Homeಮುಖಪುಟದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ದೆಹಲಿಯ ಗಾರ್ಗಿ ಕಾಲೇಜಿನ ಮೇಲೆ ದಾಳಿ: ಮನೆ ಬಾಗಿಲಿಗೆ ಬಂದ ಫ್ಯಾಸಿಸ್ಟ್ ಪಡೆ

ಭವಿಷ್ಯದಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆ ಎಂಬುದರ ಝಲಕ್ ದೆಹಲಿಯ ಕಾಲೇಜಿನಲ್ಲಿ ಕಂಡಿದೆ.

- Advertisement -
- Advertisement -

ಮೊದಲವರು ಜೆಎನ್‌ಯುಗೆ ಬಂದರು, ನೀವು ದನಿಯೆತ್ತಲಿಲ್ಲವೇಕೆಂದರೆ, ‘ಅವರು ಎಡಪಂಥೀಯರು, ಅರ್ಬನ್ ನಕ್ಸಲ್‌ಗಳು, ದೇಶದ್ರೋಹಿಗಳು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಜಾಮಿಯಾಕ್ಕೆ ಬಂದರು, ನೀವು ದನಿಯೆತ್ತಲಿಲ್ಲ. ಏಕೆಂದರೆ ‘ಅವರು ಮುಸ್ಲಿಮರು, ಭಯೋತ್ಪಾದಕರು, ಅವರಿಗೆ ಹಾಗೆಯೇ ಆಗಬೇಕಿತ್ತು’.

ನಂತರ ಅವರು ಶಾಹೀನ್ ಬಾಗ್‌ನತ್ತ ಗುಂಡೆಸೆದರು, ನೀವು ಆಗಲೂ ಮಾತನಾಡಲಿಲ್ಲ. ‘ಅವರು ಹಣಕ್ಕಾಗಿ ಪ್ರತಿಭಟಿಸುತ್ತಿದ್ದ, ದಾರಿತಪ್ಪಿದ ಮಹಿಳೆಯರಾಗಿದ್ದರು’.

ನಂತರ ಅವರು ಈ ದೇಶದ ರಾಜಕೀಯ ರಹಿತ ಹೆಣ್ಣುಮಕ್ಕಳಾದ ಗಾರ್ಗಿ ಹುಡುಗಿಯರತ್ತ ಬಂದರು. ಆಗ ನಿಮ್ಮ ಪರವಾಗಿ ದನಿಯೆತ್ತಲು ಏನೂ ಇರಲಿಲ್ಲ.

ಕಳೆದ ವಾರದಲ್ಲಿ ಗಾರ್ಗಿ ಕಾಲೇಜಿನಲ್ಲಿ ನಡೆದದ್ದನ್ನು ಕೇಳಿ ಬಹಳಷ್ಟು ಜನರು ಶಾಕ್‌ಗೊಳಗಾಗಿದ್ದಾರೆ. ಗುಂಪೊಂದು ಹೆಣ್ಣು ಮಕ್ಕಳ ಮೈಮುಟ್ಟಿ, ಲೈಂಗಿಕ ಕಿರುಕುಳ ಕೊಟ್ಟು, ಅವರ ಮುಂದೆಯೇ ಮುಷ್ಠಿಮೈಥುನ ನಡೆಸಿದ್ದಾರೆ. ಇದೆಲ್ಲವೂ ನಡೆದದ್ದು ದೇಶದ ರಾಜಧಾನಿಯಲ್ಲಿ, ದೆಹಲಿ ಪೊಲೀಸರು, ಶಿಕ್ಷಕರು ಮತ್ತು ಕಾಲೇಜು ಭದ್ರತಾ ಸಿಬ್ಬಂದಿಯ ಎದುರು ಎಂಬುದು ಇನ್ನೂ ಶಾಕಿಂಗ್ ಆದದ್ದಾಗಿದೆ. ಸಿಎಎ ಪರವಾದ ಪ್ರತಿಭಟನೆಯೊಂದನ್ನು ಮುಗಿಸಿಕೊಂಡು ಬಂದು ಜೈ ಶ್ರೀರಾಂ ಎಂಬ ಘೋಷಣೆ ಕೂಗುತ್ತಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಈ ಲೈಂಗಿಕ ಹಲ್ಲೆ ನಡೆದಿದೆ ಎಂಬುದನ್ನು ಗಮನಿಸಬೇಕಿದೆ. ಅವರಲ್ಲಿ ಬಹುತೇಕ ಜನರಿಗೆ ದೆಹಲಿ ಹೈಕೋರ್ಟ್‌ ಜಾಮೀನು ಸಹ ನೀಡಿದೆ.

