Homeಮುಖಪುಟದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ಭವಿಷ್ಯದಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆ ಎಂಬುದರ ಝಲಕ್ ದೆಹಲಿಯ ಕಾಲೇಜಿನಲ್ಲಿ ಕಂಡಿದೆ.

- Advertisement -
- Advertisement -

ಮೊದಲವರು ಜೆಎನ್‌ಯುಗೆ ಬಂದರು, ನೀವು ದನಿಯೆತ್ತಲಿಲ್ಲವೇಕೆಂದರೆ, ‘ಅವರು ಎಡಪಂಥೀಯರು, ಅರ್ಬನ್ ನಕ್ಸಲ್‌ಗಳು, ದೇಶದ್ರೋಹಿಗಳು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಜಾಮಿಯಾಕ್ಕೆ ಬಂದರು, ನೀವು ದನಿಯೆತ್ತಲಿಲ್ಲ. ಏಕೆಂದರೆ ‘ಅವರು ಮುಸ್ಲಿಮರು, ಭಯೋತ್ಪಾದಕರು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಶಾಹೀನ್ ಬಾಗ್‌ನತ್ತ ಗುಂಡೆಸೆದರು, ನೀವು ಆಗಲೂ ಮಾತನಾಡಲಿಲ್ಲ. ‘ಅವರು ಹಣಕ್ಕಾಗಿ ಪ್ರತಿಭಟಿಸುತ್ತಿದ್ದ, ದಾರಿತಪ್ಪಿದ ಮಹಿಳೆಯರಾಗಿದ್ದರು’.

ನಂತರ ಅವರು ಈ ದೇಶದ ರಾಜಕೀಯ ರಹಿತ ಹೆಣ್ಣುಮಕ್ಕಳಾದ ಗಾರ್ಗಿ ಹುಡುಗಿಯರತ್ತ ಬಂದರು. ಆಗ ನಿಮ್ಮ ಪರವಾಗಿ ದನಿಯೆತ್ತಲು ಏನೂ ಇರಲಿಲ್ಲ.

ಕಳೆದ ವಾರದಲ್ಲಿ ಗಾರ್ಗಿ ಕಾಲೇಜಿನಲ್ಲಿ ನಡೆದದ್ದನ್ನು ಕೇಳಿ ಬಹಳಷ್ಟು ಜನರು ಶಾಕ್‌ಗೊಳಗಾಗಿದ್ದಾರೆ. ಗುಂಪೊಂದು ಹೆಣ್ಣು ಮಕ್ಕಳ ಮೈಮುಟ್ಟಿ, ಲೈಂಗಿಕ ಕಿರುಕುಳ ಕೊಟ್ಟು, ಅವರ ಮುಂದೆಯೇ ಮುಷ್ಠಿಮೈಥುನ ನಡೆಸಿದ್ದಾರೆ. ಇದೆಲ್ಲವೂ ನಡೆದದ್ದು ದೇಶದ ರಾಜಧಾನಿಯಲ್ಲಿ, ದೆಹಲಿ ಪೊಲೀಸರು, ಶಿಕ್ಷಕರು ಮತ್ತು ಕಾಲೇಜು ಭದ್ರತಾ ಸಿಬ್ಬಂದಿಯ ಎದುರು ಎಂಬುದು ಇನ್ನೂ ಶಾಕಿಂಗ್ ಆದದ್ದಾಗಿದೆ. ಸಿಎಎ ಪರವಾದ ಪ್ರತಿಭಟನೆಯೊಂದನ್ನು ಮುಗಿಸಿಕೊಂಡು ಬಂದು ಜೈ ಶ್ರೀರಾಂ ಎಂಬ ಘೋಷಣೆ ಕೂಗುತ್ತಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಈ ಲೈಂಗಿಕ ಹಲ್ಲೆ ನಡೆದಿದೆ ಎಂಬುದನ್ನು ಗಮನಿಸಬೇಕಿದೆ. ಅವರಲ್ಲಿ ಬಹುತೇಕ ಜನರಿಗೆ ದೆಹಲಿ ಹೈಕೋರ್ಟ್‌ ಜಾಮೀನು ಸಹ ನೀಡಿದೆ.

