Homeಮುಖಪುಟದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ಭವಿಷ್ಯದಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆ ಎಂಬುದರ ಝಲಕ್ ದೆಹಲಿಯ ಕಾಲೇಜಿನಲ್ಲಿ ಕಂಡಿದೆ.

- Advertisement -
- Advertisement -

ಮೊದಲವರು ಜೆಎನ್‌ಯುಗೆ ಬಂದರು, ನೀವು ದನಿಯೆತ್ತಲಿಲ್ಲವೇಕೆಂದರೆ, ‘ಅವರು ಎಡಪಂಥೀಯರು, ಅರ್ಬನ್ ನಕ್ಸಲ್‌ಗಳು, ದೇಶದ್ರೋಹಿಗಳು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಜಾಮಿಯಾಕ್ಕೆ ಬಂದರು, ನೀವು ದನಿಯೆತ್ತಲಿಲ್ಲ. ಏಕೆಂದರೆ ‘ಅವರು ಮುಸ್ಲಿಮರು, ಭಯೋತ್ಪಾದಕರು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಶಾಹೀನ್ ಬಾಗ್‌ನತ್ತ ಗುಂಡೆಸೆದರು, ನೀವು ಆಗಲೂ ಮಾತನಾಡಲಿಲ್ಲ. ‘ಅವರು ಹಣಕ್ಕಾಗಿ ಪ್ರತಿಭಟಿಸುತ್ತಿದ್ದ, ದಾರಿತಪ್ಪಿದ ಮಹಿಳೆಯರಾಗಿದ್ದರು’.

ನಂತರ ಅವರು ಈ ದೇಶದ ರಾಜಕೀಯ ರಹಿತ ಹೆಣ್ಣುಮಕ್ಕಳಾದ ಗಾರ್ಗಿ ಹುಡುಗಿಯರತ್ತ ಬಂದರು. ಆಗ ನಿಮ್ಮ ಪರವಾಗಿ ದನಿಯೆತ್ತಲು ಏನೂ ಇರಲಿಲ್ಲ.

ಕಳೆದ ವಾರದಲ್ಲಿ ಗಾರ್ಗಿ ಕಾಲೇಜಿನಲ್ಲಿ ನಡೆದದ್ದನ್ನು ಕೇಳಿ ಬಹಳಷ್ಟು ಜನರು ಶಾಕ್‌ಗೊಳಗಾಗಿದ್ದಾರೆ. ಗುಂಪೊಂದು ಹೆಣ್ಣು ಮಕ್ಕಳ ಮೈಮುಟ್ಟಿ, ಲೈಂಗಿಕ ಕಿರುಕುಳ ಕೊಟ್ಟು, ಅವರ ಮುಂದೆಯೇ ಮುಷ್ಠಿಮೈಥುನ ನಡೆಸಿದ್ದಾರೆ. ಇದೆಲ್ಲವೂ ನಡೆದದ್ದು ದೇಶದ ರಾಜಧಾನಿಯಲ್ಲಿ, ದೆಹಲಿ ಪೊಲೀಸರು, ಶಿಕ್ಷಕರು ಮತ್ತು ಕಾಲೇಜು ಭದ್ರತಾ ಸಿಬ್ಬಂದಿಯ ಎದುರು ಎಂಬುದು ಇನ್ನೂ ಶಾಕಿಂಗ್ ಆದದ್ದಾಗಿದೆ. ಸಿಎಎ ಪರವಾದ ಪ್ರತಿಭಟನೆಯೊಂದನ್ನು ಮುಗಿಸಿಕೊಂಡು ಬಂದು ಜೈ ಶ್ರೀರಾಂ ಎಂಬ ಘೋಷಣೆ ಕೂಗುತ್ತಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಈ ಲೈಂಗಿಕ ಹಲ್ಲೆ ನಡೆದಿದೆ ಎಂಬುದನ್ನು ಗಮನಿಸಬೇಕಿದೆ. ಅವರಲ್ಲಿ ಬಹುತೇಕ ಜನರಿಗೆ ದೆಹಲಿ ಹೈಕೋರ್ಟ್‌ ಜಾಮೀನು ಸಹ ನೀಡಿದೆ.

