Homeಮುಖಪುಟದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, 'ಜೈ ಶ್ರೀ ರಾಮ್' ಘೋಷಣೆ

ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

- Advertisement -
- Advertisement -

ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿನ ಮಳಿಗೆಯೊಂದರಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸಲಾಗುತ್ತಿತ್ತು. ಇದನ್ನು ವಿರೋಧಿಸಿದ ಮತಾಂಧರ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಸ್ಟಾಲ್‌ನ್ನು ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು  ನಡೆಸುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ವೈರಲ್ ಆಗಿದ್ದು, ಇದರಲ್ಲಿ ದಾಳಿ ನಡೆಸಿದ ಪುಂಡರು, ‘ಜೈ ಶ್ರೀ ರಾಮ್’ ಹಾಗೂ ‘ಭಾರತ್ ಮಾತಾ ಕಿ ಜೈ’ ಎನ್ನುವ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸಿದೆ.

ಪುಸ್ತಕ ಮಳಿಗೆಗೆ ಸಂಬಂಧಿಸಿದ ಸ್ವಯಂಸೇವಕರೊಬ್ಬರು ಮಾತನಾಡಿದ್ದು, ”ಬೇರೆ ಸ್ಟಾಲ್‌ಗಳಲ್ಲಿಯೂ ಇತರ ಧರ್ಮಗಳ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ” ಎಂದು ಹೇಳಿದರು.

”ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಬಲವಂತ ಮಾಡುವ ಮೂಲಕ ನೀವು ಜನರನ್ನು ಪರಿವರ್ತಿಸುತ್ತಿದ್ದೀರಿ ಎಂದು ದಾಳಿ ನಡೆಸಿದ ಗುಂಪಿನವರು ಆರೋಪಿಸಿದರು. ಆಗ ನಾವು ದಾರಿಹೋಕರಿಗೆ ಮಾತ್ರ ಉಚಿತ ಪುಸ್ತಕಗಳನ್ನು ವಿತರಿಸುತ್ತಿದ್ದೇವೆ. ಬೇರೆ ಧರ್ಮಗಳ ಉಚಿತ ಪಠ್ಯಗಳನ್ನು ನೀಡುವವರು ಇದ್ದಾರೆ ಎಂದು ನಾವು ಹೇಳಿದರೂ ಅವರು ಕೇಳಲಿಲ್ಲ” ಎಂದು ಸ್ವಯಂಸೇವಕ ಹೇಳಿದರು.

ಇದನ್ನೂ ಓದಿ: ತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

”ಪ್ರತಿಭಟನಾಕಾರರು ಬುಧವಾರ ಮಧ್ಯಾಹ್ನ 2.15ರ ಸುಮಾರಿಗೆ ಸ್ಟಾಲ್‌ಗೆ ಬಂದರು. ಅವರು ಹನುಮಾನ್ ಚಾಲೀಸ್‌ನ್ನು ಪಠಿಸಲು ಪ್ರಾರಂಭಿಸಿದರು ಮತ್ತು ಸ್ಟಾಲ್‌ನಲ್ಲಿರುವ ಸ್ವಯಂಸೇವಕರಿಗೆ ”ಉಚಿತವಾಗಿ ಬೈಬಲ್ ಪ್ರತಿಗಳನ್ನು ವಿತರಿಸುವುದನ್ನು ನಿಲ್ಲಿಸಿ” ಮತ್ತು ”ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವುದನ್ನು ನಿಲ್ಲಿಸಿ” ಎಂದು ಹೇಳಿದ್ದಾರೆಂದು 15 ಸಾಕ್ಷಿಗಳು ಮತ್ತು ಮಳಿಗೆಗೆ ಸಂಬಂಧಿಸಿದವರನ್ನು ಉಲ್ಲೇಖಿಸಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಪ್ರತಿಭಟನಾಕಾರರು ಧಾರ್ಮಿಕ ಪುಸ್ತಕಗಳು ಮತ್ತು ಪೋಸ್ಟರ್‌ಗಳನ್ನು ಹರಿದಿದ್ದಾರೆ ಎಂದು ಸ್ವಯಂಸೇವಕರು ಹೇಳಿಕೊಂಡರೆ, ಪೊಲೀಸರು ಅವರ ಆರೋಪವನ್ನು ನಿರಾಕರಿಸಿದ್ದಾರೆ.

”ನಾವು ಪ್ರದೇಶವನ್ನು ಪರಿಶೀಲಿಸಿದ್ದೇವೆ, ಅಲ್ಲಿ ಯಾವುದೇ ಪುಸ್ತಕಗಳು ಹರಿಯಲಾಗಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

”ಕೆಲವು ಯುವಕರ ಗುಂಪೊಂದು ಕೇವಲ ಪ್ರತಿಭಟಿಸಿತು. ಆದರೆ ಯಾವುದೇ ಹಿಂಸಾಚಾರ ನಡೆಸಿಲ್ಲ. ಈ ಬಗ್ಗೆ ಗಿಡಿಯನ್ ಇಂಟರ್‌ನ್ಯಾಶನಲ್ ಸಂಸ್ಥೆಯು ದೂರು ಸಲ್ಲಿಸಲು ಬಯಸಿಲ್ಲ ಮತ್ತು ಸಮಸ್ಯೆಯನ್ನು ಅಲ್ಲಿಯೇ ಪರಿಹರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ”ಈ ಪ್ರತಿಭಟನೆಯು ಸಂಘಟಿತವಾಗಿ ನಡೆದಿಲ್ಲ. ಕೆಲವರು, ಕ್ರಿಶ್ಚಿಯನ್ ಗುಂಪಿನ ಬಗ್ಗೆ ತಿಳಿದುಕೊಂಡು, ಅವರನ್ನು ಎದುರಿಸಲು ಹೋದರು ಎಂದು ಅವರು ಹೇಳಿದರು.

”ಮಿಷನರಿಗಳು ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಮೂಲಕ ಜನರನ್ನು ಪರಿವರ್ತಿಸುತ್ತಾರೆ. ನಾವು ಇದನ್ನು ವಿರೋಧಿಸುತ್ತೇವೆ ಮತ್ತು ಅವರಿಗೆ ಈ ರೀತಿ ಮಾಡಬೇಡಿ ಎಂದು ಕೇಳಿಕೊಂಡಿದ್ದೇವೆ. ಯಾವುದೇ ಹಿಂಸಾಚಾರ, ಗಲಾಟೆ ನಡೆದಿಲ್ಲ” ಎಂದು ವಿಶ್ವ ಹಿಂದೂ ಪರಿಷತ್ ವಕ್ತಾರ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....