ಇದು ಏನನ್ನು ತೋರಿಸುತ್ತದೆ? ಗೋವಿನ ಹೆಸರಲ್ಲಿ, ಲವ್ ಜಿಹಾದ್ ಹೆಸರಿನಲ್ಲಿ ಮತ್ತು ಮುಸ್ಲಿಮರು ಹೆಸರಿನಲ್ಲಿ ಕೊಲ್ಲಲು ತಯಾರು ಮಾಡಲಾಗಿದ್ದ ಗುಂಪು ನಿಮ್ಮ ನೆರೆಹೊರೆಗೆ, ಮನೆಗೆ, ಕಾಲೇಜು ಕ್ಯಾಂಪಸ್ಸುಗಳ ಬಳಿಗೆ ಬಂದಿದೆ ಎಂಬುದನ್ನು ತೋರುತ್ತಿದೆ. ಇಂತಹ ಕೊಳಕು ಕೃತ್ಯಗಳನ್ನೆಸಗಲು ಸದರಿ ಗುಂಪನ್ನು ರೂಪಿಸಿದ್ದು, ಬಲ ತುಂಬಿದ್ದು ಮತ್ತು ಸಾಯುಧರನ್ನಾಗಿಸಿದ್ದು ಪುರುಷಹಂಕಾರ ತುಂಬಿದ ಫ್ಯಾಸಿಸ್ಟ್ ಬಲಪಂಥೀಯ ತಾತ್ವಿಕತೆಯೇ ಆಗಿದೆ.

ಅವರ ಆದರ್ಶ ನಾರಿ ಚೌಕಟ್ಟಿಗೆ ಸರಿಯಾಗಿ ಹೊಂದಿಕೊಳ್ಳದ ಮಹಿಳೆಯರನ್ನು ಸ್ತ್ರೀ ದ್ವೇಷ ಮತ್ತು ಅಸಹನೆಯ ಮತ್ತನ್ನು ಏರಿಸಿಕೊಂಡಿರುವ ಗುಂಪು ಇಷ್ಟಪಡುವುದಿಲ್ಲ. ಆ ಗುಂಪು ಶಹೀನ್‌ಬಾಗ್‌ನ ಮಹಿಳೆಯರನ್ನು ರೇಪ್ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತದೆ. ಅದೇ ರೀತಿ ನರೇಂದ್ರ ಮೋದಿ ಸರ್ಕಾರವನ್ನು ವಿರೋಧಿಸುವ ಜೆಎನ್‌ಯು, ಜಾಮಿಯಾ ಅಥವಾ ಯಾವುದೇ ವಿದ್ಯಾರ್ಥಿಗಳನ್ನು ಕೊಲ್ಲುವುದಾಗಿ ಅಬ್ಬರಿಸುತ್ತದೆ. ಆಳುತ್ತಿರುವವರ ಶಾಮೀಲುದಾರಿಕೆ ಮತ್ತು ಸರ್ಕಾರೀ ಯಂತ್ರಾಂಗದ ಬೆಂಬಲದೊಂದಿಗೆ ದೇಶದ ಯಾವುದೇ ಭಾಗದಲ್ಲಿ ಅಪರಾಧೀ ಕೃತ್ಯಗಳನ್ನೆಸಗಲು ತಮಗೆ ಲೈಸೆನ್ಸ್ ಸಿಕ್ಕಿದೆ ಎಂದು ಅದು ಭಾವಿಸಿದೆ.

ಮಧ್ಯಮವರ್ಗ ಅಥವಾ ಮೇಲ್ವರ್ಗದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ವಾದಿಸುವ ಸಂಸ್ಕಾರಯುತ ಜನವರ್ಗಗಳು ಫ್ಯಾಸಿಸ್ಟ್ ಗುಂಪಿನ ಇಂತಹ ಕೃತ್ಯಗಳ ಕುರಿತು ಉಸಿರೆತ್ತುವುದಿಲ್ಲ.