ಇದು ಏನನ್ನು ತೋರಿಸುತ್ತದೆ? ಗೋವಿನ ಹೆಸರಲ್ಲಿ, ಲವ್ ಜಿಹಾದ್ ಹೆಸರಿನಲ್ಲಿ ಮತ್ತು ಮುಸ್ಲಿಮರು ಹೆಸರಿನಲ್ಲಿ ಕೊಲ್ಲಲು ತಯಾರು ಮಾಡಲಾಗಿದ್ದ ಗುಂಪು ನಿಮ್ಮ ನೆರೆಹೊರೆಗೆ, ಮನೆಗೆ, ಕಾಲೇಜು ಕ್ಯಾಂಪಸ್ಸುಗಳ ಬಳಿಗೆ ಬಂದಿದೆ ಎಂಬುದನ್ನು ತೋರುತ್ತಿದೆ. ಇಂತಹ ಕೊಳಕು ಕೃತ್ಯಗಳನ್ನೆಸಗಲು ಸದರಿ ಗುಂಪನ್ನು ರೂಪಿಸಿದ್ದು, ಬಲ ತುಂಬಿದ್ದು ಮತ್ತು ಸಾಯುಧರನ್ನಾಗಿಸಿದ್ದು ಪುರುಷಹಂಕಾರ ತುಂಬಿದ ಫ್ಯಾಸಿಸ್ಟ್ ಬಲಪಂಥೀಯ ತಾತ್ವಿಕತೆಯೇ ಆಗಿದೆ.

ಅವರ ಆದರ್ಶ ನಾರಿ ಚೌಕಟ್ಟಿಗೆ ಸರಿಯಾಗಿ ಹೊಂದಿಕೊಳ್ಳದ ಮಹಿಳೆಯರನ್ನು ಸ್ತ್ರೀ ದ್ವೇಷ ಮತ್ತು ಅಸಹನೆಯ ಮತ್ತನ್ನು ಏರಿಸಿಕೊಂಡಿರುವ ಗುಂಪು ಇಷ್ಟಪಡುವುದಿಲ್ಲ. ಆ ಗುಂಪು ಶಹೀನ್‌ಬಾಗ್‌ನ ಮಹಿಳೆಯರನ್ನು ರೇಪ್ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತದೆ. ಅದೇ ರೀತಿ ನರೇಂದ್ರ ಮೋದಿ ಸರ್ಕಾರವನ್ನು ವಿರೋಧಿಸುವ ಜೆಎನ್‌ಯು, ಜಾಮಿಯಾ ಅಥವಾ ಯಾವುದೇ ವಿದ್ಯಾರ್ಥಿಗಳನ್ನು ಕೊಲ್ಲುವುದಾಗಿ ಅಬ್ಬರಿಸುತ್ತದೆ. ಆಳುತ್ತಿರುವವರ ಶಾಮೀಲುದಾರಿಕೆ ಮತ್ತು ಸರ್ಕಾರೀ ಯಂತ್ರಾಂಗದ ಬೆಂಬಲದೊಂದಿಗೆ ದೇಶದ ಯಾವುದೇ ಭಾಗದಲ್ಲಿ ಅಪರಾಧೀ ಕೃತ್ಯಗಳನ್ನೆಸಗಲು ತಮಗೆ ಲೈಸೆನ್ಸ್ ಸಿಕ್ಕಿದೆ ಎಂದು ಅದು ಭಾವಿಸಿದೆ.

ಮಧ್ಯಮವರ್ಗ ಅಥವಾ ಮೇಲ್ವರ್ಗದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ವಾದಿಸುವ ಸಂಸ್ಕಾರಯುತ ಜನವರ್ಗಗಳು ಫ್ಯಾಸಿಸ್ಟ್ ಗುಂಪಿನ ಇಂತಹ ಕೃತ್ಯಗಳ ಕುರಿತು ಉಸಿರೆತ್ತುವುದಿಲ್ಲ.

