Homeಮುಖಪುಟ'ಗಂಭೀರ ಮಟ್ಟ' ತಲುಪಿದ ದೆಹಲಿಯ ವಾಯುಮಾಲಿನ್ಯ : ಜಿಆರ್‌ಎಪಿ 3ನೇ ಹಂತ ಜಾರಿ

‘ಗಂಭೀರ ಮಟ್ಟ’ ತಲುಪಿದ ದೆಹಲಿಯ ವಾಯುಮಾಲಿನ್ಯ : ಜಿಆರ್‌ಎಪಿ 3ನೇ ಹಂತ ಜಾರಿ

- Advertisement -
- Advertisement -

ದೆಹಲಿಯ ವಾಯುಮಾಲಿನ್ಯ ‘ಗಂಭೀರ’ ಮಟ್ಟ ತಲುಪಿದ್ದು, ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ರಾಷ್ಟ ರಾಜಧಾನಿ ಪ್ರದೇಶದಾದ್ಯಂತ (ಎನ್‌ಸಿಆರ್‌) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್ (ಜಿಆರ್‌ಎಪಿ) ಯ ಹಂತ IIIರ ಅಡಿ ನಿರ್ಬಂಧಗಳನ್ನು ಜಾರಿಗೊಳಿಸಿದೆ. ನಿರ್ಮಾಣ ಕಾರ್ಯಗಳು, ವಾಹನಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳನ್ನು ವಿಧಿಸಲಾಗಿದೆ.

ಯಾವುದಕ್ಕೆಲ್ಲ ನಿರ್ಬಂಧ?

  • ಅನಿವಾರ್ಯವಲ್ಲದ ನಿರ್ಮಾಣ ಮತ್ತು ಉರುಳಿಸುವಿಕೆ : ಮಣ್ಣಿನ ಕೆಲಸ, ಪೈಲಿಂಗ್, ತೆರೆದ ಕಂದಕ ನಿರ್ಮಾಣ, ವೆಲ್ಡಿಂಗ್, ಪೇಂಟಿಂಗ್, ಪ್ಲಾಸ್ಟರಿಂಗ್, ಟೈಲ್/ನೆಲಹಾಸು ಕೆಲಸ, ಆರ್‌ಎಂಸಿ ಸ್ಥಾವರಗಳು.
  • ಡಾಂಬರು ಹಾಕದ ರಸ್ತೆಗಳಲ್ಲಿ ಸಿಮೆಂಟ್, ಮರಳು ಮತ್ತು ಹಾರುಬೂದಿಯಂತಹ ನಿರ್ಮಾಣ ಸಾಮಗ್ರಿಗಳ ಸಾಗಣೆ.
  • ಕಲ್ಲು ಪುಡಿ ಮಾಡುವ ಯಂತ್ರಗಳು, ಇಟ್ಟಿಗೆ ಗೂಡುಗಳು ಮತ್ತು ಗಣಿಗಾರಿಕೆ ಚಟುವಟಿಕೆಗಳು.
  • ಬಿಎಸ್-III ಪೆಟ್ರೋಲ್ ಮತ್ತು ಬಿಎಸ್-IV ಡೀಸೆಲ್ ನಾಲ್ಕು ಚಕ್ರಗಳ ವಾಹನಗಳು; ಅನಿವಾರ್ಯವಲ್ಲದ ಡೀಸೆಲ್-ಚಾಲಿತ ಮಧ್ಯಮ ಸರಕು ವಾಹನಗಳು; ಸಿಎನ್‌ಜಿ, ವಿದ್ಯುತ್ ಅಥವಾ ಬಿಎಸ್-VI ಮಾನದಂಡಗಳಲ್ಲಿ ಓಡದ ಅಂತರ-ರಾಜ್ಯ ಡೀಸೆಲ್ ಬಸ್‌ಗಳು.
  • ಅನುಮೋದಿಸದ ಇಂಧನಗಳನ್ನು ಬಳಸುವ ಕೈಗಾರಿಕೆಗಳು.

ಯಾವುದಕ್ಕೆಲ್ಲ ಅವಕಾಶ?

  • ಅಗತ್ಯ ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವಾ ಯೋಜನೆಗಳು: ಮೆಟ್ರೋ, ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ, ರಕ್ಷಣಾ, ಆರೋಗ್ಯ ರಕ್ಷಣೆ, ನೈರ್ಮಲ್ಯ ಯೋಜನೆಗಳು.
  • ಕಟ್ಟುನಿಟ್ಟಾದ ಧೂಳು ನಿಯಂತ್ರಣ ಮತ್ತು ತ್ಯಾಜ್ಯ ನಿರ್ವಹಣೆಯೊಂದಿಗೆ ನಿರ್ಣಾಯಕ ಯೋಜನೆಗಳಿಗೆ ನಿರ್ಮಾಣ ಕಾರ್ಯ.
  • ವಿನಾಯಿತಿ ಪಡೆದ ವಾಹನಗಳನ್ನು ಬಳಸುವ ಅಂಗವಿಕಲ ವ್ಯಕ್ತಿಗಳು.
  • ಸಾರ್ವಜನಿಕ ಸಾರಿಗೆಗಳ ಬಳಕೆ ಮತ್ತು 5 ನೇ ತರಗತಿಯವರೆಗೆ ಹೈಬ್ರಿಡ್/ಆನ್‌ಲೈನ್ ಶಾಲಾ ತರಗತಿಗಳು

