Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...