Homeಮುಖಪುಟದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ಭವಿಷ್ಯದಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆ ಎಂಬುದರ ಝಲಕ್ ದೆಹಲಿಯ ಕಾಲೇಜಿನಲ್ಲಿ ಕಂಡಿದೆ.

- Advertisement -
- Advertisement -

ಮೊದಲವರು ಜೆಎನ್‌ಯುಗೆ ಬಂದರು, ನೀವು ದನಿಯೆತ್ತಲಿಲ್ಲವೇಕೆಂದರೆ, ‘ಅವರು ಎಡಪಂಥೀಯರು, ಅರ್ಬನ್ ನಕ್ಸಲ್‌ಗಳು, ದೇಶದ್ರೋಹಿಗಳು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಜಾಮಿಯಾಕ್ಕೆ ಬಂದರು, ನೀವು ದನಿಯೆತ್ತಲಿಲ್ಲ. ಏಕೆಂದರೆ ‘ಅವರು ಮುಸ್ಲಿಮರು, ಭಯೋತ್ಪಾದಕರು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಶಾಹೀನ್ ಬಾಗ್‌ನತ್ತ ಗುಂಡೆಸೆದರು, ನೀವು ಆಗಲೂ ಮಾತನಾಡಲಿಲ್ಲ. ‘ಅವರು ಹಣಕ್ಕಾಗಿ ಪ್ರತಿಭಟಿಸುತ್ತಿದ್ದ, ದಾರಿತಪ್ಪಿದ ಮಹಿಳೆಯರಾಗಿದ್ದರು’.

ನಂತರ ಅವರು ಈ ದೇಶದ ರಾಜಕೀಯ ರಹಿತ ಹೆಣ್ಣುಮಕ್ಕಳಾದ ಗಾರ್ಗಿ ಹುಡುಗಿಯರತ್ತ ಬಂದರು. ಆಗ ನಿಮ್ಮ ಪರವಾಗಿ ದನಿಯೆತ್ತಲು ಏನೂ ಇರಲಿಲ್ಲ.

ಕಳೆದ ವಾರದಲ್ಲಿ ಗಾರ್ಗಿ ಕಾಲೇಜಿನಲ್ಲಿ ನಡೆದದ್ದನ್ನು ಕೇಳಿ ಬಹಳಷ್ಟು ಜನರು ಶಾಕ್‌ಗೊಳಗಾಗಿದ್ದಾರೆ. ಗುಂಪೊಂದು ಹೆಣ್ಣು ಮಕ್ಕಳ ಮೈಮುಟ್ಟಿ, ಲೈಂಗಿಕ ಕಿರುಕುಳ ಕೊಟ್ಟು, ಅವರ ಮುಂದೆಯೇ ಮುಷ್ಠಿಮೈಥುನ ನಡೆಸಿದ್ದಾರೆ. ಇದೆಲ್ಲವೂ ನಡೆದದ್ದು ದೇಶದ ರಾಜಧಾನಿಯಲ್ಲಿ, ದೆಹಲಿ ಪೊಲೀಸರು, ಶಿಕ್ಷಕರು ಮತ್ತು ಕಾಲೇಜು ಭದ್ರತಾ ಸಿಬ್ಬಂದಿಯ ಎದುರು ಎಂಬುದು ಇನ್ನೂ ಶಾಕಿಂಗ್ ಆದದ್ದಾಗಿದೆ. ಸಿಎಎ ಪರವಾದ ಪ್ರತಿಭಟನೆಯೊಂದನ್ನು ಮುಗಿಸಿಕೊಂಡು ಬಂದು ಜೈ ಶ್ರೀರಾಂ ಎಂಬ ಘೋಷಣೆ ಕೂಗುತ್ತಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಈ ಲೈಂಗಿಕ ಹಲ್ಲೆ ನಡೆದಿದೆ ಎಂಬುದನ್ನು ಗಮನಿಸಬೇಕಿದೆ. ಅವರಲ್ಲಿ ಬಹುತೇಕ ಜನರಿಗೆ ದೆಹಲಿ ಹೈಕೋರ್ಟ್‌ ಜಾಮೀನು ಸಹ ನೀಡಿದೆ.