ಮುಂದಿನ ದಿನಗಳ ಸೂಚನೆ

ಕ್ಯಾಂಪಸ್ಸುಗಳ ಮೇಲಿನ ದಾಳಿಯು ಬಿಜೆಪಿ ಸರ್ಕಾರದ ಪ್ರಮುಖ ಗುಣಲಕ್ಷಣಗಳಲ್ಲೊಂದಾಗಿದೆ. ಈ ಸರ್ಕಾರವು ಸುಶಿಕ್ಷಿತರನ್ನು ಮತ್ತು ಶಿಕ್ಷಣ ಪಡೆಯಬಯಸುವವರನ್ನು ದ್ವೇಷಿಸುತ್ತದೆ. ದೇಶದುದ್ದಗಲದ ಹಲವಾರು ಕ್ಯಾಂಪ್ಸಸುಗಳಲ್ಲಿ ಇದು ಪುನರಾವರ್ತನೆಯಗಿದೆ. ಕಳೆದ ಐದು ವರ್ಷಗಳಲ್ಲಿ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳನ್ನು ವಿಲನ್‌ಗಳನ್ನಾಗಿಸುವ ಕೆಲಸ ಅವ್ಯಾಹತವಾಗಿ ನಡೆದದ್ದಲ್ಲದೇ ದಾಳಿ ಮಾಡಲಾಗಿದೆ.

ಮಹಿಳೆಯರ ಕುರಿತಾದ ಇವರ ದ್ವೇಷದ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆಯೋ ಅದನ್ನು ಗಾರ್ಗಿ ಕಾಲೇಜಿನ ಹುಡುಗಿಯರು ಈಗ ಅನುಭವಿಸಿದ್ದಾರೆ. ಗಾರ್ಗಿ ಕಾಲೇಜಿನ ಪ್ರಿನ್ಸಿಪಾಲೆರ ಹುಡುಗಿಯರು ಲಕ್ಷ್ಮಣರೇಖೆಯನ್ನು ದಾಟಿದ್ದರಿಂದ ಇದಾಗಿದೆಯೆಂದು ಹೇಳಿಬಿಟ್ಟಿದ್ದನ್ನೂ ಗಮನಿಸಬೇಕು. ಎಲ್ಲೆಡೆ ಮಹಿಳೆಯರು ಸಮಾನ ಅವಕಾಶಗಳು ಮತ್ತು ಸಮಾನವಾಗಿ ತಮ್ಮನ್ನು ನಡೆಸಿಕೊಳ್ಳಬೇಕೆಂಬ ಹಕ್ಕೊತ್ತಾಯವನ್ನು ಮುಂದಿಡುತ್ತಿದ್ದಾರಾದರೂ, ಇಂತಹ ಘಟನೆಗಳು ‘ರಕ್ಷಣೆ’ಯ ಹೆಸರಿನಲ್ಲಿ ಮಹಿಳೆಯರನ್ನು ಮತ್ತಷ್ಟು ಪಂಜರದ ಗೊಂಬೆಗಳನ್ನಾಗಿಸುವ ಸಾಧ್ಯತೆಯೇ ಹೆಚ್ಚು.

ಎಲ್ಲಾ ಕ್ಯಾಂಪಸ್ಸುಗಳಲ್ಲೂ ಹುಡುಗಿಯರು ತಮಗೂ 24 ಗಂಟೆಗಳ ಗ್ರಂಥಾಲಯ, ಅಲ್ಲಿಗೆ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಇತ್ಯಾದಿಗಳು ಬೇಕೆಂದು ಕೇಳುತ್ತಿದ್ದಾರೆ. ಆದರೆ, ಪುರುಷ ಕೇಂದ್ರಿತ ದೃಷ್ಟಿಕೋನವು ಇವೆಲ್ಲವನ್ನೂ ರಕ್ಷಣೆಯ ಹೆಸರಿನಲ್ಲಿ ಅಥವಾ ಹಸಿ ಹಸಿಯಾಗಿ ‘ನಿಮಗೆ ಇವುಗಳ ಅಗತ್ಯವಿಲ್ಲ’ ಎಂದು ಹೇಳುತ್ತಾ ಹಿಂದೆ ತಳ್ಳಲು ಇಂತಹ ಘಟನೆಗಳು ನೆಪವಾಗುತ್ತವೆ. ಗಾರ್ಗಿ ಕಾಲೇಜಿನ ಮೇಲೆ ದಾಳಿ ನಡೆಸಿದವರ ಮೇಲೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳದಿರುವುದು ದೇಶದೆಲ್ಲೆಡೆಯ ವಿದ್ಯಾರ್ಥಿನಿಯರ ಭವಿಷ್ಯದ ಮೇಲೂ ಹಾಕಿದ ಕಲ್ಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...