Homeಮುಖಪುಟದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, 'ಜೈ ಶ್ರೀ ರಾಮ್' ಘೋಷಣೆ

ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

- Advertisement -
- Advertisement -

ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿನ ಮಳಿಗೆಯೊಂದರಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸಲಾಗುತ್ತಿತ್ತು. ಇದನ್ನು ವಿರೋಧಿಸಿದ ಮತಾಂಧರ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಸ್ಟಾಲ್‌ನ್ನು ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು  ನಡೆಸುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ವೈರಲ್ ಆಗಿದ್ದು, ಇದರಲ್ಲಿ ದಾಳಿ ನಡೆಸಿದ ಪುಂಡರು, ‘ಜೈ ಶ್ರೀ ರಾಮ್’ ಹಾಗೂ ‘ಭಾರತ್ ಮಾತಾ ಕಿ ಜೈ’ ಎನ್ನುವ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸಿದೆ.

ಪುಸ್ತಕ ಮಳಿಗೆಗೆ ಸಂಬಂಧಿಸಿದ ಸ್ವಯಂಸೇವಕರೊಬ್ಬರು ಮಾತನಾಡಿದ್ದು, ”ಬೇರೆ ಸ್ಟಾಲ್‌ಗಳಲ್ಲಿಯೂ ಇತರ ಧರ್ಮಗಳ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ” ಎಂದು ಹೇಳಿದರು.

”ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಬಲವಂತ ಮಾಡುವ ಮೂಲಕ ನೀವು ಜನರನ್ನು ಪರಿವರ್ತಿಸುತ್ತಿದ್ದೀರಿ ಎಂದು ದಾಳಿ ನಡೆಸಿದ ಗುಂಪಿನವರು ಆರೋಪಿಸಿದರು. ಆಗ ನಾವು ದಾರಿಹೋಕರಿಗೆ ಮಾತ್ರ ಉಚಿತ ಪುಸ್ತಕಗಳನ್ನು ವಿತರಿಸುತ್ತಿದ್ದೇವೆ. ಬೇರೆ ಧರ್ಮಗಳ ಉಚಿತ ಪಠ್ಯಗಳನ್ನು ನೀಡುವವರು ಇದ್ದಾರೆ ಎಂದು ನಾವು ಹೇಳಿದರೂ ಅವರು ಕೇಳಲಿಲ್ಲ” ಎಂದು ಸ್ವಯಂಸೇವಕ ಹೇಳಿದರು.

ಇದನ್ನೂ ಓದಿ: ತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

”ಪ್ರತಿಭಟನಾಕಾರರು ಬುಧವಾರ ಮಧ್ಯಾಹ್ನ 2.15ರ ಸುಮಾರಿಗೆ ಸ್ಟಾಲ್‌ಗೆ ಬಂದರು. ಅವರು ಹನುಮಾನ್ ಚಾಲೀಸ್‌ನ್ನು ಪಠಿಸಲು ಪ್ರಾರಂಭಿಸಿದರು ಮತ್ತು ಸ್ಟಾಲ್‌ನಲ್ಲಿರುವ ಸ್ವಯಂಸೇವಕರಿಗೆ ”ಉಚಿತವಾಗಿ ಬೈಬಲ್ ಪ್ರತಿಗಳನ್ನು ವಿತರಿಸುವುದನ್ನು ನಿಲ್ಲಿಸಿ” ಮತ್ತು ”ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವುದನ್ನು ನಿಲ್ಲಿಸಿ” ಎಂದು ಹೇಳಿದ್ದಾರೆಂದು 15 ಸಾಕ್ಷಿಗಳು ಮತ್ತು ಮಳಿಗೆಗೆ ಸಂಬಂಧಿಸಿದವರನ್ನು ಉಲ್ಲೇಖಿಸಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಪ್ರತಿಭಟನಾಕಾರರು ಧಾರ್ಮಿಕ ಪುಸ್ತಕಗಳು ಮತ್ತು ಪೋಸ್ಟರ್‌ಗಳನ್ನು ಹರಿದಿದ್ದಾರೆ ಎಂದು ಸ್ವಯಂಸೇವಕರು ಹೇಳಿಕೊಂಡರೆ, ಪೊಲೀಸರು ಅವರ ಆರೋಪವನ್ನು ನಿರಾಕರಿಸಿದ್ದಾರೆ.

”ನಾವು ಪ್ರದೇಶವನ್ನು ಪರಿಶೀಲಿಸಿದ್ದೇವೆ, ಅಲ್ಲಿ ಯಾವುದೇ ಪುಸ್ತಕಗಳು ಹರಿಯಲಾಗಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

”ಕೆಲವು ಯುವಕರ ಗುಂಪೊಂದು ಕೇವಲ ಪ್ರತಿಭಟಿಸಿತು. ಆದರೆ ಯಾವುದೇ ಹಿಂಸಾಚಾರ ನಡೆಸಿಲ್ಲ. ಈ ಬಗ್ಗೆ ಗಿಡಿಯನ್ ಇಂಟರ್‌ನ್ಯಾಶನಲ್ ಸಂಸ್ಥೆಯು ದೂರು ಸಲ್ಲಿಸಲು ಬಯಸಿಲ್ಲ ಮತ್ತು ಸಮಸ್ಯೆಯನ್ನು ಅಲ್ಲಿಯೇ ಪರಿಹರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ”ಈ ಪ್ರತಿಭಟನೆಯು ಸಂಘಟಿತವಾಗಿ ನಡೆದಿಲ್ಲ. ಕೆಲವರು, ಕ್ರಿಶ್ಚಿಯನ್ ಗುಂಪಿನ ಬಗ್ಗೆ ತಿಳಿದುಕೊಂಡು, ಅವರನ್ನು ಎದುರಿಸಲು ಹೋದರು ಎಂದು ಅವರು ಹೇಳಿದರು.

”ಮಿಷನರಿಗಳು ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಮೂಲಕ ಜನರನ್ನು ಪರಿವರ್ತಿಸುತ್ತಾರೆ. ನಾವು ಇದನ್ನು ವಿರೋಧಿಸುತ್ತೇವೆ ಮತ್ತು ಅವರಿಗೆ ಈ ರೀತಿ ಮಾಡಬೇಡಿ ಎಂದು ಕೇಳಿಕೊಂಡಿದ್ದೇವೆ. ಯಾವುದೇ ಹಿಂಸಾಚಾರ, ಗಲಾಟೆ ನಡೆದಿಲ್ಲ” ಎಂದು ವಿಶ್ವ ಹಿಂದೂ ಪರಿಷತ್ ವಕ್ತಾರ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...