ಇದು ಏನನ್ನು ತೋರಿಸುತ್ತದೆ? ಗೋವಿನ ಹೆಸರಲ್ಲಿ, ಲವ್ ಜಿಹಾದ್ ಹೆಸರಿನಲ್ಲಿ ಮತ್ತು ಮುಸ್ಲಿಮರು ಹೆಸರಿನಲ್ಲಿ ಕೊಲ್ಲಲು ತಯಾರು ಮಾಡಲಾಗಿದ್ದ ಗುಂಪು ನಿಮ್ಮ ನೆರೆಹೊರೆಗೆ, ಮನೆಗೆ, ಕಾಲೇಜು ಕ್ಯಾಂಪಸ್ಸುಗಳ ಬಳಿಗೆ ಬಂದಿದೆ ಎಂಬುದನ್ನು ತೋರುತ್ತಿದೆ. ಇಂತಹ ಕೊಳಕು ಕೃತ್ಯಗಳನ್ನೆಸಗಲು ಸದರಿ ಗುಂಪನ್ನು ರೂಪಿಸಿದ್ದು, ಬಲ ತುಂಬಿದ್ದು ಮತ್ತು ಸಾಯುಧರನ್ನಾಗಿಸಿದ್ದು ಪುರುಷಹಂಕಾರ ತುಂಬಿದ ಫ್ಯಾಸಿಸ್ಟ್ ಬಲಪಂಥೀಯ ತಾತ್ವಿಕತೆಯೇ ಆಗಿದೆ.

ಅವರ ಆದರ್ಶ ನಾರಿ ಚೌಕಟ್ಟಿಗೆ ಸರಿಯಾಗಿ ಹೊಂದಿಕೊಳ್ಳದ ಮಹಿಳೆಯರನ್ನು ಸ್ತ್ರೀ ದ್ವೇಷ ಮತ್ತು ಅಸಹನೆಯ ಮತ್ತನ್ನು ಏರಿಸಿಕೊಂಡಿರುವ ಗುಂಪು ಇಷ್ಟಪಡುವುದಿಲ್ಲ. ಆ ಗುಂಪು ಶಹೀನ್‌ಬಾಗ್‌ನ ಮಹಿಳೆಯರನ್ನು ರೇಪ್ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತದೆ. ಅದೇ ರೀತಿ ನರೇಂದ್ರ ಮೋದಿ ಸರ್ಕಾರವನ್ನು ವಿರೋಧಿಸುವ ಜೆಎನ್‌ಯು, ಜಾಮಿಯಾ ಅಥವಾ ಯಾವುದೇ ವಿದ್ಯಾರ್ಥಿಗಳನ್ನು ಕೊಲ್ಲುವುದಾಗಿ ಅಬ್ಬರಿಸುತ್ತದೆ. ಆಳುತ್ತಿರುವವರ ಶಾಮೀಲುದಾರಿಕೆ ಮತ್ತು ಸರ್ಕಾರೀ ಯಂತ್ರಾಂಗದ ಬೆಂಬಲದೊಂದಿಗೆ ದೇಶದ ಯಾವುದೇ ಭಾಗದಲ್ಲಿ ಅಪರಾಧೀ ಕೃತ್ಯಗಳನ್ನೆಸಗಲು ತಮಗೆ ಲೈಸೆನ್ಸ್ ಸಿಕ್ಕಿದೆ ಎಂದು ಅದು ಭಾವಿಸಿದೆ.

ಮಧ್ಯಮವರ್ಗ ಅಥವಾ ಮೇಲ್ವರ್ಗದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ವಾದಿಸುವ ಸಂಸ್ಕಾರಯುತ ಜನವರ್ಗಗಳು ಫ್ಯಾಸಿಸ್ಟ್ ಗುಂಪಿನ ಇಂತಹ ಕೃತ್ಯಗಳ ಕುರಿತು ಉಸಿರೆತ್ತುವುದಿಲ್ಲ.