ಜಿಆರ್‌ಎಪಿ-IIIರ ಅಡಿಯಲ್ಲಿ, ಮಣ್ಣಿನ ಕೆಲಸ, ಪೈಲಿಂಗ್, ತೆರೆದ ಕಂದಕ ನಿರ್ಮಾಣ, ವೆಲ್ಡಿಂಗ್, ಪೇಂಟಿಂಗ್, ಪ್ಲಾಸ್ಟರಿಂಗ್, ಟೈಲ್ ಅಥವಾ ನೆಲಹಾಸು ಕೆಲಸ ಮತ್ತು ರೆಡಿ-ಮಿಕ್ಸ್ ಕಾಂಕ್ರೀಟ್ (ಆರ್‌ಎಂಸಿ) ಸ್ಥಾವರಗಳ ಕಾರ್ಯಾಚರಣೆ ಸೇರಿದಂತೆ ಎಲ್ಲಾ ಅನಿವಾರ್ಯವಲ್ಲದ ನಿರ್ಮಾಣ ಮತ್ತು ಕೆಡವುವ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಸಿಮೆಂಟ್, ಮರಳು ಮತ್ತು ಹಾರುಬೂದಿಯಂತಹ ವಸ್ತುಗಳ ಸಾಗಣೆಯನ್ನು ನಿರ್ಬಂಧಿಸಲಾಗಿದೆ. ಅನುಮೋದಿಸದ ಇಂಧನಗಳನ್ನು ಬಳಸುವ ಕೈಗಾರಿಕೆಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸಲಾಗಿದೆ. ಕಲ್ಲು ಪುಡಿ ಮಾಡುವ ಯಂತ್ರಗಳು ಮತ್ತು ಗಣಿಗಾರಿಕೆ ಚಟುವಟಿಕೆಗಳನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ.

ದೆಹಲಿ ಮತ್ತು ನೆರೆಯ ಎನ್‌ಸಿಆರ್‌ ಜಿಲ್ಲೆಗಳಾದ ಗುರುಗ್ರಾಮ, ಫರಿದಾಬಾದ್, ಗಾಝಿಯಾಬಾದ್ ಮತ್ತು ಗೌತಮ್ ಬುದ್ಧ ನಗರಗಳಲ್ಲಿ ಬಿಎಸ್‌-III ಪೆಟ್ರೋಲ್ ಮತ್ತು ಬಿಎಸ್‌-IV ಡೀಸೆಲ್ ನಾಲ್ಕು ಚಕ್ರಗಳ ವಾಹನಗಳ ಬಳಕೆಯನ್ನು ನಿಷೇಧಿಸಲಾಗಿದೆ. ಅಂಗವಿಕಲ ವ್ಯಕ್ತಿಗಳಿಗೆ ವಿನಾಯಿತಿ ನೀಡಲಾಗಿದೆ.

ಅನಿವಾರ್ಯವಲ್ಲದ ಡೀಸೆಲ್ ಚಾಲಿತ ಮಧ್ಯಮ ಸರಕು ವಾಹನಗಳು ಮತ್ತು ಸಿಎನ್‌ಜಿ, ವಿದ್ಯುತ್ ಅಥವಾ ಬಿಎಸ್-VI ಮಾನದಂಡಗಳಲ್ಲಿ ಓಡದ ಅಂತರರಾಜ್ಯ ಡೀಸೆಲ್ ಬಸ್‌ಗಳು ಕೂಡ ರಾಜಧಾನಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಭಾರೀ ದಂಡವನ್ನು ತಪ್ಪಿಸಲು ನಾಗರಿಕರು ತ್ಯಾಜ್ಯವನ್ನು ಬಯಲಿನಲ್ಲಿ ಸುಡುವುದನ್ನು ತಪ್ಪಿಸಬೇಕು, ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು ಮತ್ತು ವಾಹನಗಳು ಮಾನ್ಯ ಪಿಯುಸಿ ಪ್ರಮಾಣಪತ್ರಗಳನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ದೆಹಲಿಯ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬುಧವಾರ (ನ.12) ಬೆಳಿಗ್ಗೆ 9 ಗಂಟೆಗೆ 414 ಆಗಿದ್ದು, ಬಹು ಮೇಲ್ವಿಚಾರಣಾ ಕೇಂದ್ರಗಳಲ್ಲಿ 400 ಅಂಕಗಳನ್ನು ದಾಟಿದೆ.

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...