Homeಮುಖಪುಟಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮಹಾಶ್ವೇತಾದೇವಿ ಸೇರಿದಂತೆ ಹಲವು ದಲಿತ ಲೇಖಕರ ಪಠ್ಯ ಕೈಬಿಟ್ಟ ದೆಹಲಿ ವಿವಿ: ಭುಗಿಲೆದ್ದ ಆಕ್ರೋಶ

ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ "ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ"ಯವರ ಪಠ್ಯ ಸೇರಿಸಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗಧಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಸ್ತ್ರೀವಾದಿ ಪಠ್ಯ ಸೇರಿದಂತೆ ಹಲವು ದಲಿತರ ಲೇಖಕರ ಪಠ್ಯ ಕೈಬಿಟ್ಟಿರುವುದು ತೀವ್ರ ಟೀಕೆಗೆ ಕಾರಣವಾಗಿವೆ.

ವಿವಿಯ ಮೇಲ್ವೀಚಾರಣ ಸಮಿತಿಯು ದಲಿತ ಲೇಖಕರಾದ ಬಾಮಾ ಫೌಸ್ಟಿನಾ ಸೂಸೈರಾಜ್, ಸುಕೀರ್ಥರಾಣಿ ಮತ್ತು ಬಂಗಾಳಿ ಲೇಖಕಿ ಮಹಾಶ್ವೇತಾ ದೇವಿ ಅವರ ಬರಹಗಳನ್ನು ಪಠ್ಯದಿಂದ ತೆಗೆದುಹಾಕಿದೆ ಎಂದು ವರದಿಯಾಗಿದೆ.

ವಿವಿಯ ಈ ಕ್ರಮವನ್ನು ಅಕಾಡೆಮಿಕ್ ಕೌನ್ಸಿಲ್‌ನ 15 ಸದಸ್ಯರ ಸಮಿತಿಯು ತೀವ್ರವಾಗಿ ವಿರೋಧಿಸಿ ತನ್ನ ಭಿನ್ನಮತವನ್ನು ದಾಖಲಿಸಿದೆ. ಇದು ಪಠ್ಯಕ್ರಮದಲ್ಲಿ ಅತಿ ದೊಡ್ಡ ಧ್ವಂಸ ಎಂದು ಅದು ಟೀಕಿಸಿದೆ.

ಮೇಲ್ವಿಚಾರಣಾ ಸಮಿತಿಯು ಮೊದಲು ಸೂಸೈರಾಜ್ ಮತ್ತು ಸುಕೀರ್ಥರಾಣಿ ಅವರ ಬರಹಗಳನ್ನು ತೆಗೆದು ಆ ಜಾಗದಲ್ಲಿ “ಮೇಲ್ಜಾತಿ ಬರಹಗಾರ್ತಿಯಾದ ರಮಾಬಾಯಿ”ಯವರ ಪಠ್ಯ ಸೇರಿಸಿದೆ. ನಂತರ ಆಂಗ್ಲ ವಿಭಾಗದಲ್ಲಿ ಮಹಾಶ್ವೇತಾ ದೇವಿಯವರ ಬುಡಕಟ್ಟು ಮಹಿಳೆಯ ಕುರಿತ ಕಥೆ ‘ದ್ರೌಪದಿ’ ಯಾವುದೇ ಶೈಕ್ಷಣಿಕ ತರ್ಕವನ್ನು ನೀಡದೆ ಅಳಿಸಿಹಾಕಿದೆ ಅಕಾಡೆಮಿಕ್ ಕೌನ್ಸಿಲ್‌ ಆಕ್ರೋಶ ವ್ಯಕ್ತಪಡಿಸಿದೆ.

ವಸಾಹತುಶಾಹಿ ಪೂರ್ವ ಭಾರತೀಯ ಸಾಹಿತ್ಯ ವಿಭಾಗದಲ್ಲಿ ಚಂದ್ರವತಿ ರಾಮಾಯಣವನ್ನು ತೆಗೆದು ಅಲ್ಲಿ ತುಳಸಿದಾಸರ ಪಠ್ಯ ಸೇರಿಸಿಲಾಗಿದೆ. ರಾಮಾಯಣ ಮಹಾಕಾವ್ಯದ “ಸ್ತ್ರೀವಾದಿ ಓದು” ಪಠ್ಯ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲ್ವಿಚಾರಣಾ ಸಮಿತಿಯಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯದ ಸದಸ್ಯರಿಲ್ಲ. ಹಾಗಾಗಿ ಅದು ಸದಾ ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಪ್ರಾತಿನಿಧ್ಯದ ವಿರುದ್ಧ ಪೂರ್ವಾಗ್ರಹವನ್ನು ಹೊಂದಿದೆ. ಹಾಗಾಗಿ ಅಂತಹ ಎಲ್ಲಾ ಧ್ವನಿಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲು ಅದು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕೌನ್ಸಿಲ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎಂ.ಕೆ.ಪಂಡಿತ್, “ರದ್ದುಗೊಳಿಸಿರುವ ಪಠ್ಯಗಳ ಲೇಖಕರ ಜಾತಿಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಜಾತೀಯತೆಯನ್ನು ನಂಬುವುದಿಲ್ಲ. ಭಾರತೀಯರು ವಿವಿಧ ಜಾತಿಗೆ ಸೇರಿದ್ದಾರೆ ಎಂದು ನಾನು ನೋಡುವುದಿಲ್ಲ” ಎಂದಿದ್ದಾರೆ.

ಒಂದು “ನಿರ್ದಿಷ್ಟ ಕಥೆ” ಯನ್ನು ಹಲವು ವರ್ಷಗಳಿಂದ ಕಲಿಸಿದ ನಂತರ ಕೋರ್ಸ್ ರಚನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಹಲವರು ಪಠ್ಯವನ್ನು ಬದಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...