Homeಮುಖಪುಟದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ - ಪೊಲೀಸರಿಗೆ ಹೈಕೋರ್ಟ್ ತರಾಟೆ

ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ದೆಹಲಿ ಗಲಭೆಯಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಕೇಸ್ ಫೈಲ್ ಒಂದು ಮೀಡಿಯಾಗಳಿಗೆ ಸೋರಿಕೆಯಾದ ಕಾರಣವನ್ನು ವಿವರಿಸಲು ವಿಫಲವಾದ ಕಾರಣ, ದೆಹಲಿ ಹೈಕೋರ್ಟ್ ಸೋಮವಾರ ದೆಹಲಿ ಪೊಲೀಸರ ವಿಜಿಲೆನ್ಸ್ ವಿಭಾಗವನ್ನು ತರಾಟೆಗೆ ತೆಗೆದುಕೊಂಡಿದೆ. ಇದು ಆರೋಪಿಗೆ ಉಚಿತ ಮತ್ತು ನ್ಯಾಯಯುತ ವಿಚಾರಣೆಯನ್ನು ನಿರಾಕರಿಸುವ ಕ್ರಮವಾಗಿದೆ ಎಂದು ಕೋರ್ಟ್ ಹೇಳಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನ್ಯಾಯಪೀಠ ಮೌಖಿಕವಾಗಿ ಗಮನಿಸಿದಂತೆ, ಪ್ರಮುಖ ವಿಚಾರಣೆಯ ವಿಷಯದಲ್ಲಿ ದೆಹಲಿ ವಿಜಿಲೆನ್ಸ್ ಪೊಲೀಸರು ಕ್ಷುಲ್ಲಕವಾದ ನಡವಳಿಕೆ ತೋರಿಸಿದ್ದು, ಸಣ್ಣ ಕಳ್ಳತನ ಪ್ರಕರಣದಲ್ಲಿ (ಪೆಟ್ಟಿ ಕೇಸ್) ವರ್ತಿಸುವುದಕ್ಕಿಂತ ತೀರಾ ಚಿಲ್ಲರೆಯಾಗಿ ವರ್ತಿಸಿದ್ದಾರೆ ಎಂದು ಮುಖಕ್ಕೆ ಹೊಡೆದಂತೆ ಹೇಳಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣದ ವಿಚಾರಣೆ ಆಸಿಫ್ ಇಕ್ಬಾಲ್ ತನ್ಹಾ ಅವರ ಮಾಧ್ಯಮ ವಿಚಾರಣೆಯ ವಿರುದ್ಧದ ರಿಟ್ ಅರ್ಜಿಯನ್ನು ಡಿ, ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶ ಪೀಠ ಆಲಿಸುತ್ತಿದೆ.

ಸೋರಿಕೆಯ ಮೂಲವನ್ನು ವಿವರಿಸುವಲ್ಲಿ ವಿಜಿಲೆನ್ಸ್ ವಿಚಾರಣೆ ವಿಫಲವಾದ ಕಾರಣ ಕಠಿಣ ಆದೇಶಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.

ದೆಹಲಿ ಗಲಭೆ ಪಿತೂರಿ ಪ್ರಕರಣ ಆರೋಪಿ ಆಸಿಫ್ ಇಕ್ಬಾಲ್ ತನ್ಹಾ ತಮ್ಮ ಸುತ್ತ ನಡೆದ ಮಾಧ್ಯಮ ವಿಚಾರಣೆಯ (ಮೀಡಿಯಾ ಟ್ರಯಲ್) ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧದ ಫೈಲ್ ಮೀಡಿಯಾಗಳಿಗೆ ಹೇಗೆ ಲೀಕ್ ಆಗಿತು ಎಂದು ದೆಹಲಿ ಹೈಕೊರ್ಟಿನ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶ ಪೀಠ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ.

ದೆಹಲಿ ಪೊಲೀಸರು ತನ್ನ ಅಫಿಡವಿಟ್‌ನಲ್ಲಿ ಮಾಧ್ಯಮಗಳಿಗೆ ಸೋರಿಕೆಯಾದ ಆರೋಪಗಳು ಕೇವಲ “ಆಧಾರರಹಿತ” ಎಂದು ಹೇಳಿದ್ದಾರೆ. ಇದಕ್ಕೆ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರ ಏಕ ನ್ಯಾಯಾಧೀಶರ ನ್ಯಾಯಪೀಠವು, ದೆಹಲಿ ಪೊಲೀಸರಿಗೆ ಮೂಲವನ್ನು ಕಂಡುಹಿಡಿಯಲು ಸಾಧ್ಯವಾಗದ ಕಾರಣ ಸೋರಿಕೆಯ ಆರೋಪಗಳು “ಆಧಾರ ರಹಿತವಾಗಿದೆಯೆ” ಎಂದು ವಿಜಿಲೆನ್ಸ್ ಅಧಿಕಾರಿಗಳನ್ನು ಪ್ರಶ್ನಿಸಿದೆ.

‘ಆ ಮುಖ್ಯ ಫೈಲನ್ನು ನೀವು ಬೀದಿಯಲ್ಲಿ ಎಸೆದು ಬಿಟ್ಟಿದ್ದೀರಿ ಅನಿಸುತ್ತದೆ. ಹೀಗಾಗಿಯೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆಯಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಸೋರಿಕೆ ಮಾಡಿರಬಹುದು ಎಂದು ಗಮನಿಸಿದ ನ್ಯಾಯಾಧೀಶ ಗುಪ್ತಾ, ಆದಾಗ್ಯೂ, ವಿಜಿಲೆನ್ಸ್ ವಿಚಾರಣೆ ಹೇಗೆ ನಡೆಯಿತು ಎಂಬ ಪ್ರಶ್ನೆಗಳನ್ನು ಎತ್ತಿದೆ.


ಇದನ್ನೂ ಓದಿ: ಹತ್ರಾಸ್: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ತಂದೆಯನ್ನು ಹತೈಗೈದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...