Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...