Homeಮುಖಪುಟದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ - ಪೊಲೀಸರಿಗೆ ಹೈಕೋರ್ಟ್ ತರಾಟೆ

ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ದೆಹಲಿ ಗಲಭೆಯಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಕೇಸ್ ಫೈಲ್ ಒಂದು ಮೀಡಿಯಾಗಳಿಗೆ ಸೋರಿಕೆಯಾದ ಕಾರಣವನ್ನು ವಿವರಿಸಲು ವಿಫಲವಾದ ಕಾರಣ, ದೆಹಲಿ ಹೈಕೋರ್ಟ್ ಸೋಮವಾರ ದೆಹಲಿ ಪೊಲೀಸರ ವಿಜಿಲೆನ್ಸ್ ವಿಭಾಗವನ್ನು ತರಾಟೆಗೆ ತೆಗೆದುಕೊಂಡಿದೆ. ಇದು ಆರೋಪಿಗೆ ಉಚಿತ ಮತ್ತು ನ್ಯಾಯಯುತ ವಿಚಾರಣೆಯನ್ನು ನಿರಾಕರಿಸುವ ಕ್ರಮವಾಗಿದೆ ಎಂದು ಕೋರ್ಟ್ ಹೇಳಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನ್ಯಾಯಪೀಠ ಮೌಖಿಕವಾಗಿ ಗಮನಿಸಿದಂತೆ, ಪ್ರಮುಖ ವಿಚಾರಣೆಯ ವಿಷಯದಲ್ಲಿ ದೆಹಲಿ ವಿಜಿಲೆನ್ಸ್ ಪೊಲೀಸರು ಕ್ಷುಲ್ಲಕವಾದ ನಡವಳಿಕೆ ತೋರಿಸಿದ್ದು, ಸಣ್ಣ ಕಳ್ಳತನ ಪ್ರಕರಣದಲ್ಲಿ (ಪೆಟ್ಟಿ ಕೇಸ್) ವರ್ತಿಸುವುದಕ್ಕಿಂತ ತೀರಾ ಚಿಲ್ಲರೆಯಾಗಿ ವರ್ತಿಸಿದ್ದಾರೆ ಎಂದು ಮುಖಕ್ಕೆ ಹೊಡೆದಂತೆ ಹೇಳಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣದ ವಿಚಾರಣೆ ಆಸಿಫ್ ಇಕ್ಬಾಲ್ ತನ್ಹಾ ಅವರ ಮಾಧ್ಯಮ ವಿಚಾರಣೆಯ ವಿರುದ್ಧದ ರಿಟ್ ಅರ್ಜಿಯನ್ನು ಡಿ, ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶ ಪೀಠ ಆಲಿಸುತ್ತಿದೆ.

ಸೋರಿಕೆಯ ಮೂಲವನ್ನು ವಿವರಿಸುವಲ್ಲಿ ವಿಜಿಲೆನ್ಸ್ ವಿಚಾರಣೆ ವಿಫಲವಾದ ಕಾರಣ ಕಠಿಣ ಆದೇಶಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣ ಆರೋಪಿ ಆಸಿಫ್ ಇಕ್ಬಾಲ್ ತನ್ಹಾ ತಮ್ಮ ಸುತ್ತ ನಡೆದ ಮಾಧ್ಯಮ ವಿಚಾರಣೆಯ (ಮೀಡಿಯಾ ಟ್ರಯಲ್) ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧದ ಫೈಲ್ ಮೀಡಿಯಾಗಳಿಗೆ ಹೇಗೆ ಲೀಕ್ ಆಗಿತು ಎಂದು ದೆಹಲಿ ಹೈಕೊರ್ಟಿನ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶ ಪೀಠ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ.

ದೆಹಲಿ ಪೊಲೀಸರು ತನ್ನ ಅಫಿಡವಿಟ್‌ನಲ್ಲಿ ಮಾಧ್ಯಮಗಳಿಗೆ ಸೋರಿಕೆಯಾದ ಆರೋಪಗಳು ಕೇವಲ “ಆಧಾರರಹಿತ” ಎಂದು ಹೇಳಿದ್ದಾರೆ. ಇದಕ್ಕೆ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶರ ನ್ಯಾಯಪೀಠವು, ದೆಹಲಿ ಪೊಲೀಸರಿಗೆ ಮೂಲವನ್ನು ಕಂಡುಹಿಡಿಯಲು ಸಾಧ್ಯವಾಗದ ಕಾರಣ ಸೋರಿಕೆಯ ಆರೋಪಗಳು “ಆಧಾರ ರಹಿತವಾಗಿದೆಯೆ” ಎಂದು ವಿಜಿಲೆನ್ಸ್ ಅಧಿಕಾರಿಗಳನ್ನು ಪ್ರಶ್ನಿಸಿದೆ.

‘ಆ ಮುಖ್ಯ ಫೈಲನ್ನು ನೀವು ಬೀದಿಯಲ್ಲಿ ಎಸೆದು ಬಿಟ್ಟಿದ್ದೀರಿ ಅನಿಸುತ್ತದೆ. ಹೀಗಾಗಿಯೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆಯಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಸೋರಿಕೆ ಮಾಡಿರಬಹುದು ಎಂದು ಗಮನಿಸಿದ ನ್ಯಾಯಾಧೀಶ ಗುಪ್ತಾ, ಆದಾಗ್ಯೂ, ವಿಜಿಲೆನ್ಸ್ ವಿಚಾರಣೆ ಹೇಗೆ ನಡೆಯಿತು ಎಂಬ ಪ್ರಶ್ನೆಗಳನ್ನು ಎತ್ತಿದೆ.


ಇದನ್ನೂ ಓದಿ: ಹತ್ರಾಸ್: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ತಂದೆಯನ್ನು ಹತೈಗೈದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...