ಇದು ಏನನ್ನು ತೋರಿಸುತ್ತದೆ? ಗೋವಿನ ಹೆಸರಲ್ಲಿ, ಲವ್ ಜಿಹಾದ್ ಹೆಸರಿನಲ್ಲಿ ಮತ್ತು ಮುಸ್ಲಿಮರು ಹೆಸರಿನಲ್ಲಿ ಕೊಲ್ಲಲು ತಯಾರು ಮಾಡಲಾಗಿದ್ದ ಗುಂಪು ನಿಮ್ಮ ನೆರೆಹೊರೆಗೆ, ಮನೆಗೆ, ಕಾಲೇಜು ಕ್ಯಾಂಪಸ್ಸುಗಳ ಬಳಿಗೆ ಬಂದಿದೆ ಎಂಬುದನ್ನು ತೋರುತ್ತಿದೆ. ಇಂತಹ ಕೊಳಕು ಕೃತ್ಯಗಳನ್ನೆಸಗಲು ಸದರಿ ಗುಂಪನ್ನು ರೂಪಿಸಿದ್ದು, ಬಲ ತುಂಬಿದ್ದು ಮತ್ತು ಸಾಯುಧರನ್ನಾಗಿಸಿದ್ದು ಪುರುಷಹಂಕಾರ ತುಂಬಿದ ಫ್ಯಾಸಿಸ್ಟ್ ಬಲಪಂಥೀಯ ತಾತ್ವಿಕತೆಯೇ ಆಗಿದೆ.

ಅವರ ಆದರ್ಶ ನಾರಿ ಚೌಕಟ್ಟಿಗೆ ಸರಿಯಾಗಿ ಹೊಂದಿಕೊಳ್ಳದ ಮಹಿಳೆಯರನ್ನು ಸ್ತ್ರೀ ದ್ವೇಷ ಮತ್ತು ಅಸಹನೆಯ ಮತ್ತನ್ನು ಏರಿಸಿಕೊಂಡಿರುವ ಗುಂಪು ಇಷ್ಟಪಡುವುದಿಲ್ಲ. ಆ ಗುಂಪು ಶಹೀನ್‌ಬಾಗ್‌ನ ಮಹಿಳೆಯರನ್ನು ರೇಪ್ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತದೆ. ಅದೇ ರೀತಿ ನರೇಂದ್ರ ಮೋದಿ ಸರ್ಕಾರವನ್ನು ವಿರೋಧಿಸುವ ಜೆಎನ್‌ಯು, ಜಾಮಿಯಾ ಅಥವಾ ಯಾವುದೇ ವಿದ್ಯಾರ್ಥಿಗಳನ್ನು ಕೊಲ್ಲುವುದಾಗಿ ಅಬ್ಬರಿಸುತ್ತದೆ. ಆಳುತ್ತಿರುವವರ ಶಾಮೀಲುದಾರಿಕೆ ಮತ್ತು ಸರ್ಕಾರೀ ಯಂತ್ರಾಂಗದ ಬೆಂಬಲದೊಂದಿಗೆ ದೇಶದ ಯಾವುದೇ ಭಾಗದಲ್ಲಿ ಅಪರಾಧೀ ಕೃತ್ಯಗಳನ್ನೆಸಗಲು ತಮಗೆ ಲೈಸೆನ್ಸ್ ಸಿಕ್ಕಿದೆ ಎಂದು ಅದು ಭಾವಿಸಿದೆ.

ಮಧ್ಯಮವರ್ಗ ಅಥವಾ ಮೇಲ್ವರ್ಗದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳಿಗೆ ಗಲ್ಲುಶಿಕ್ಷೆ ನೀಡಬೇಕೆಂದು ವಾದಿಸುವ ಸಂಸ್ಕಾರಯುತ ಜನವರ್ಗಗಳು ಫ್ಯಾಸಿಸ್ಟ್ ಗುಂಪಿನ ಇಂತಹ ಕೃತ್ಯಗಳ ಕುರಿತು ಉಸಿರೆತ್ತುವುದಿಲ್ಲ.

