Homeಮುಖಪುಟಅತ್ಯಂತ 'ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

ಅತ್ಯಂತ ‘ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ಸೋಮವಾರ (ಡಿಸೆಂಬರ್ 15) ‘ಅತ್ಯಂತ ಅಪಾಯಕಾರಿ’ (Severe Category)ಮಟ್ಟ ತಲುಪಿದೆ. ಸಂಪೂರ್ಣ ನಗರ ದಟ್ಟವಾದ ಹೊಗೆಯಿಂದ (ಮಂಜು ಮತ್ತು ಧೂಳಿನ ಪದರ) ಅವೃತ್ತವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 498ಕ್ಕೆ ತಲುಪಿದೆ.

ನಗರದ 40 ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರಗಳ ಪೈಕಿ 38 ‘ಗಂಭೀರ’ ವಾಯು ಗುಣಮಟ್ಟವನ್ನು ವರದಿ ಮಾಡಿದರೆ, ಎರಡು ಕೇಂದ್ರಗಳು ‘ಅತ್ಯಂತ ಕಳಪೆ’ ಮಟ್ಟವನ್ನು ದಾಖಲಿಸಿವೆ. ಜಹಾಂಗೀರ್‌ಪುರಿ ನಗರದ ಅತ್ಯಂತ ಕಲುಷಿತ ಪ್ರದೇಶ ಎಂದು ದಾಖಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, 401 ರಿಂದ 500ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಗಂಭೀರ’ ಎಂದು ವರ್ಗೀಕರಿಸಲಾಗಿದ್ದು, ಇದು ದೊಡ್ಡ ಮಟ್ಟದಲ್ಲಿ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ.

ಭಾನುವಾರ ನಗರದ ಎಕ್ಯೂಐ 461ಕ್ಕೆ ಏರಿತ್ತು, ಇಂದು (ಸೋಮವಾರ) ಅದನ್ನೂ ಮೀರಿ 500 ಗಡಿ ತಲುಪಿದೆ. ಇದು ಈವರೆಗಿನ ಅತ್ಯಂತ ಕಲುಷಿತ ವಾಯುಗುಣಮಟ್ಟ ಎಂದು ವರದಿಯಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಮಾಲಿನ್ಯದ ಮಟ್ಟ ಮತ್ತಷ್ಟು ಉಲ್ಬಣಗೊಂಡಿದೆ.

ಕಡಿಮೆ ಮಟ್ಟದ ಗಾಳಿಯ ವೇಗ ಮತ್ತು ಕಡಿಮೆ ತಾಪಮಾನದಿಂದಾಗಿ ಮಾಲಿನ್ಯಕಾರಕಗಳು ಚದುರದೆ ಭೂಮಿಗೆ ಹತ್ತಿರವೇ ಬಂಧಿತವಾಗಿವೆ. ಇದರಿಂದಾಗಿ ದಟ್ಟವಾದ ಮಂಜು ಮತ್ತು ಧೂಳಿನ ಪದರ ನಗರವನ್ನು ಆವರಿಸಿದೆ. ವಜೀರ್‌ಪುರ್ ಮೇಲ್ವಿಚಾರಣಾ ಕೇಂದ್ರವು ದಿನದಲ್ಲಿ ಗರಿಷ್ಠ ಸಾಧ್ಯವಾದ ಎಕ್ಯೂಐ ಮಟ್ಟ 500 ದಾಖಲಿಸಿದೆ. ಇದರ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದತ್ತಾಂಶವನ್ನು ದಾಖಲು ಮಾಡುವುದಿಲ್ಲ. ಇದು ಅತ್ಯಂತ ಅಪಾಯಕಾರಿ ಸ್ಥಿತಿಯನ್ನು ಸೂಚಿಸುತ್ತದೆ. ಮಾಲಿನ್ಯಕಾರಕಗಳು ತೀವ್ರವಾಗಿ ಕೇಂದ್ರೀಕೃತವಾಗಿರುವುದನ್ನು ತೋರಿಸುತ್ತದೆ.