ಮುಂದಿನ ದಿನಗಳ ಸೂಚನೆ

ಕ್ಯಾಂಪಸ್ಸುಗಳ ಮೇಲಿನ ದಾಳಿಯು ಬಿಜೆಪಿ ಸರ್ಕಾರದ ಪ್ರಮುಖ ಗುಣಲಕ್ಷಣಗಳಲ್ಲೊಂದಾಗಿದೆ. ಈ ಸರ್ಕಾರವು ಸುಶಿಕ್ಷಿತರನ್ನು ಮತ್ತು ಶಿಕ್ಷಣ ಪಡೆಯಬಯಸುವವರನ್ನು ದ್ವೇಷಿಸುತ್ತದೆ. ದೇಶದುದ್ದಗಲದ ಹಲವಾರು ಕ್ಯಾಂಪ್ಸಸುಗಳಲ್ಲಿ ಇದು ಪುನರಾವರ್ತನೆಯಗಿದೆ. ಕಳೆದ ಐದು ವರ್ಷಗಳಲ್ಲಿ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳನ್ನು ವಿಲನ್‌ಗಳನ್ನಾಗಿಸುವ ಕೆಲಸ ಅವ್ಯಾಹತವಾಗಿ ನಡೆದದ್ದಲ್ಲದೇ ದಾಳಿ ಮಾಡಲಾಗಿದೆ.

ಮಹಿಳೆಯರ ಕುರಿತಾದ ಇವರ ದ್ವೇಷದ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆಯೋ ಅದನ್ನು ಗಾರ್ಗಿ ಕಾಲೇಜಿನ ಹುಡುಗಿಯರು ಈಗ ಅನುಭವಿಸಿದ್ದಾರೆ. ಗಾರ್ಗಿ ಕಾಲೇಜಿನ ಪ್ರಿನ್ಸಿಪಾಲೆರ ಹುಡುಗಿಯರು ಲಕ್ಷ್ಮಣರೇಖೆಯನ್ನು ದಾಟಿದ್ದರಿಂದ ಇದಾಗಿದೆಯೆಂದು ಹೇಳಿಬಿಟ್ಟಿದ್ದನ್ನೂ ಗಮನಿಸಬೇಕು. ಎಲ್ಲೆಡೆ ಮಹಿಳೆಯರು ಸಮಾನ ಅವಕಾಶಗಳು ಮತ್ತು ಸಮಾನವಾಗಿ ತಮ್ಮನ್ನು ನಡೆಸಿಕೊಳ್ಳಬೇಕೆಂಬ ಹಕ್ಕೊತ್ತಾಯವನ್ನು ಮುಂದಿಡುತ್ತಿದ್ದಾರಾದರೂ, ಇಂತಹ ಘಟನೆಗಳು ‘ರಕ್ಷಣೆ’ಯ ಹೆಸರಿನಲ್ಲಿ ಮಹಿಳೆಯರನ್ನು ಮತ್ತಷ್ಟು ಪಂಜರದ ಗೊಂಬೆಗಳನ್ನಾಗಿಸುವ ಸಾಧ್ಯತೆಯೇ ಹೆಚ್ಚು.

ಎಲ್ಲಾ ಕ್ಯಾಂಪಸ್ಸುಗಳಲ್ಲೂ ಹುಡುಗಿಯರು ತಮಗೂ 24 ಗಂಟೆಗಳ ಗ್ರಂಥಾಲಯ, ಅಲ್ಲಿಗೆ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಇತ್ಯಾದಿಗಳು ಬೇಕೆಂದು ಕೇಳುತ್ತಿದ್ದಾರೆ. ಆದರೆ, ಪುರುಷ ಕೇಂದ್ರಿತ ದೃಷ್ಟಿಕೋನವು ಇವೆಲ್ಲವನ್ನೂ ರಕ್ಷಣೆಯ ಹೆಸರಿನಲ್ಲಿ ಅಥವಾ ಹಸಿ ಹಸಿಯಾಗಿ ‘ನಿಮಗೆ ಇವುಗಳ ಅಗತ್ಯವಿಲ್ಲ’ ಎಂದು ಹೇಳುತ್ತಾ ಹಿಂದೆ ತಳ್ಳಲು ಇಂತಹ ಘಟನೆಗಳು ನೆಪವಾಗುತ್ತವೆ. ಗಾರ್ಗಿ ಕಾಲೇಜಿನ ಮೇಲೆ ದಾಳಿ ನಡೆಸಿದವರ ಮೇಲೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳದಿರುವುದು ದೇಶದೆಲ್ಲೆಡೆಯ ವಿದ್ಯಾರ್ಥಿನಿಯರ ಭವಿಷ್ಯದ ಮೇಲೂ ಹಾಕಿದ ಕಲ್ಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...