Homeಮುಖಪುಟದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, 'ಜೈ ಶ್ರೀ ರಾಮ್' ಘೋಷಣೆ

ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

- Advertisement -
- Advertisement -

ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿನ ಮಳಿಗೆಯೊಂದರಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸಲಾಗುತ್ತಿತ್ತು. ಇದನ್ನು ವಿರೋಧಿಸಿದ ಮತಾಂಧರ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಸ್ಟಾಲ್‌ನ್ನು ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು  ನಡೆಸುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ವೈರಲ್ ಆಗಿದ್ದು, ಇದರಲ್ಲಿ ದಾಳಿ ನಡೆಸಿದ ಪುಂಡರು, ‘ಜೈ ಶ್ರೀ ರಾಮ್’ ಹಾಗೂ ‘ಭಾರತ್ ಮಾತಾ ಕಿ ಜೈ’ ಎನ್ನುವ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸಿದೆ.

ಪುಸ್ತಕ ಮಳಿಗೆಗೆ ಸಂಬಂಧಿಸಿದ ಸ್ವಯಂಸೇವಕರೊಬ್ಬರು ಮಾತನಾಡಿದ್ದು, ”ಬೇರೆ ಸ್ಟಾಲ್‌ಗಳಲ್ಲಿಯೂ ಇತರ ಧರ್ಮಗಳ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ” ಎಂದು ಹೇಳಿದರು.

”ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಬಲವಂತ ಮಾಡುವ ಮೂಲಕ ನೀವು ಜನರನ್ನು ಪರಿವರ್ತಿಸುತ್ತಿದ್ದೀರಿ ಎಂದು ದಾಳಿ ನಡೆಸಿದ ಗುಂಪಿನವರು ಆರೋಪಿಸಿದರು. ಆಗ ನಾವು ದಾರಿಹೋಕರಿಗೆ ಮಾತ್ರ ಉಚಿತ ಪುಸ್ತಕಗಳನ್ನು ವಿತರಿಸುತ್ತಿದ್ದೇವೆ. ಬೇರೆ ಧರ್ಮಗಳ ಉಚಿತ ಪಠ್ಯಗಳನ್ನು ನೀಡುವವರು ಇದ್ದಾರೆ ಎಂದು ನಾವು ಹೇಳಿದರೂ ಅವರು ಕೇಳಲಿಲ್ಲ” ಎಂದು ಸ್ವಯಂಸೇವಕ ಹೇಳಿದರು.

ಇದನ್ನೂ ಓದಿ: ತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

”ಪ್ರತಿಭಟನಾಕಾರರು ಬುಧವಾರ ಮಧ್ಯಾಹ್ನ 2.15ರ ಸುಮಾರಿಗೆ ಸ್ಟಾಲ್‌ಗೆ ಬಂದರು. ಅವರು ಹನುಮಾನ್ ಚಾಲೀಸ್‌ನ್ನು ಪಠಿಸಲು ಪ್ರಾರಂಭಿಸಿದರು ಮತ್ತು ಸ್ಟಾಲ್‌ನಲ್ಲಿರುವ ಸ್ವಯಂಸೇವಕರಿಗೆ ”ಉಚಿತವಾಗಿ ಬೈಬಲ್ ಪ್ರತಿಗಳನ್ನು ವಿತರಿಸುವುದನ್ನು ನಿಲ್ಲಿಸಿ” ಮತ್ತು ”ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವುದನ್ನು ನಿಲ್ಲಿಸಿ” ಎಂದು ಹೇಳಿದ್ದಾರೆಂದು 15 ಸಾಕ್ಷಿಗಳು ಮತ್ತು ಮಳಿಗೆಗೆ ಸಂಬಂಧಿಸಿದವರನ್ನು ಉಲ್ಲೇಖಿಸಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಪ್ರತಿಭಟನಾಕಾರರು ಧಾರ್ಮಿಕ ಪುಸ್ತಕಗಳು ಮತ್ತು ಪೋಸ್ಟರ್‌ಗಳನ್ನು ಹರಿದಿದ್ದಾರೆ ಎಂದು ಸ್ವಯಂಸೇವಕರು ಹೇಳಿಕೊಂಡರೆ, ಪೊಲೀಸರು ಅವರ ಆರೋಪವನ್ನು ನಿರಾಕರಿಸಿದ್ದಾರೆ.

”ನಾವು ಪ್ರದೇಶವನ್ನು ಪರಿಶೀಲಿಸಿದ್ದೇವೆ, ಅಲ್ಲಿ ಯಾವುದೇ ಪುಸ್ತಕಗಳು ಹರಿಯಲಾಗಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

”ಕೆಲವು ಯುವಕರ ಗುಂಪೊಂದು ಕೇವಲ ಪ್ರತಿಭಟಿಸಿತು. ಆದರೆ ಯಾವುದೇ ಹಿಂಸಾಚಾರ ನಡೆಸಿಲ್ಲ. ಈ ಬಗ್ಗೆ ಗಿಡಿಯನ್ ಇಂಟರ್‌ನ್ಯಾಶನಲ್ ಸಂಸ್ಥೆಯು ದೂರು ಸಲ್ಲಿಸಲು ಬಯಸಿಲ್ಲ ಮತ್ತು ಸಮಸ್ಯೆಯನ್ನು ಅಲ್ಲಿಯೇ ಪರಿಹರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ”ಈ ಪ್ರತಿಭಟನೆಯು ಸಂಘಟಿತವಾಗಿ ನಡೆದಿಲ್ಲ. ಕೆಲವರು, ಕ್ರಿಶ್ಚಿಯನ್ ಗುಂಪಿನ ಬಗ್ಗೆ ತಿಳಿದುಕೊಂಡು, ಅವರನ್ನು ಎದುರಿಸಲು ಹೋದರು ಎಂದು ಅವರು ಹೇಳಿದರು.

”ಮಿಷನರಿಗಳು ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಮೂಲಕ ಜನರನ್ನು ಪರಿವರ್ತಿಸುತ್ತಾರೆ. ನಾವು ಇದನ್ನು ವಿರೋಧಿಸುತ್ತೇವೆ ಮತ್ತು ಅವರಿಗೆ ಈ ರೀತಿ ಮಾಡಬೇಡಿ ಎಂದು ಕೇಳಿಕೊಂಡಿದ್ದೇವೆ. ಯಾವುದೇ ಹಿಂಸಾಚಾರ, ಗಲಾಟೆ ನಡೆದಿಲ್ಲ” ಎಂದು ವಿಶ್ವ ಹಿಂದೂ ಪರಿಷತ್ ವಕ್ತಾರ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...