Homeಮುಖಪುಟದೆಹಲಿ ಜಲ ಬಿಕ್ಕಟ್ಟು: ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ದೆಹಲಿ ಜಲ ಬಿಕ್ಕಟ್ಟು: ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಹರಿಯಾಣದಿಂದ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವೆ ಅತಿಶಿ ಅವರ ಆರೋಗ್ಯ ಮಂಗಳವಾರ ನಸುಕಿನಲ್ಲಿ ಹದಗೆಟ್ಟಿದ್ದರಿಂದ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಕರೆತರಲಾಯಿತು.

ಸೋಮವಾರದ ಅನಿರ್ದಿಷ್ಟಾವಧಿ ಉಪವಾಸದ ನಾಲ್ಕನೇ ದಿನಕ್ಕೆ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರು. ಹರ್ಯಾಣವು “ದೆಹಲಿಯ ನೀರಿನ ಸರಿಯಾದ ಪಾಲನ್ನು” ಬಿಡುಗಡೆ ಮಾಡುವವರೆಗೂ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳ ಹೊರತಾಗಿಯೂ, ಅತಿಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.

“ನನ್ನ ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟವು ಕುಸಿಯುತ್ತಿದೆ ಮತ್ತು ನನ್ನ ತೂಕವು ಕಡಿಮೆಯಾಗಿದೆ. ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿರುತ್ತದೆ, ಇದು ದೀರ್ಘಾವಧಿಯಲ್ಲಿ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ” ಎಂದು ಅವರು ಜಂಗ್‌ಪುರದ ಭೋಗಲ್‌ನಲ್ಲಿ ಉಪವಾಸ ಸತ್ಯಾಗ್ರಹದ ಸ್ಥಳದಲ್ಲಿ ಹೇಳಿದರು.

New Delhi, Jun 23 (ANI): Delhi Water Minister Atishi gets her blood pressure check during the Aam Aadmi Party’s (AAP) indefinite hunger strike over the water crisis, which entered the third day, in New Delhi on Sunday. (ANI Photo/Sanjay Sharma)

ಮತ್ತೊಂದು ಹೇಳಿಕೆಯಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ಅತಿಶಿ ಅವರ ತೂಕ ಮತ್ತು ರಕ್ತದೊತ್ತಡವು ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಹೇಳಿದೆ, ಇದು “ಅಪಾಯಕಾರಿ” ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

“ಜಲ ಸಚಿವೆ ಅತಿಶಿ ಅವರ ತೂಕ ಕೂಡ ಅನಿರೀಕ್ಷಿತವಾಗಿ ಕಡಿಮೆಯಾಗುತ್ತಿದೆ. ಜೂನ್ 21ರಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳುವ ಮುನ್ನ ಅವರ ತೂಕ 65. 8 ಕೆಜಿಯಷ್ಟಿತ್ತು, ಉಪವಾಸ ಸತ್ಯಾಗ್ರಹದ ನಾಲ್ಕನೇ ದಿನಕ್ಕೆ 63.6 ಕೆಜಿಗೆ ಇಳಿದಿದೆ. ಅಂದರೆ, ಅವರ ತೂಕವು ಕೇವಲ 4 ದಿನಗಳಲ್ಲಿ 2.2 ಕೆ.ಜಿ. ಕಡಿಮೆಯಾಗಿದೆ.

ಉಪವಾಸ ಸತ್ಯಾಗ್ರಹದ ಮೊದಲ ದಿನಕ್ಕೆ ಹೋಲಿಸಿದರೆ ನಾಲ್ಕನೇ ದಿನದಲ್ಲಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 28 ಯೂನಿಟ್‌ಗಳಷ್ಟು ಕಡಿಮೆಯಾಗಿದೆ ಎಂದು ಅದು ಹೇಳಿದೆ.

ಇದರೊಂದಿಗೆ ಆಕೆಯ ರಕ್ತದೊತ್ತಡದ ಮಟ್ಟವೂ ಕಡಿಮೆಯಾಗಿದೆ; ಅತಿಶಿ ಅವರ ರಕ್ತದ ಸಕ್ಕರೆ ಪ್ರಮಾಣ, ರಕ್ತದೊತ್ತಡ, ತೂಕ ಕಡಿಮೆಯಾದ ವೇಗವನ್ನು ವೈದ್ಯರು ಅಪಾಯಕಾರಿ ಎಂದು ಹೇಳಿದ್ದಾರೆ. ಇದರೊಂದಿಗೆ ಅವರ ಮೂತ್ರದ ಕೆಟೋನ್ ಮಟ್ಟವೂ ಹೆಚ್ಚುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಭಾನುವಾರ ಎಎಪಿ ನಾಯಕರ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ತಮ್ಮ ರಾಜ್ಯವು ನಗರಕ್ಕೆ ಹೆಚ್ಚುವರಿ ನೀರು ನೀಡಬಹುದೇ ಎಂದು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ; ಕೇಜ್ರಿವಾಲ್ ಜಾಮೀನಿಗೆ ತಡೆಯಾಜ್ಞೆ ಕೋರಿ ಇಡಿ ಅರ್ಜಿ; ಆದೇಶ ನಾಳೆಗೆ ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...