Homeಮುಖಪುಟಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

- Advertisement -
- Advertisement -

ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ಹೆಸರಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಘಟನೆಗಳಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಪ್ರತಿಕ್ರಿಯೆ ನೀಡಿದೆ. “ಬಿಜೆಪಿ ಬುಲ್ಡೋಜರ್ ರಾಜಕೀಯ ಮಾಡುತ್ತಿದ್ದು, ಇದರಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ” ಎಂದು ಎ‌ಚ್ಚರಿಸಿದ್ದಾರೆ.

“ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಮೊದಲು ಅನುಮತಿ ನೀಡಿದ ಕೌನ್ಸಿಲರ್‌ಗಳಿಗೂ ನೋಟಿಸ್ ಜಾರಿ ಮಾಡಬೇಕು” ಎಂದು ಎಎಪಿ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಮಶೀಶ್‌ ಸಿಸೋಡಿಯಾ, “1,750 ಅನಧಿಕೃತ, ನಿಯಮಿತವಲ್ಲದೆ ಕಾಲೋನಿಗಳಿಗೆ ನೋಟಿಸ್ ಕಳುಹಿಸಲಾಗಿದೆ. ಇಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇದು ಬುಲ್ಡೋಜರ್ ರಾಜಕಾರಣ. ಈ ಜನರನ್ನು ನಿರಾಶ್ರಿತರನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆ. ಜೊತೆಗೆ 10 ಲಕ್ಷ ಜನರು ವಾಸಿಸುವ ಜೆಜೆ ಕ್ಲಸ್ಟರ್‌ಗಳ 860 ಕಾಲೋನಿಗಳಿಗೂ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಈ ರೀತಿಯಾಗಿ ಇಡೀ ದೆಹಲಿಯನ್ನು ಧ್ವಂಸ ಮಾಡಲು ಬಿಜೆಪಿ ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಅವರು, “ಬಿಜೆಪಿಯ 17 ವರ್ಷಗಳ ಅಧಿಕಾರಾವಧಿಯಲ್ಲಿ ಕೌನ್ಸಿಲರ್‌ಗಳು, ಎಂಜಿನಿಯರ್‌ಗಳು ಮತ್ತು ಇತರ ಹಲವಾರು ಅಧಿಕಾರಿಗಳು ಭ್ರಷ್ಟಾಚಾರದ ಮೂಲಕ ಹಣ ಸಂಪಾದಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ತುಚ್ಚಿ (ಅಗ್ಗದ) ರಾಜಕೀಯವನ್ನು ನಡೆಸದಂತೆ ನಾನು ಬಿಜೆಪಿಯಲ್ಲಿ ಒತ್ತಾಯಿಸುತ್ತೇನೆ. ನೀವು ಏನನ್ನಾದರೂ ಮಾಡಲು ಬಯಸಿದರೆ, ಈ ನಿರ್ಮಾಣಗಳು ಯಾರ ಅಧಿಕಾರಾವಧಿಯಲ್ಲಿ ನಡೆದಿವೆಯೋ ಆ ಪಾರ್ಷದ್‌ಗಳನ್ನು (ಕೌನ್ಸಿಲರ್‌ಗಳು), ಎಂಜಿನಿಯರ್‌ ಹಾಗೂ ಮೇಯರ್‌ಗಳನ್ನು ಹೊಣೆಗಾರರನ್ನಾಗಿ ಮಾಡಿ” ಎಂದು ಸಿಸೋಡಿಯಾ ಆಗ್ರಹಿಸಿದ್ದಾರೆ.

ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಫ್ಲಾಟ್‌ಗಳಲ್ಲಿ ಹೆಚ್ಚುವರಿ ಬಾಲ್ಕನಿ ಅಥವಾ ಕೊಠಡಿಯನ್ನು ನಿರ್ಮಿಸಿದ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ಸಿಸೋಡಿಯಾ ತಿಳಿಸಿದ್ದು, “ಕಳೆದ ಎರಡು ವರ್ಷಗಳಲ್ಲಿ ಸುಮಾರು ಮೂರು ಲಕ್ಷ ಜನರು ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ನಾವು ಜನರಿಗೆ ಮನೆ ನೀಡಲು ಪ್ರಯತ್ನಿಸುತ್ತಿದ್ದೇವೆ ಮತ್ತು ಬಿಜೆಪಿ ಬುಲ್ಡೋಜರ್‌ ಮೂಲಕ ಅವುಗಳನ್ನು ಉರುಳಿಸುತ್ತದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ದೆಹಲಿಯ ಜಹಾಂಗೀರ್‌ಪುರಿ ಕೋಮು ಸಂಘರ್ಷ ನಡೆದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬಿಜೆಪಿ ಆರಂಭಿಸಿತು. ಸುಪ್ರೀಂ ಕೋರ್ಟ್ ತಡೆಯಾಜ್ಞೆಯ ನಡುವೆಯೂ ಕಾರ್ಯಾಚರಣೆಯನ್ನು ನಡೆಸಿದ್ದು ಚರ್ಚೆಗೆ ಗ್ರಾಸವಾಗಿತ್ತು.

