Homeಮುಖಪುಟಅತ್ಯಂತ 'ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

ಅತ್ಯಂತ ‘ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ಸೋಮವಾರ (ಡಿಸೆಂಬರ್ 15) ‘ಅತ್ಯಂತ ಅಪಾಯಕಾರಿ’ (Severe Category)ಮಟ್ಟ ತಲುಪಿದೆ. ಸಂಪೂರ್ಣ ನಗರ ದಟ್ಟವಾದ ಹೊಗೆಯಿಂದ (ಮಂಜು ಮತ್ತು ಧೂಳಿನ ಪದರ) ಅವೃತ್ತವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 498ಕ್ಕೆ ತಲುಪಿದೆ.

ನಗರದ 40 ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರಗಳ ಪೈಕಿ 38 ‘ಗಂಭೀರ’ ವಾಯು ಗುಣಮಟ್ಟವನ್ನು ವರದಿ ಮಾಡಿದರೆ, ಎರಡು ಕೇಂದ್ರಗಳು ‘ಅತ್ಯಂತ ಕಳಪೆ’ ಮಟ್ಟವನ್ನು ದಾಖಲಿಸಿವೆ. ಜಹಾಂಗೀರ್‌ಪುರಿ ನಗರದ ಅತ್ಯಂತ ಕಲುಷಿತ ಪ್ರದೇಶ ಎಂದು ದಾಖಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, 401 ರಿಂದ 500ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಗಂಭೀರ’ ಎಂದು ವರ್ಗೀಕರಿಸಲಾಗಿದ್ದು, ಇದು ದೊಡ್ಡ ಮಟ್ಟದಲ್ಲಿ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ.

ಭಾನುವಾರ ನಗರದ ಎಕ್ಯೂಐ 461ಕ್ಕೆ ಏರಿತ್ತು, ಇಂದು (ಸೋಮವಾರ) ಅದನ್ನೂ ಮೀರಿ 500 ಗಡಿ ತಲುಪಿದೆ. ಇದು ಈವರೆಗಿನ ಅತ್ಯಂತ ಕಲುಷಿತ ವಾಯುಗುಣಮಟ್ಟ ಎಂದು ವರದಿಯಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಮಾಲಿನ್ಯದ ಮಟ್ಟ ಮತ್ತಷ್ಟು ಉಲ್ಬಣಗೊಂಡಿದೆ.

ಕಡಿಮೆ ಮಟ್ಟದ ಗಾಳಿಯ ವೇಗ ಮತ್ತು ಕಡಿಮೆ ತಾಪಮಾನದಿಂದಾಗಿ ಮಾಲಿನ್ಯಕಾರಕಗಳು ಚದುರದೆ ಭೂಮಿಗೆ ಹತ್ತಿರವೇ ಬಂಧಿತವಾಗಿವೆ. ಇದರಿಂದಾಗಿ ದಟ್ಟವಾದ ಮಂಜು ಮತ್ತು ಧೂಳಿನ ಪದರ ನಗರವನ್ನು ಆವರಿಸಿದೆ. ವಜೀರ್‌ಪುರ್ ಮೇಲ್ವಿಚಾರಣಾ ಕೇಂದ್ರವು ದಿನದಲ್ಲಿ ಗರಿಷ್ಠ ಸಾಧ್ಯವಾದ ಎಕ್ಯೂಐ ಮಟ್ಟ 500 ದಾಖಲಿಸಿದೆ. ಇದರ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದತ್ತಾಂಶವನ್ನು ದಾಖಲು ಮಾಡುವುದಿಲ್ಲ. ಇದು ಅತ್ಯಂತ ಅಪಾಯಕಾರಿ ಸ್ಥಿತಿಯನ್ನು ಸೂಚಿಸುತ್ತದೆ. ಮಾಲಿನ್ಯಕಾರಕಗಳು ತೀವ್ರವಾಗಿ ಕೇಂದ್ರೀಕೃತವಾಗಿರುವುದನ್ನು ತೋರಿಸುತ್ತದೆ.

