Homeಮುಖಪುಟದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, 'ಜೈ ಶ್ರೀ ರಾಮ್' ಘೋಷಣೆ

ದೆಹಲಿ ವಿಶ್ವ ಪುಸ್ತಕ ಮೇಳ: ಬೈಬಲ್‌ ವಿತರಿಸುವ ಮಳಿಗೆ ಧ್ವಂಸ, ‘ಜೈ ಶ್ರೀ ರಾಮ್’ ಘೋಷಣೆ

- Advertisement -
- Advertisement -

ದೆಹಲಿಯ ವಿಶ್ವ ಪುಸ್ತಕ ಮೇಳದಲ್ಲಿನ ಮಳಿಗೆಯೊಂದರಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸಲಾಗುತ್ತಿತ್ತು. ಇದನ್ನು ವಿರೋಧಿಸಿದ ಮತಾಂಧರ ಗುಂಪೊಂದು ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಸ್ಟಾಲ್‌ನ್ನು ಗಿಡಿಯನ್ ಇಂಟರ್‌ನ್ಯಾಶನಲ್ ಎಂಬ ಕ್ರಿಶ್ಚಿಯನ್ ಲಾಭೋದ್ದೇಶವಿಲ್ಲದ ಸಂಸ್ಥೆಯು  ನಡೆಸುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ವೈರಲ್ ಆಗಿದ್ದು, ಇದರಲ್ಲಿ ದಾಳಿ ನಡೆಸಿದ ಪುಂಡರು, ‘ಜೈ ಶ್ರೀ ರಾಮ್’ ಹಾಗೂ ‘ಭಾರತ್ ಮಾತಾ ಕಿ ಜೈ’ ಎನ್ನುವ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸಿದೆ.

ಪುಸ್ತಕ ಮಳಿಗೆಗೆ ಸಂಬಂಧಿಸಿದ ಸ್ವಯಂಸೇವಕರೊಬ್ಬರು ಮಾತನಾಡಿದ್ದು, ”ಬೇರೆ ಸ್ಟಾಲ್‌ಗಳಲ್ಲಿಯೂ ಇತರ ಧರ್ಮಗಳ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ” ಎಂದು ಹೇಳಿದರು.

”ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಬಲವಂತ ಮಾಡುವ ಮೂಲಕ ನೀವು ಜನರನ್ನು ಪರಿವರ್ತಿಸುತ್ತಿದ್ದೀರಿ ಎಂದು ದಾಳಿ ನಡೆಸಿದ ಗುಂಪಿನವರು ಆರೋಪಿಸಿದರು. ಆಗ ನಾವು ದಾರಿಹೋಕರಿಗೆ ಮಾತ್ರ ಉಚಿತ ಪುಸ್ತಕಗಳನ್ನು ವಿತರಿಸುತ್ತಿದ್ದೇವೆ. ಬೇರೆ ಧರ್ಮಗಳ ಉಚಿತ ಪಠ್ಯಗಳನ್ನು ನೀಡುವವರು ಇದ್ದಾರೆ ಎಂದು ನಾವು ಹೇಳಿದರೂ ಅವರು ಕೇಳಲಿಲ್ಲ” ಎಂದು ಸ್ವಯಂಸೇವಕ ಹೇಳಿದರು.

ಇದನ್ನೂ ಓದಿ: ತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

”ಪ್ರತಿಭಟನಾಕಾರರು ಬುಧವಾರ ಮಧ್ಯಾಹ್ನ 2.15ರ ಸುಮಾರಿಗೆ ಸ್ಟಾಲ್‌ಗೆ ಬಂದರು. ಅವರು ಹನುಮಾನ್ ಚಾಲೀಸ್‌ನ್ನು ಪಠಿಸಲು ಪ್ರಾರಂಭಿಸಿದರು ಮತ್ತು ಸ್ಟಾಲ್‌ನಲ್ಲಿರುವ ಸ್ವಯಂಸೇವಕರಿಗೆ ”ಉಚಿತವಾಗಿ ಬೈಬಲ್ ಪ್ರತಿಗಳನ್ನು ವಿತರಿಸುವುದನ್ನು ನಿಲ್ಲಿಸಿ” ಮತ್ತು ”ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವುದನ್ನು ನಿಲ್ಲಿಸಿ” ಎಂದು ಹೇಳಿದ್ದಾರೆಂದು 15 ಸಾಕ್ಷಿಗಳು ಮತ್ತು ಮಳಿಗೆಗೆ ಸಂಬಂಧಿಸಿದವರನ್ನು ಉಲ್ಲೇಖಿಸಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಪ್ರತಿಭಟನಾಕಾರರು ಧಾರ್ಮಿಕ ಪುಸ್ತಕಗಳು ಮತ್ತು ಪೋಸ್ಟರ್‌ಗಳನ್ನು ಹರಿದಿದ್ದಾರೆ ಎಂದು ಸ್ವಯಂಸೇವಕರು ಹೇಳಿಕೊಂಡರೆ, ಪೊಲೀಸರು ಅವರ ಆರೋಪವನ್ನು ನಿರಾಕರಿಸಿದ್ದಾರೆ.

”ನಾವು ಪ್ರದೇಶವನ್ನು ಪರಿಶೀಲಿಸಿದ್ದೇವೆ, ಅಲ್ಲಿ ಯಾವುದೇ ಪುಸ್ತಕಗಳು ಹರಿಯಲಾಗಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

”ಕೆಲವು ಯುವಕರ ಗುಂಪೊಂದು ಕೇವಲ ಪ್ರತಿಭಟಿಸಿತು. ಆದರೆ ಯಾವುದೇ ಹಿಂಸಾಚಾರ ನಡೆಸಿಲ್ಲ. ಈ ಬಗ್ಗೆ ಗಿಡಿಯನ್ ಇಂಟರ್‌ನ್ಯಾಶನಲ್ ಸಂಸ್ಥೆಯು ದೂರು ಸಲ್ಲಿಸಲು ಬಯಸಿಲ್ಲ ಮತ್ತು ಸಮಸ್ಯೆಯನ್ನು ಅಲ್ಲಿಯೇ ಪರಿಹರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ”ಈ ಪ್ರತಿಭಟನೆಯು ಸಂಘಟಿತವಾಗಿ ನಡೆದಿಲ್ಲ. ಕೆಲವರು, ಕ್ರಿಶ್ಚಿಯನ್ ಗುಂಪಿನ ಬಗ್ಗೆ ತಿಳಿದುಕೊಂಡು, ಅವರನ್ನು ಎದುರಿಸಲು ಹೋದರು ಎಂದು ಅವರು ಹೇಳಿದರು.

”ಮಿಷನರಿಗಳು ಪುಸ್ತಕಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಮೂಲಕ ಜನರನ್ನು ಪರಿವರ್ತಿಸುತ್ತಾರೆ. ನಾವು ಇದನ್ನು ವಿರೋಧಿಸುತ್ತೇವೆ ಮತ್ತು ಅವರಿಗೆ ಈ ರೀತಿ ಮಾಡಬೇಡಿ ಎಂದು ಕೇಳಿಕೊಂಡಿದ್ದೇವೆ. ಯಾವುದೇ ಹಿಂಸಾಚಾರ, ಗಲಾಟೆ ನಡೆದಿಲ್ಲ” ಎಂದು ವಿಶ್ವ ಹಿಂದೂ ಪರಿಷತ್ ವಕ್ತಾರ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...