“ಸುಪ್ರೀಂಕೋರ್ಟ್ ತೀರ್ಪನ್ನು ಮೇಯರ್‌ಗೆ ತಿಳಿಸಿದ ನಂತರವೂ ನಡೆದ ಎಲ್ಲಾ ಉರುಳಿಸುವಿಕೆ ಕಾರ್ಯಾಚರಣೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎರಡು ವಾರಗಳ ನಂತರ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.

ಜಹಾಂಗೀರ್‌ಪುರಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ದುಶ್ಯಂತ್ ದವೆ, “ದೆಹಲಿ ಬಿಜೆಪಿ ಮುಖ್ಯಸ್ಥರು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್‌ಗೆ ದೂರು ನೀಡಿದ ನಂತರ ಹಿಂಸಾಚಾರ ಪೀಡಿತ ಪ್ರದೇಶದಿಂದ ಅತಿಕ್ರಮಣಗಳನ್ನು ತೆಗೆದುಹಾಕಲು ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಯಾವುದೆ ಸೂಚನೆಯಿಲ್ಲದೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು” ಎಂದು ವಾದಿಸಿದ್ದರು.

ಇದನ್ನೂ ಓದಿರಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಮುಸ್ಲಿಮರ ಕಟ್ಟಡಗಳನ್ನು ನೆಲಸಮಗೊಳಿಸಲಾಗುತ್ತಿದೆ ಎಂದು ಜಮಿಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯನ್ನು ಗಮನಿಸಿದ ಸುಪ್ರೀಂಕೋರ್ಟ್, ಅತಿಕ್ರಮಣ ವಿರೋಧಿ ಅಭಿಯಾನವನ್ನು ಸ್ಥಗಿತಗೊಳಿಸಿತ್ತು.

ಸುಪ್ರೀಂಕೋರ್ಟ್ ಆದೇಶ ಇದ್ದರೂ ಬುಲ್ಡೋಜರ್‌ಗಳು ಮಸೀದಿ ಹೊರಗಿನ ಅಂಗಡಿಗಳು, ಕಟ್ಟಡಗಳನ್ನು ಸುಪ್ರೀಂಕೋರ್ಟ್‌ ಎರಡನೇ ಬಾರಿಗೆ ಹಸ್ತಕ್ಷೇಪ ಮಾಡುವವರೆಗೂ ಧ್ವಂಸಗೊಳಿಸಲಾಯಿತು. ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಅಂತಿಮವಾಗಿ ಕಾರ್ಯಚರಣೆಯನ್ನು ನಿಲ್ಲಿಸುವಂತೆ ಆದೇಶ ನೀಡಿದ್ದರು.

ಬುಲ್ಡೋಝರ್‌ಗಳು ಧ್ವಂಸಗೊಳಿಸುತ್ತಿರುವ ಪ್ರದೇಶಕ್ಕೆ ತೆರಳಿದ್ದ ಸಿಪಿಐಎಂ ನಾಯಕಿ ಬೃಂದಾ ಕಾರಟ್‌ ಹಾಗೂ ಅವರ ತಂಡ ಬುಲ್ಡೋಝರ್‌ ಮುಂದೆ ನಿಂತು ಪ್ರತಿಭಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರು ಕಾನೂನನ್ನು ಕೈಗೆ ತಗೋತಾರೋ ಅವರಿಗೆ ಶಿಕ್ಷೇ ಆದರೆ ಈ ಎಎಪಿಗೆ ಏನು ತೊಂದರೆ,ಹಾಗಾದರೆ ಎಎಪಿ ಕಾನೂನನ್ನು ಕೈಗೆ ತಗೋಳ್ಳೋರ ಪರವೋ ಅಥವಾ ಸಂವಿಧಾನದ ಪರವೋ ಸ್ಪಷ್ಟ ಪಡಿಸಬೇಕಿದೆ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...