ಮುಂದಿನ ದಿನಗಳ ಸೂಚನೆ

ಕ್ಯಾಂಪಸ್ಸುಗಳ ಮೇಲಿನ ದಾಳಿಯು ಬಿಜೆಪಿ ಸರ್ಕಾರದ ಪ್ರಮುಖ ಗುಣಲಕ್ಷಣಗಳಲ್ಲೊಂದಾಗಿದೆ. ಈ ಸರ್ಕಾರವು ಸುಶಿಕ್ಷಿತರನ್ನು ಮತ್ತು ಶಿಕ್ಷಣ ಪಡೆಯಬಯಸುವವರನ್ನು ದ್ವೇಷಿಸುತ್ತದೆ. ದೇಶದುದ್ದಗಲದ ಹಲವಾರು ಕ್ಯಾಂಪ್ಸಸುಗಳಲ್ಲಿ ಇದು ಪುನರಾವರ್ತನೆಯಗಿದೆ. ಕಳೆದ ಐದು ವರ್ಷಗಳಲ್ಲಿ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳನ್ನು ವಿಲನ್‌ಗಳನ್ನಾಗಿಸುವ ಕೆಲಸ ಅವ್ಯಾಹತವಾಗಿ ನಡೆದದ್ದಲ್ಲದೇ ದಾಳಿ ಮಾಡಲಾಗಿದೆ.

ಮಹಿಳೆಯರ ಕುರಿತಾದ ಇವರ ದ್ವೇಷದ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಏನು ಕಾದಿದೆಯೋ ಅದನ್ನು ಗಾರ್ಗಿ ಕಾಲೇಜಿನ ಹುಡುಗಿಯರು ಈಗ ಅನುಭವಿಸಿದ್ದಾರೆ. ಗಾರ್ಗಿ ಕಾಲೇಜಿನ ಪ್ರಿನ್ಸಿಪಾಲೆರ ಹುಡುಗಿಯರು ಲಕ್ಷ್ಮಣರೇಖೆಯನ್ನು ದಾಟಿದ್ದರಿಂದ ಇದಾಗಿದೆಯೆಂದು ಹೇಳಿಬಿಟ್ಟಿದ್ದನ್ನೂ ಗಮನಿಸಬೇಕು. ಎಲ್ಲೆಡೆ ಮಹಿಳೆಯರು ಸಮಾನ ಅವಕಾಶಗಳು ಮತ್ತು ಸಮಾನವಾಗಿ ತಮ್ಮನ್ನು ನಡೆಸಿಕೊಳ್ಳಬೇಕೆಂಬ ಹಕ್ಕೊತ್ತಾಯವನ್ನು ಮುಂದಿಡುತ್ತಿದ್ದಾರಾದರೂ, ಇಂತಹ ಘಟನೆಗಳು ‘ರಕ್ಷಣೆ’ಯ ಹೆಸರಿನಲ್ಲಿ ಮಹಿಳೆಯರನ್ನು ಮತ್ತಷ್ಟು ಪಂಜರದ ಗೊಂಬೆಗಳನ್ನಾಗಿಸುವ ಸಾಧ್ಯತೆಯೇ ಹೆಚ್ಚು.

ಎಲ್ಲಾ ಕ್ಯಾಂಪಸ್ಸುಗಳಲ್ಲೂ ಹುಡುಗಿಯರು ತಮಗೂ 24 ಗಂಟೆಗಳ ಗ್ರಂಥಾಲಯ, ಅಲ್ಲಿಗೆ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಇತ್ಯಾದಿಗಳು ಬೇಕೆಂದು ಕೇಳುತ್ತಿದ್ದಾರೆ. ಆದರೆ, ಪುರುಷ ಕೇಂದ್ರಿತ ದೃಷ್ಟಿಕೋನವು ಇವೆಲ್ಲವನ್ನೂ ರಕ್ಷಣೆಯ ಹೆಸರಿನಲ್ಲಿ ಅಥವಾ ಹಸಿ ಹಸಿಯಾಗಿ ‘ನಿಮಗೆ ಇವುಗಳ ಅಗತ್ಯವಿಲ್ಲ’ ಎಂದು ಹೇಳುತ್ತಾ ಹಿಂದೆ ತಳ್ಳಲು ಇಂತಹ ಘಟನೆಗಳು ನೆಪವಾಗುತ್ತವೆ. ಗಾರ್ಗಿ ಕಾಲೇಜಿನ ಮೇಲೆ ದಾಳಿ ನಡೆಸಿದವರ ಮೇಲೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳದಿರುವುದು ದೇಶದೆಲ್ಲೆಡೆಯ ವಿದ್ಯಾರ್ಥಿನಿಯರ ಭವಿಷ್ಯದ ಮೇಲೂ ಹಾಕಿದ ಕಲ್ಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...