Homeಮುಖಪುಟದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ - ಪೊಲೀಸರಿಗೆ ಹೈಕೋರ್ಟ್ ತರಾಟೆ

ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ದೆಹಲಿ ಗಲಭೆಯಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಕೇಸ್ ಫೈಲ್ ಒಂದು ಮೀಡಿಯಾಗಳಿಗೆ ಸೋರಿಕೆಯಾದ ಕಾರಣವನ್ನು ವಿವರಿಸಲು ವಿಫಲವಾದ ಕಾರಣ, ದೆಹಲಿ ಹೈಕೋರ್ಟ್ ಸೋಮವಾರ ದೆಹಲಿ ಪೊಲೀಸರ ವಿಜಿಲೆನ್ಸ್ ವಿಭಾಗವನ್ನು ತರಾಟೆಗೆ ತೆಗೆದುಕೊಂಡಿದೆ. ಇದು ಆರೋಪಿಗೆ ಉಚಿತ ಮತ್ತು ನ್ಯಾಯಯುತ ವಿಚಾರಣೆಯನ್ನು ನಿರಾಕರಿಸುವ ಕ್ರಮವಾಗಿದೆ ಎಂದು ಕೋರ್ಟ್ ಹೇಳಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನ್ಯಾಯಪೀಠ ಮೌಖಿಕವಾಗಿ ಗಮನಿಸಿದಂತೆ, ಪ್ರಮುಖ ವಿಚಾರಣೆಯ ವಿಷಯದಲ್ಲಿ ದೆಹಲಿ ವಿಜಿಲೆನ್ಸ್ ಪೊಲೀಸರು ಕ್ಷುಲ್ಲಕವಾದ ನಡವಳಿಕೆ ತೋರಿಸಿದ್ದು, ಸಣ್ಣ ಕಳ್ಳತನ ಪ್ರಕರಣದಲ್ಲಿ (ಪೆಟ್ಟಿ ಕೇಸ್) ವರ್ತಿಸುವುದಕ್ಕಿಂತ ತೀರಾ ಚಿಲ್ಲರೆಯಾಗಿ ವರ್ತಿಸಿದ್ದಾರೆ ಎಂದು ಮುಖಕ್ಕೆ ಹೊಡೆದಂತೆ ಹೇಳಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣದ ವಿಚಾರಣೆ ಆಸಿಫ್ ಇಕ್ಬಾಲ್ ತನ್ಹಾ ಅವರ ಮಾಧ್ಯಮ ವಿಚಾರಣೆಯ ವಿರುದ್ಧದ ರಿಟ್ ಅರ್ಜಿಯನ್ನು ಡಿ, ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶ ಪೀಠ ಆಲಿಸುತ್ತಿದೆ.

ಸೋರಿಕೆಯ ಮೂಲವನ್ನು ವಿವರಿಸುವಲ್ಲಿ ವಿಜಿಲೆನ್ಸ್ ವಿಚಾರಣೆ ವಿಫಲವಾದ ಕಾರಣ ಕಠಿಣ ಆದೇಶಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣ ಆರೋಪಿ ಆಸಿಫ್ ಇಕ್ಬಾಲ್ ತನ್ಹಾ ತಮ್ಮ ಸುತ್ತ ನಡೆದ ಮಾಧ್ಯಮ ವಿಚಾರಣೆಯ (ಮೀಡಿಯಾ ಟ್ರಯಲ್) ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧದ ಫೈಲ್ ಮೀಡಿಯಾಗಳಿಗೆ ಹೇಗೆ ಲೀಕ್ ಆಗಿತು ಎಂದು ದೆಹಲಿ ಹೈಕೊರ್ಟಿನ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶ ಪೀಠ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ.

ದೆಹಲಿ ಪೊಲೀಸರು ತನ್ನ ಅಫಿಡವಿಟ್‌ನಲ್ಲಿ ಮಾಧ್ಯಮಗಳಿಗೆ ಸೋರಿಕೆಯಾದ ಆರೋಪಗಳು ಕೇವಲ “ಆಧಾರರಹಿತ” ಎಂದು ಹೇಳಿದ್ದಾರೆ. ಇದಕ್ಕೆ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶರ ನ್ಯಾಯಪೀಠವು, ದೆಹಲಿ ಪೊಲೀಸರಿಗೆ ಮೂಲವನ್ನು ಕಂಡುಹಿಡಿಯಲು ಸಾಧ್ಯವಾಗದ ಕಾರಣ ಸೋರಿಕೆಯ ಆರೋಪಗಳು “ಆಧಾರ ರಹಿತವಾಗಿದೆಯೆ” ಎಂದು ವಿಜಿಲೆನ್ಸ್ ಅಧಿಕಾರಿಗಳನ್ನು ಪ್ರಶ್ನಿಸಿದೆ.

‘ಆ ಮುಖ್ಯ ಫೈಲನ್ನು ನೀವು ಬೀದಿಯಲ್ಲಿ ಎಸೆದು ಬಿಟ್ಟಿದ್ದೀರಿ ಅನಿಸುತ್ತದೆ. ಹೀಗಾಗಿಯೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆಯಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಸೋರಿಕೆ ಮಾಡಿರಬಹುದು ಎಂದು ಗಮನಿಸಿದ ನ್ಯಾಯಾಧೀಶ ಗುಪ್ತಾ, ಆದಾಗ್ಯೂ, ವಿಜಿಲೆನ್ಸ್ ವಿಚಾರಣೆ ಹೇಗೆ ನಡೆಯಿತು ಎಂಬ ಪ್ರಶ್ನೆಗಳನ್ನು ಎತ್ತಿದೆ.


ಇದನ್ನೂ ಓದಿ: ಹತ್ರಾಸ್: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ತಂದೆಯನ್ನು ಹತೈಗೈದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...