Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....