ನಗರದ ಒಟ್ಟು ಎಕ್ಯೂಐ ಸುಮಾರು 493-498 ತಲುಪಿ ‘ತೀವ್ರ ಗಂಭೀರ’ ಮಟ್ಟದಲ್ಲಿದೆ. ರೋಹಿಣಿ, ಆಶೋಕ್ ವಿಹಾರ್, ಜಹಾಂಗೀರ್‌ಪುರಿಯಂತಹ ಪ್ರದೇಶಗಳಲ್ಲಿ ಕೂಡ ವಾಯುಗುಣಮಟ್ಟ 500ಕ್ಕೆ ಹತ್ತಿರ ತಲುಪಿದೆ.

ವಾಯು ಗುಣಮಟ್ಟದ ಪೂರ್ವ ಎಚ್ಚರಿಕೆ ವ್ಯವಸ್ಥೆ (ಎಕ್ಯೂಇಡಬ್ಲ್ಯುಎಸ್‌) ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟವು ಸದ್ಯಕ್ಕೆ ‘ಗಂಭೀರ ಮಟ್ಟದಲ್ಲೇ’ ಉಳಿಯುವ ಸಾಧ್ಯತೆ ಇದೆ. ಮುಂದಿನ ಆರು ದಿನಗಳಲ್ಲಿ ಪರಿಸ್ಥಿತಿ ತುಂಬಾ ಕಳಪೆಯಾಗಿರಲಿದೆ.

ಹವಾಮಾನ ವೈಪರೀತ್ಯದಿಂದಾಗಿ, ಸೋಮವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣವು ವಿಮಾನ ಕಾರ್ಯಾಚರಣೆಗಳಲ್ಲಿ ಸಂಭವನೀಯ ವಿಳಂಬದ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಿದೆ.

ದಟ್ಟವಾದ ಮಂಜು ಮತ್ತು ಧೂಳಿನಿಂದ ಕೂಡಿದ ಹೊಗೆ ನಗರವನ್ನು ಆವರಿಸಿದ್ದು, ಅನೇಕ ಕಡೆಗಳಲ್ಲಿ ಗೋಚರತೆ ಶೂನ್ಯಕ್ಕೆ ಇಳಿದಿದೆ. ಇಂಡಿಯಾ ಗೇಟ್, ಕರ್ತವ್ಯ ಪಥ, ಅಕ್ಷರಧಾಮ, ಬರಾಪುಲ್ಲಾ ಫ್ಲೈಓವರ್ ಸಂಪೂರ್ಣ ಮರೆಯಾಗಿವೆ. ಇದರಿಂದ ರಸ್ತೆ ಸಂಚಾರ ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಅನೇಕ ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇಂಡಿಗೋ ಮತ್ತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ವಿಮಾನ ಸ್ಥಿತಿ ಪರಿಶೀಲಿಸುವಂತೆ ಸಲಹೆ ನೀಡಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಜಿಆರ್‌ಎಪಿ ಹಂತ 4 ಜಾರಿಗೊಳಿಸಲಾಗಿದೆ. ಇದರಡಿ ಹೆಚ್ಚಿನ ನಿರ್ಮಾಣ/ಧ್ವಂಸ ಕಾರ್ಯಗಳನ್ನು ನಿಷೇಧಿಸಲಾಗಿದೆ. ಅಗತ್ಯವಲ್ಲದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳು 11ರವರೆಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ.

ಕಲುಷಿತ ಗಾಳಿ ಹಿನ್ನೆಲೆ ಮಕ್ಕಳು ಮತ್ತು ಹಿರಿಯರು, ಉಸಿರಾಟ ಸಮಸ್ಯೆಗಳುಳ್ಳವರು ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯೊಳಗೆ ಇರುವಂತೆ ಮತ್ತು ಮಾಸ್ಕ್/ಏರ್ ಪ್ಯೂರಿಫೈಯರ್ ಬಳಸುವಂತೆ ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...