Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...