಡಿಯೋ ತುಣುಕುಗಳನ್ನು ಟ್ಯಾಗ್ ಮಾಡಿ, ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವರನ್ನು #DarrGayaYogi ಹ್ಯಾಶ್‌ಟ್ಯಾಗ್ ಬಳಸಿ ವ್ಯಂಗ್ಯವಾಡುತ್ತಿದ್ದಾರೆ.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಟ್ವಿಟರ್‌ ಬಳಕೆದಾರರೊಬ್ಬರು ಇಬ್ಬರು ಶಿಕ್ಷಣ ಮಂತ್ರಿಗಳ ಚಿತ್ರಗಳನ್ನು ಹಂಚಿಕೊಂಡು, ಇಬ್ಬರ ನಡುವಿನ ವ್ಯತ್ಯಾಸ ಎಲ್ಲವನ್ನೂ ಹೇಳುತ್ತಿದೆ ಎಂದಿದ್ದಾರೆ. ಚಿತ್ರದಲ್ಲಿ ಮನೀಶ್ ಸಿಸೋಡಿಯಾ ಮಕ್ಕಳಿಗೆ ಪಾಠ ಮಾಡುತ್ತಿದ್ದರೆ, ಯುಪಿ ಸಚಿವರು ಹಸುಗಳಿಗೆ ಹುಲ್ಲು ನೀಡುತ್ತಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಚರ್ಚೆಗೆ ಬರಲು ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಶಾಲೆಗಳನ್ನು ನಿರ್ಮಿಸಿಲ್ಲ. ಅವರು ನಿರ್ಮಿಸಿರುವುದು ಕೇವಲ ಅಸ್ಥಿ ಪಂಜರಗಳನ್ನು ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಆಡಳಿತದ ಮಾದರಿ ಎಂದು ಆಮ್ ಆದ್ಮಿ ಪಾರ್ಟಿ, #SelfieWithSarkaariSchool ಅಭಿಯಾನ ಆರಂಭಿಸಿತ್ತು. ಅಭಿಯಾನದ ಮೂಲಕ ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆಯಲಾಗಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿ ಬದಲಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಇನ್ನು ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...