ನಗರದ ಒಟ್ಟು ಎಕ್ಯೂಐ ಸುಮಾರು 493-498 ತಲುಪಿ ‘ತೀವ್ರ ಗಂಭೀರ’ ಮಟ್ಟದಲ್ಲಿದೆ. ರೋಹಿಣಿ, ಆಶೋಕ್ ವಿಹಾರ್, ಜಹಾಂಗೀರ್‌ಪುರಿಯಂತಹ ಪ್ರದೇಶಗಳಲ್ಲಿ ಕೂಡ ವಾಯುಗುಣಮಟ್ಟ 500ಕ್ಕೆ ಹತ್ತಿರ ತಲುಪಿದೆ.

ವಾಯು ಗುಣಮಟ್ಟದ ಪೂರ್ವ ಎಚ್ಚರಿಕೆ ವ್ಯವಸ್ಥೆ (ಎಕ್ಯೂಇಡಬ್ಲ್ಯುಎಸ್‌) ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟವು ಸದ್ಯಕ್ಕೆ ‘ಗಂಭೀರ ಮಟ್ಟದಲ್ಲೇ’ ಉಳಿಯುವ ಸಾಧ್ಯತೆ ಇದೆ. ಮುಂದಿನ ಆರು ದಿನಗಳಲ್ಲಿ ಪರಿಸ್ಥಿತಿ ತುಂಬಾ ಕಳಪೆಯಾಗಿರಲಿದೆ.

ಹವಾಮಾನ ವೈಪರೀತ್ಯದಿಂದಾಗಿ, ಸೋಮವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣವು ವಿಮಾನ ಕಾರ್ಯಾಚರಣೆಗಳಲ್ಲಿ ಸಂಭವನೀಯ ವಿಳಂಬದ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಿದೆ.

ದಟ್ಟವಾದ ಮಂಜು ಮತ್ತು ಧೂಳಿನಿಂದ ಕೂಡಿದ ಹೊಗೆ ನಗರವನ್ನು ಆವರಿಸಿದ್ದು, ಅನೇಕ ಕಡೆಗಳಲ್ಲಿ ಗೋಚರತೆ ಶೂನ್ಯಕ್ಕೆ ಇಳಿದಿದೆ. ಇಂಡಿಯಾ ಗೇಟ್, ಕರ್ತವ್ಯ ಪಥ, ಅಕ್ಷರಧಾಮ, ಬರಾಪುಲ್ಲಾ ಫ್ಲೈಓವರ್ ಸಂಪೂರ್ಣ ಮರೆಯಾಗಿವೆ. ಇದರಿಂದ ರಸ್ತೆ ಸಂಚಾರ ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಅನೇಕ ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇಂಡಿಗೋ ಮತ್ತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ವಿಮಾನ ಸ್ಥಿತಿ ಪರಿಶೀಲಿಸುವಂತೆ ಸಲಹೆ ನೀಡಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಜಿಆರ್‌ಎಪಿ ಹಂತ 4 ಜಾರಿಗೊಳಿಸಲಾಗಿದೆ. ಇದರಡಿ ಹೆಚ್ಚಿನ ನಿರ್ಮಾಣ/ಧ್ವಂಸ ಕಾರ್ಯಗಳನ್ನು ನಿಷೇಧಿಸಲಾಗಿದೆ. ಅಗತ್ಯವಲ್ಲದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳು 11ರವರೆಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ.

ಕಲುಷಿತ ಗಾಳಿ ಹಿನ್ನೆಲೆ ಮಕ್ಕಳು ಮತ್ತು ಹಿರಿಯರು, ಉಸಿರಾಟ ಸಮಸ್ಯೆಗಳುಳ್ಳವರು ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯೊಳಗೆ ಇರುವಂತೆ ಮತ್ತು ಮಾಸ್ಕ್/ಏರ್ ಪ್ಯೂರಿಫೈಯರ್ ಬಳಸುವಂತೆ ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...