Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...