Homeಕೊರೊನಾದೆಹಲಿಯಲ್ಲಿ ಕೊರೊನಾ ಏರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ ಸಿಎಂ ಕೇಜ್ರಿವಾಲ್

ದೆಹಲಿಯಲ್ಲಿ ಕೊರೊನಾ ಏರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ, ನಗರದ ಜನರು ಭಯಪಡಬೇಕಿಲ್ಲ, ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಈ ಯೆಲ್ಲೋ ಅರ್ಲಟ್ ಅಡಿಯಲ್ಲಿ ಖಾಸಗಿ ಕಚೇರಿಗಳು ಶೇಕಡಾ 50 ರಷ್ಟು ಕಾರ್ಯನಿರ್ವಹಿಸುತ್ತವೆ, ಮಾಲ್‌ಗಳು ಮತ್ತು ಅಂಗಡಿಗಳು ಬೆಸ-ಸಮ ಆಧಾರದ ಮೇಲೆ ತೆರೆಯಲ್ಪಡುತ್ತವೆ. ಮದುವೆಗೆ 20 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ಸರ್ಕಾರ ತಿಳಿಸಿದೆ.

ಹೊಸ ನಿಯಮಗಳು ಹೀಗಿವೆ.

೧. ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತದೆ.

೨. ಆಸ್ಪತ್ರೆಗಳು, ಮಾಧ್ಯಮಗಳು, ಬ್ಯಾಂಕ್‌ಗಳು, ವಿಮಾ ಕಂಪನಿಗಳು ಮತ್ತು ಟೆಲಿಕಾಂ ಸೇವೆಗಳನ್ನು ಒಳಗೊಂಡಿರುವ ಗೊತ್ತುಪಡಿಸಿದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಕಚೇರಿಗಳು 50% ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸುತ್ತವೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘನೆ: 48 ಗಂಟೆಗಳಲ್ಲಿ 1.54 ಕೋಟಿ ರೂ. ದಂಡ ಸಂಗ್ರಹಿಸಿದ ದೆಹಲಿ ಸರ್ಕಾರ!

೩. ಮದುವೆಗೆ 20 ಜನರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಮನೆಯಲ್ಲಿ ಅಥವಾ ನ್ಯಾಯಾಲಯದಲ್ಲಿ ಮಾತ್ರ ನಡೆಯಬಹುದಾಗಿದೆ. ಅಂತ್ಯಕ್ರಿಯೆಗೂ 20 ವ್ಯಕ್ತಿಗಳ ಮಿತಿ ಅನ್ವಯಿಸುತ್ತದೆ.

೪. ಮಾಲ್‌ಗಳು ಮತ್ತು ಅಂಗಡಿಗಳು ಬೆಸ-ಸಮ ಆಧಾರದ ಮೇಲೆ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆದಿರುತ್ತವೆ. ಆನ್‌ಲೈನ್ ಡೆಲಿವರಿ ಮುಂದುವರಿಯಬಹುದು. ವಸತಿ ಪ್ರದೇಶಗಳಲ್ಲಿನ ಸ್ವಂತ ಅಂಗಡಿಗಳು ಅಥವಾ ಮಾರುಕಟ್ಟೆಗಳು ಬೆಸ-ಸಮ ನಿಯಮ ಅನುಸರಿಸಬೇಕಿಲ್ಲ.

೫. ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಜಿಮ್‌ಗಳು ಮತ್ತೆ ಮುಚ್ಚಲ್ಪಡುತ್ತವೆ. ಶಾಲಾ-ಕಾಲೇಜುಗಳು ಬಂದ್ ಆಗಲಿವೆ.

೬. ರಾತ್ರಿ 10 ಗಂಟೆಗೆ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳನ್ನು ಮುಚ್ಚಲಾಗುತ್ತದೆ. ಇವುಗಳು ತಮ್ಮ ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತವೆ.

೭. ದೆಹಲಿ ಮೆಟ್ರೋ ಕೂಡ ಅರ್ಧದಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ.

೮. ಸಲೂನ್‌ಗಳು, ಕ್ಷೌರಿಕ ಅಂಗಡಿಗಳು ಮತ್ತು ಪಾರ್ಲರ್‌ಗಳು ತೆರೆಯಲು ಅನುಮತಿಯಿದೆ. ಸ್ಪಾಗಳು ಮತ್ತು wellness clinics ಮುಚ್ಚಲಾಗುವುದು.

೯. ರಾಜಕೀಯ, ಧಾರ್ಮಿಕ, ಹಬ್ಬ-ಸಂಬಂಧಿತ ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ. ಧಾರ್ಮಿಕ ಸ್ಥಳಗಳು ತೆರೆದಿರಬಹುದು ಆದರೆ ಹೊರಗಿನಿಂದ ಜನ ಹೋಗುವಂತಿಲ್ಲ.

ಕಳೆದ ಎರಡು ದಿನಗಳಿಂದ ಕೊರೊನಾ ಪಾಸಿಟಿವ್ ರೇಟ್ 0.5 ಶೇಕಡಾಕ್ಕಿಂತ ಹೆಚ್ಚಿತ್ತು, ಹೀಗಾಗಿ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (GRAP) ಪ್ರಕಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...