ಮುಂದಿನ ದಿನಗಳ ಸೂಚನೆ

ಕ್ಯಾಂಪಸ್ಸುಗಳ ಮೇಲಿನ ದಾಳಿಯು ಬಿಜೆಪಿ ಸರ್ಕಾರದ ಪ್ರಮುಖ ಗುಣಲಕ್ಷಣಗಳಲ್ಲೊಂದಾಗಿದೆ. ಈ ಸರ್ಕಾರವು ಸುಶಿಕ್ಷಿತರನ್ನು ಮತ್ತು ಶಿಕ್ಷಣ ಪಡೆಯಬಯಸುವವರನ್ನು ದ್ವೇಷಿಸುತ್ತದೆ. ದೇಶದುದ್ದಗಲದ ಹಲವಾರು ಕ್ಯಾಂಪ್ಸಸುಗಳಲ್ಲಿ ಇದು ಪುನರಾವರ್ತನೆಯಗಿದೆ. ಕಳೆದ ಐದು ವರ್ಷಗಳಲ್ಲಿ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳನ್ನು ವಿಲನ್‌ಗಳನ್ನಾಗಿಸುವ ಕೆಲಸ ಅವ್ಯಾಹತವಾಗಿ ನಡೆದದ್ದಲ್ಲದೇ ದಾಳಿ ಮಾಡಲಾಗಿದೆ.

ಮಹಿಳೆಯರ ಕುರಿತಾದ ಇವರ ದ್ವೇಷದ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆಯೋ ಅದನ್ನು ಗಾರ್ಗಿ ಕಾಲೇಜಿನ ಹುಡುಗಿಯರು ಈಗ ಅನುಭವಿಸಿದ್ದಾರೆ. ಗಾರ್ಗಿ ಕಾಲೇಜಿನ ಪ್ರಿನ್ಸಿಪಾಲೆರ ಹುಡುಗಿಯರು ಲಕ್ಷ್ಮಣರೇಖೆಯನ್ನು ದಾಟಿದ್ದರಿಂದ ಇದಾಗಿದೆಯೆಂದು ಹೇಳಿಬಿಟ್ಟಿದ್ದನ್ನೂ ಗಮನಿಸಬೇಕು. ಎಲ್ಲೆಡೆ ಮಹಿಳೆಯರು ಸಮಾನ ಅವಕಾಶಗಳು ಮತ್ತು ಸಮಾನವಾಗಿ ತಮ್ಮನ್ನು ನಡೆಸಿಕೊಳ್ಳಬೇಕೆಂಬ ಹಕ್ಕೊತ್ತಾಯವನ್ನು ಮುಂದಿಡುತ್ತಿದ್ದಾರಾದರೂ, ಇಂತಹ ಘಟನೆಗಳು ‘ರಕ್ಷಣೆ’ಯ ಹೆಸರಿನಲ್ಲಿ ಮಹಿಳೆಯರನ್ನು ಮತ್ತಷ್ಟು ಪಂಜರದ ಗೊಂಬೆಗಳನ್ನಾಗಿಸುವ ಸಾಧ್ಯತೆಯೇ ಹೆಚ್ಚು.

ಎಲ್ಲಾ ಕ್ಯಾಂಪಸ್ಸುಗಳಲ್ಲೂ ಹುಡುಗಿಯರು ತಮಗೂ 24 ಗಂಟೆಗಳ ಗ್ರಂಥಾಲಯ, ಅಲ್ಲಿಗೆ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಇತ್ಯಾದಿಗಳು ಬೇಕೆಂದು ಕೇಳುತ್ತಿದ್ದಾರೆ. ಆದರೆ, ಪುರುಷ ಕೇಂದ್ರಿತ ದೃಷ್ಟಿಕೋನವು ಇವೆಲ್ಲವನ್ನೂ ರಕ್ಷಣೆಯ ಹೆಸರಿನಲ್ಲಿ ಅಥವಾ ಹಸಿ ಹಸಿಯಾಗಿ ‘ನಿಮಗೆ ಇವುಗಳ ಅಗತ್ಯವಿಲ್ಲ’ ಎಂದು ಹೇಳುತ್ತಾ ಹಿಂದೆ ತಳ್ಳಲು ಇಂತಹ ಘಟನೆಗಳು ನೆಪವಾಗುತ್ತವೆ. ಗಾರ್ಗಿ ಕಾಲೇಜಿನ ಮೇಲೆ ದಾಳಿ ನಡೆಸಿದವರ ಮೇಲೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳದಿರುವುದು ದೇಶದೆಲ್ಲೆಡೆಯ ವಿದ್ಯಾರ್ಥಿನಿಯರ ಭವಿಷ್ಯದ ಮೇಲೂ ಹಾಕಿದ ಕಲ್ಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...